ಅಗಸ್ಟಾವೆಸ್ಟ್ಲ್ಯಾಂಡ್ ಹಗರಣ: 5 ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೋರಿದ ಸಿಬಿಐ
ನವದೆಹಲಿ, ಸೆಪ್ಟೆಂಬರ್ 11: ಅತಿಗಣ್ಯರ ಐಷಾರಾಮಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಲೆಕ್ಕಪರಿಶೋಧಕ ನಿಯಂತ್ರಕ ಅಧಿಕಾರಿ ಶಶಿ ಕಾಂತ್ ಶರ್ಮಾ ಹಾಗೂ ಇತರೆ ನಾಲ್ವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಸಿಬಿಐ ಕೋರಿದೆ.
ಸುಮಾರು 3,600 ಕೋಟಿ ರೂ. ಮೊತ್ತದ ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಶರ್ಮಾ ಅವರಲ್ಲದೆ, ಮಾಜಿ ಏರ್ ವೈಸ್ ಮಾರ್ಷಲ್ ಜಸ್ಬೀರ್ ಸಿಂಗ್ ಪಣೇಸರ್ ಅವರನ್ನು ಕೂಡ ವಿಚಾರಣೆ ನಡೆಸಲು ಸಿಬಿಐ ಅನುಮತಿ ಕೇಳಿದೆ. ಇದರ ಜತೆಗೆ ಐಎಎಫ್ ಅಧಿಕಾರಿಗಳಾದ ಡೆಪ್ಯುಟಿ ಚೀಫ್ ಟೆಸ್ಟ್ ಪೈಲಟ್ ಎಸ್.ಎ, ಕುಂಟೆ, ವಿಂಗ್ ಕಮಾಂಡರ್ ಥಾಮಸ್ ಮ್ಯಾಥ್ಯೂ ಹಾಗೂ ಎಕ್ಸ್ ಗ್ರೂಪ್ ಕ್ಯಾಪ್ಟನ್ ಎನ್. ಸಂತೋಷ್ ಅವರನ್ನು ವಿಚಾರಣೆಗೊಳಪಡಿಸಲು ಬಯಸಿದೆ.

ಯುಪಿಎ-2ರ ಅವಧಿಯಲ್ಲಿ ನಡೆದ ವಿವಿಐಪಿ ಹೆಲಿಕಾಪ್ಟರ್ ಒಪ್ಪಂದದಲ್ಲಿ ಖರೀದಿ ಪ್ರಕ್ರಿಯೆಯಲ್ಲಿ ಈ ಐವರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದರು ಮತ್ತು ಸಕ್ರಿಯವಾಗಿ ಭಾಗಿಯಾಗಿದ್ದರು ಎಂದು ಸಿಬಿಐ ಹೇಳಿದೆ. ಈ ಐವರು ಅಧಿಕಾರಿಗಳು ಮಾಡಿದ ಅವ್ಯವಹಾರದ ಕುರಿತು ಅಗತ್ಯ ಪುರಾವೆಗಳನ್ನು ರಕ್ಷಣಾ ಸಚಿವಾಲಯಕ್ಕೆ ಸಿಬಿಐ ಸಲ್ಲಿಸಿದೆ. ವಿಚಾರಣೆಗೆ ಅನುಮತಿ ಇನ್ನೂ ದೊರೆತಿಲ್ಲ ಎಂದು 'ದಿ ಎಕನಾಮಿಕ್ ಟೈಮ್ಸ್' ವರದಿ ಮಾಡಿದೆ.
ರಕ್ಷಣಾ ಸಚಿವಾಲಯ ಮತ್ತು ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯಿಂದ ವಿಚಾರಣೆಯ ಅನುಮತಿ ದೊರಕಿದ ಅಥವಾ ನಿರಾಕರಣೆಯಾದ ಬಳಿಕ ಪೂರಕ ದೋಷಾರೋಪ ಪಟ್ಟಿಯನ್ನು ತನಿಖಾ ಸಂಸ್ಥೆ ಸಲ್ಲಿಸುವ ಸಾಧ್ಯತೆ ಇದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications