ನೀರವ್ ಪ್ರಕರಣ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿ ಮರಳಿ ಮಾತೃ ಕೇಡರ್ಗೆ
ಬೆಂಗಳೂರು, ಮೇ 25: ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಂತಹ ಪ್ರಭಾವಿಗಳು ಭಾಗಿಯಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಜಂಟಿ ನಿರ್ದೇಶಕ ರಾಜೀವ್ ಸಿಂಗ್ ಅವರನ್ನು ಅವಧಿಗೂ ಮುನ್ನವೇ ಮಾತೃ ಕೇಂದ್ರಕ್ಕೆ ಮರಳಿಸಲಾಗಿದೆ.
ಮೋದಿ ಮತ್ತು ಅವರ ಸಂಬಂಧಿ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐ ಸಿದ್ಧತೆ ನಡೆಸಿರುವಾಗಲೇ ಈ ಕ್ರಮ ಕೈಗೊಳ್ಳಲಾಗಿದೆ.
ರಾಜೀವ್ ಸಿಂಗ್ ಅವರನ್ನು ಅವರ ಮಾತೃ ಕೇಂದ್ರ ತ್ರಿಪುರಾಕ್ಕೆ ವರ್ಗಾಯಿಸಲಾಗಿದೆ. ಅಲ್ಲದೆ, ಸಿಬಿಐನ ಇನ್ನೂ ಮೂವರನ್ನು ಅವರ ಮಾತೃ ಕೇಂದ್ರಗಳಿಗೆ ಮರಳಿಸಲಾಗಿದೆ.

ಸಿಬಿಐ ಜಂಟಿ ನಿರ್ದೇಶಕ (ಎಸ್ಟಿಎಫ್) ಮತ್ತು ವಿಶೇಷ ಅಪರಾಧ ವಿಭಾಗದ ನೀನಾ ಸಿಂಗ್, ಡಿಐಜಿ ಅನೀಶ್ ಪ್ರಸಾದ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಆರ್. ಗೋಪಾಲಕೃಷ್ಣ ರಾವ್ ಅವರನ್ನು ಮಾತೃಕೇಂದ್ರಕ್ಕೆ ವಾಪಸಾಗಲಿದ್ದಾರೆ.
ರಾಜಸ್ಥಾನ ಕೇಡರ್ನ 1989ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರೆ, ಉಳಿದ ಎಲ್ಲ ಐಪಿಎಸ್ ಅಧಿಕಾರಿಗಳು ತ್ರಿಪುರಾ ಕೇಡರ್ನವರು.
ರಾಜೀವ್ ಸಿಂಗ್ ಅವರು 1993ನೇ ಬ್ಯಾಚ್ನವರಾಗಿದ್ದರೆ, ಅನೀಶ್ ಪ್ರಸಾದ್ 2003 ಮತ್ತು ಗೋಪಾಲಕೃಷ್ಣ ರಾವ್ ಅವರು 2005ನೇ ಬ್ಯಾಚ್ನ ಅಧಿಕಾರಿಯಾಗಿದ್ದಾರೆ.
ಆದೇಶದ ಪ್ರಕಾರ ನೀನಾ ಸಿಂಗ್, ರಾಜೀವ್ ಸಿಂಗ್ ಮತ್ತು ಗೋಪಾಲಕೃಷ್ಣ ರಾವ್ ಅವರು ತಮ್ಮ ಮಾತೃ ಕೇಡರ್ಗೆ ತಕ್ಷಣದಿಂದ ಮರಳುವಂತೆ ಹಾಗೂ ಪ್ರಸಾದ್ ಅವರು ಜೂನ್ 2ರಂದು ಮರಳುವಂತೆ ಆದೇಶಿಸಲಾಗಿದೆ.
ಈ ಅಧಿಕಾರಿಗಳನ್ನು ಅವಧಿಗೆ ಮುನ್ನವೇ ಮಾತೃ ಕೇಡರ್ಗೆ ಕಳುಹಿಸುವಂತೆ ಸಂಬಂಧಿತ ರಾಜ್ಯ ಸರ್ಕಾರಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಿಬಿಐನಲ್ಲಿ ಕೆಲಸ ಮಾಡುತ್ತಿರುವ ಈ ಅಧಿಕಾರಿಗಳನ್ನು ಆಯಾ ಮಾತೃ ಕೇಡರ್ಗೆ ಮರಳಿಸಲು ಅನುಮೋದನೆ ನೀಡಲಾಗಿದೆ ಎಂದು ಸಂಸ್ಥೆ ತನ್ನ ಆದೇಶದಲ್ಲಿ ತಿಳಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications