ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಮುಂದೂಡಿಕೆ?
ದೆಹಲಿ ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಮೇ 24ರಂದು ಪ್ರಕಟಗೊಳ್ಳಬೇಕಿದ್ದ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶವನ್ನು ತಡೆಹಿಡಿಯುವ ಸಾಧ್ಯತೆಗಳಿವೆ.
ನವದೆಹಲಿ, ಮೇ 24: ಲಕ್ಷಾನುಗಟ್ಟಲೆ ವಿದ್ಯಾರ್ಥಿಗಳು ಕಾತುರದಿಂದ ಎದುರು ನೋಡುತ್ತಿರುವ ಸಿಬಿಎಸ್ಇ ಪಠ್ಯಕ್ರಮದ 12ನೇ ತರಗತಿಯ 2017ನೇ ಸಾಲಿನ ಪರೀಕ್ಷಾ ಫಲಿತಾಂಶ ಮೇ 24ರಂದು ಪ್ರಕಟಗೊಳ್ಳಲಿವೆ ಎಂದು ಹೇಳಲಾಗಿದ್ದು, ಇದು ಪೋಷಕರ ಹಾಗೂ ವಿದ್ಯಾರ್ಥಿಗಳ ಎದೆಬಡಿತವನ್ನು ಹೆಚ್ಚಿಸಿದೆ.
ಆದರೆ, ಮೂಲಗಳ ಪ್ರಕಾರ, 12ನೇ ತರಗತಿಯ ಫಲಿತಾಂಶ ಮೇ 24ರಂದು ಪ್ರಕಟಗೊಳ್ಳುವುದು ಅನುಮಾನವಾಗಿದೆ. ಇತ್ತೀಚೆಗಷ್ಟೇ, ಮೇ 24ರಂದೇ ಫಲಿತಾಂಶ ನೀಡುವುದಾಗಿ ಸಿಬಿಎಸ್ಇ ಹೇಳಿತ್ತು..[ಸುಪ್ರೀಂ ಮೆಟ್ಟಿಲೇರದಿರಲು ಸಿಬಿಎಸ್ ಇ ನಿರ್ಧಾರ?]

ಆದರೆ, ಮೇ 23ರಂದು ಸಿಬಿಎಸ್ಇಗೆ ನಿರ್ದೇಶನ ನೀಡಿರುವ ದೆಹಲಿ ಹೈಕೋರ್ಟ್, ಸಿಬಿಎಸ್ ಸಿ ಸಂಸ್ಥೆಯು ಈ ಹಿಂದೆ ಅನುಸರಿಸುತ್ತಿದ್ದ ಅಂಕ ಮಿತಿ ನಿಯಮವನ್ನು ಪುನಃ ಅಳವಡಿಸಿಕೊಳ್ಳುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಫಲಿತಾಂಶ ಪಟ್ಟಿಯನ್ನು ಪರಿಷ್ಕರಿಸಬೇಕಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಮುಂದೂಡಲು ಸಿಬಿಎಸ್ಇ ಸಂಸ್ಥೆ ನಿರ್ಧರಿಸಿದೆ ಎಂದು ಹೇಳಲಾಗಿದೆ.[ನಿಗದಿತ ಅವಧಿಯಲ್ಲೇ ಸಿಬಿಎಸ್ ಇ ಫಲಿತಾಂಶ: ಜಾವಡೇಕರ್]
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಬಿಎಸ್ಇ ಅಧಿಕಾರಿಯೊಬ್ಬರು, ''ದೆಹಲಿ ನ್ಯಾಯಾಲಯದ ಪ್ರತಿ ಇನ್ನೂ ಸಿಬಿಎಸ್ ಸಿ ಕಚೇರಿ ತಲುಪಿಲ್ಲ. ಮೇ 24ರಂದು ಅದು ಕಚೇರಿಗೆ ತಲುಪುವ ನಿರೀಕ್ಷೆಯಿದೆ. ನ್ಯಾಯಾಲಯದ ಸೂಚನೆಯ ಪ್ರತಿ ತಲುಪಿದ ನಂತರ ಫಲಿತಾಂಶ ಪ್ರಕಟಣೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.[ಏನಿದು 'CBSE ಅಂಕ ನಿಯಮ' ? ನೀವು ತಿಳಿಯಬೇಕಾದ 5 ವಿಚಾರ]
ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವವರು cbseresults.nic.in ಜಾಲತಾಣಕ್ಕೆ ಭೇಟಿ ನೀಡಬಹುದು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications