Sameer Wankhede: ಆರ್ಯನ್ ಖಾನ್ ಪ್ರಕರಣ: ಸಮೀರ್ ವಾಂಖೆಡೆ ನಿವಾಸದ ಮೇಲೆ 13 ಗಂಟೆ ಸಿಬಿಐ ದಾಳಿ
ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ರನ್ನು ಸುಮಾರು ಎರಡು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಬಂಧನ ಮಾಡಿದ್ದ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿಯನ್ನು ನಡೆಸಿದೆ. ಶುಕ್ರವಾರವಷ್ಟೆ ಅಧಿಕಾರಿಯ ವಿರುದ್ಧ ಸಿಬಿಐ ಭ್ರಷ್ಟಾಚಾರದ ಪ್ರಕರಣವನ್ನು ದಾಖಲು ಮಾಡಿತ್ತು.
ಆರ್ಯನ್ ಖಾನ್ ಪ್ರಕರಣದಲ್ಲಿ ಪ್ರಮುಖ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ಸೇರಿದಂತೆ ಒಟ್ಟಾಗಿ ಮೂವರು ಸರ್ಕಾರಿ ಅಧಿಕಾರಿಗಳ ಮೇಲೆ ಸಿಬಿಐ ಪ್ರಕರಣವನ್ನು ದಾಖಲು ಮಾಡಿದೆ. ಹಾಗೆಯೇ ಒಟ್ಟಾಗಿ 29 ಸ್ಥಳಗಳ ಮೇಲೆ ದಾಳಿಯನ್ನು ನಡೆಸಿದೆ. ಈ ಪೈಕಿ ಸಮೀರ್ ವಾಂಖೆಡೆ ನಿವಾಸದ ಮೇಲೆ ದಾಳಿ ನಡೆಸಿರುವ ಸಿಬಿಐ 13 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿದೆ.

ಶನಿವಾರ ಮುಂಜಾನೆವರೆಗೂ ಶೋಧ ಕಾರ್ಯಾಚರಣೆ
ಶುಕ್ರವಾರ ಸಮೀರ್ ವಾಂಖೆಡೆ ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದ್ದು, ಶನಿವಾರ ಮುಂಜಾನೆ ಸುಮಾರು 5:30 ಗಂಟೆಯವರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಅಂದರೆ ಸುಮಾರು 13 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆ ಪೂರ್ಣವಾದ ಬಳಿಕ ಸಮೀರ್ ವಾಂಖೆಡೆ ನಿವಾಸದಿಂದ ಸುಮಾರು 10-12 ಅಧಿಕಾರಿಗಳು ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ನಿವಾಸದಿಂದ ಹೊರನಡೆದಿದ್ದಾರೆ.
ಲಭ್ಯವಾದ ಮಾಹಿತಿ ಪ್ರಕಾರ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧದ ಡ್ರಗ್ಸ್ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಸುಮಾರು 25 ಕೋಟಿ ರೂಪಾಯಿ ಲಂಚವನ್ನು ಪಡೆದಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಮಂದಿಯ ಮೇಲೆ ಸಿಬಿಐ ದೂರು ದಾಖಲು ಮಾಡಿಕೊಂಡಿದೆ. ಈ ಪೈಕಿ ಸಮೀರ್ ವಾಂಖೆಡೆ ಕೂಡಾ ಒಬ್ಬರಾಗಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಯು ಸಮೀರ್ ವಾಂಖೆಡೆಯ ಮುಂಬೈ ನಿವಾಸ ಸೇರಿದಂತೆ ದೆಹಲಿ, ರಾಂಚಿ, ಕಾನ್ಪುರದಲ್ಲಿ ಒಟ್ಟಾಗಿ 29 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆ. 2021ರ ಅಕ್ಟೋಬರ್ನಲ್ಲಿ ಸಮೀರ್ ವಾಂಖೆಡೆ ನೇತೃತ್ವದ ತಂಡವು ಮುಂಬೈನ ಅಂತಾರಾಷ್ಟ್ರೀಯ ಕ್ರೂಸ್ ಟರ್ಮಿನಲ್ನಲ್ಲಿ ಕಾರ್ಡೆಲಿಯಾ ಕ್ರೂಸ್ ಮೇಲೆ ದಾಳಿ ನಡೆಸಿದೆ. ಈ ಘಟನೆಯ ಬಳಿಕ ಆರ್ಯನ್ ಖಾನ್ ಸೇರಿದಂತೆ ಹಲವಾರು ಮಂದಿಯನ್ನು ಬಂಧನ ಮಾಡಲಾಗಿದೆ.
ಇದಾದ ಬಳಿಕ ಆರ್ಯನ್ ಖಾನ್ ಸುಮಾರು 26 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದರು. ಅದೇ ಸಂದರ್ಭದಲ್ಲಿ ಆರ್ಯನ್ ಖಾನ್ರನ್ನು ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಸರಿಯಾದ ಸಾಕ್ಷಿಗಳು ಇಲ್ಲದ ಕಾರಣದಿಂದಾಗಿ ಕೋರ್ಟ್ ಅಕ್ಟೋಬರ್ 28, 2021ರಲ್ಲಿ ಆರ್ಯನ್ ಖಾನ್ಗೆ ಜಾಮೀನು ಮಂಜೂರು ಮಾಡಿದೆ. ಇದೇ ಸಂದರ್ಭದಲ್ಲಿ ಅರ್ಬಾಸ್ ಮರ್ಚೆಂಟ್ರನ್ನು ಕೂಡಾ ಬಂಧನ ಮಾಡಲಾಗಿದೆ.
ಅಕ್ಟೋಬರ್ 2, 2021ರಲ್ಲಿ ಎನ್ಸಿಬಿ ರಹಸ್ಯವಾಗಿ ಹೋಗಿ ಮುಂಬೈನಿಂದ ಗೋವಾಗೆ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದೆ. ಏಜೆನ್ಸಿ ಕೊಕೇನ್, ಚರಸ್, MDMA ಮಾತ್ರೆಗಳು ಮತ್ತು MD ಅನ್ನು ದಾಳಿಯ ವೇಳೆ ವಶಕ್ಕೆ ತೆಗೆದುಕೊಂಡಿದೆ. ದಾಳಿಯ ಬಳಿಕ ಆರ್ಯನ್ ಖಾನ್ ಅವರನ್ನ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರೊಂದಿಗೆ ಬಂಧಿಸಲಾಯಿತು. 20 ಜನರನ್ನು ಬಂಧಿಸಿದ ಪ್ರಕರಣದಲ್ಲಿ ಆರ್ಯನ್ 'ಆರೋಪಿ ನಂಬರ್ 1' ಆಗಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications