ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಪ್ರಗತಿ ಬಗ್ಗೆ ಕೊನೆಗೂ ಸಿಬಿಐ ಮಾಹಿತಿ
ನವದೆಹಲಿ, ಡಿಸೆಂಬರ್ 31: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಸುಮಾರು 145 ದಿನಗಳಿಂದ ತನಿಖೆ ನಡೆಸುತ್ತಿರುವ ಸಿಬಿಐ, ಎಲ್ಲ ಆಯಾಮಗಳಲ್ಲಿಯೂ ಪರಿಶೀಲನೆ ನಡೆಸುತ್ತಿದ್ದು, ಯಾವುದನ್ನೂ ತಳ್ಳಿಹಾಕಿಲ್ಲ ಎಂದು ಹೇಳಿದೆ.
ಸುಶಾಂತ್ ಸಾವಿನ ತನಿಖೆಯ ಪ್ರಗತಿ ಕುರಿತಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಇದನ್ನು ಪಿಎಂಒ ಸಿಬಿಐಗೆ ರವಾನಿಸಿತ್ತು. ಸುಬ್ರಮಣಿಯನ್ ಸ್ವಾಮಿ ಅವರಿಗೆ ಪ್ರತಿಕ್ರಿಯೆ ನೀಡಿರುವ ತನಿಖಾ ಸಂಸ್ಥೆ, 'ಸಿಬಿಐ ಸವಿಸ್ತಾರವಾಗಿ ಮತ್ತು ಇತ್ತೀಚಿನ ವೈಜ್ಞಾನಿಕ ತಂತ್ರಜ್ಞಾನಗಳನ್ನು ಬಳಸಿ ವೃತ್ತಿಪರ ತನಿಖೆ ನಡೆಸುತ್ತಿದೆ. ತನಿಖೆಯ ಸಂದರ್ಭದಲ್ಲಿ ಎಲ್ಲ ಆಯಾಮಗಳನ್ನೂ ನೋಡಲಾಗುತ್ತಿದೆ. ಇದುವರೆಗೂ ಯಾವುದೇ ಅಂಶವನ್ನು ನಿರಾಕರಿಸಿಲ್ಲ' ಎಂದು ತಿಳಿಸಿದೆ.
'ತನಿಖೆ ವೇಳೆ ಡಿಜಿಟಲ್ ಉಪಕರಣಗಳಲ್ಲಿ ಇರುವ ಸೂಕ್ತ ದತ್ತಾಂಶಗಳನ್ನು ತೆಗೆದು ಅವುಗಳನ್ನು ವಿಶ್ಲೇಷಣೆಗೆ ಒಳಪಡಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲ್ ಟವರ್ ಸ್ಥಳಗಳಲ್ಲಿನ ದತ್ತಾಂಶಗಳನ್ನು ವಿಶ್ಲೇಷಿಸಲು ಇತ್ತೀಚಿನ ಸಾಫ್ಟ್ವೇರ್ ಸೇರಿದಂತೆ ಅತ್ಯಾಧುನಿಕ ಮೊಬೈಲ್ ಫಾರೆನ್ಸಿಕ್ ಸಾಧನವನ್ನು ಬಳಸಲಾಗಿದೆ' ಎಂದು ವಿವರಿಸಿದೆ.

'ಸಂದರ್ಭವನ್ನು ದೂರುದಾರರು ಮತ್ತು ಅವರ ಕುಟುಂಬದವರು ಹಾಗೂ ಇತರೆ ಅವಲಂಬಿತ ಮೂಲಗಳು ಎತ್ತಿರುವ ವಿಚಾರಗಳನ್ನು ಅರ್ಥ ಮಾಡಿಕೊಳ್ಳಲು ಎಲ್ಲ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತೀವ್ರ ಹಾಗೂ ಕೂಲಂಕಷ ತನಿಖೆಯನ್ನು ನಡೆಸಲಾಗಿದೆ. ಅಲಿಗಡ, ಫರೀದಾಬಾದ್, ಹೈದರಾಬಾದ್, ಮುಂಬೈ, ಮಣೇಸರ್ ಮತ್ತು ಪಟ್ನಾ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೂ ಹಿರಿಯ ಅಧಿಕಾರಿಗಳ ಜತೆಗೆ ತನಿಖಾ ತಂಡ ಭೇಟಿ ನೀಡಿದೆ' ಎಂದು ಹೇಳಿದೆ.
ಅಕ್ಟೋಬರ್ನಲ್ಲಿ ಸಿಬಿಐಗೆ ತನ್ನ ಅಭಿಪ್ರಾಯ ತಿಳಿಸಿದ್ದ ಏಮ್ಸ್ನ ವೈದ್ಯರ ತಂಡ, ಸುಶಾಂತ್ ಅವರದ್ದು ಕೊಲೆಯಲ್ಲ ಮತ್ತು ಅದು ಆತ್ಮಹತ್ಯೆ ಪ್ರಕರಣ ಎಂದಿತ್ತು. ಸುಶಾಂತ್ ಕುಟುಂಬ ಹಾಗೂ ವೈದ್ಯರ ಆರೋಪದಂತೆ ಅವರಿಗೆ ವಿಷ ಪ್ರಾಶನ ಮಾಡಿರುವ ಅಥವಾ ಕತ್ತು ಹಿಸುಕಿರುವ ಸಾಧ್ಯತೆಗಳನ್ನು ತಳ್ಳಿಹಾಕಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications