ಕೇರಳದ ಸಹಕಾರಿ ಬ್ಯಾಂಕ್ ಗಳಿಂದ 226 ಕೋಟಿ ರು ವಶ!
ಮಲಪ್ಪುರಂ(ಕೇರಳ), ಡಿಸೆಂಬರ್ 23: ಮಲಪ್ಪುರಂ ಸೇರಿದಂತೆ ಕೇರಳದ ಅನೇಕ ಸಹಕಾರಿ ಬ್ಯಾಂಕು ಗಳ ಮೇಲೆ ನಡೆಸಲಾದ ಸಿಬಿಐ ದಾಳಿಯಲ್ಲಿ ಅಪಾರ ಪ್ರಮಾಣವಾದ ಅಕ್ರಮ ನಗದು ಪತ್ತೆಯಾಗಿದೆ. ಸರಿಯಾದ ದಾಖಲೆಗಳಿಲ್ಲದ ಅಕ್ರಮ ನಗದು ಜಪ್ತಿಮಾಡಿಕೊಳ್ಳಲಾಗಿದ್ದು, 226 ಕೋಟಿ ರುಗೂ ಅಧಿಕ ಮೊತ್ತ ಸಿಕ್ಕಿದೆ.
ನವೆಂಬರ್ 8ರ ನೋಟ್ ಬ್ಯಾನ್ ನಂತರ ಮೊದಲ ಐದು ದಿನಗಳ ಅವಧಿಯಲ್ಲೇ ಈ ಬ್ಯಾಂಕ್ನಲ್ಲಿ 169 ಕೋಟಿ ರೂ. ಹಳೆ ನೋಟುಗಳು ಠೇವಣಿ ಇಟ್ಟಿರುವ ಸಂಗತಿ ಪತ್ತೆಯಾಗಿದೆ. ನ.9 ರಿಂದ 14ರ ನಡುವೆ ರಾಜ್ಯದಲ್ಲಿರುವ 54 ಶಾಖೆಗಳಲ್ಲಿ ಈ ಮೊತ್ತದ ಹಣ ಪತ್ತೆಯಾಗಿದೆ. ಈ ಠೇವಣಿಗಳಿಗೆ ಸೂಕ್ತ ದಾಖಲೆಗಳು ಇಲ್ಲದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೊಲ್ಲಂ, ಮಲಪ್ಪುರಂ, ಕೋಯಿಕ್ಕೊಡ್, ಕಣ್ಣೂರ್, ತ್ರಿಸ್ಸೂರ್ ಜಿಲ್ಲೆಗಳ ಜಿಲ್ಲಾ ಸಹಕಾರಿ ಬ್ಯಾಂಕ್ ಗಳ (ಎಂಡಿಸಿಬಿ) ಮೇಲೆ ಹಠಾತ್ ದಾಳಿ ನಡೆಸಿದ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ರಹಿತ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಠೇವಣಿದಾರರಿಗೆ ಸಂಬಂಧಪಟ್ಟ ಎಲ್ಲ ದಾಖಲೆಪತ್ರಗಳನ್ನು ನೀಡುವಂತೆ ಸಿಬಿಐ ಅಧಿಕಾರಿಗಳು ಬ್ಯಾಂಕಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳದ ಸಹಕಾರ ಸಚಿವ ಕೆ ಸುರೇಂದ್ರನ್ ಅವರು, ಬ್ಯಾಂಕುಗಳ ಗೊಂದಲಮಯ ನಿಯಮದಿಂದಾಗಿ ಗ್ರಾಹಕರು ಸರಿಯಾದ ಕೆವೈಸಿ ಮಾಹಿತಿ ನೀಡಿಲ್ಲ, ಹೀಗಾಗಿ ಹೆಚ್ಚಿನ ಖಾತೆಗಳಲ್ಲಿನ ಮೊತ್ತಕ್ಕೆ ದಾಖಲೆಗಳಿಲ್ಲ ಎಂದಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications