ನೇಹಾಳನ್ನು ಸೀರೆಯಲ್ಲಿ ನೋಡ್ಬೇಕು, ಫೇರ್ವೆಲ್ಗೆ ಅವಕಾಶ ಕೊಡಿ, ಪ್ರಧಾನಿಗೆ ಹೀಗೊಂದು ಮನವಿ
ನವದೆಹಲಿ, ಜೂನ್ 02: ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಿರುವ ಕಾರಣ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ.
Recommended Video
ಆದರೆ ವಿಶೇಷವೇನೆಂದರೆ ವಿದ್ಯಾರ್ಥಿಯೊಬ್ಬ ಪ್ರಧಾನಿ ಮೋದಿ ಬಳಿ ವಿಶೇಷ ಮನವಿ ಮಾಡಿದ್ದಾನೆ, 'ಸರ್ ದಯಮಾಡಿ ಫೇರ್ ವೆಲ್ ಕಾರ್ಯಕ್ರಮಕ್ಕೆ ಅನುಮತಿ ಕೊಡಿ ಏಕೆಂದರೆ ನಾನು 12ನೇ ತರಗತಿಯ ನೇಹಾಳನ್ನು ಸೀರೆಯಲ್ಲಿ ನೋಡಲು ಬಯಸುತ್ತೇನೆ' ಎಂದು ವಿದ್ಯಾರ್ಥಿಯೊಬ್ಬ ಮಾಡಿರುವ ಕಮೆಂಟ್ ಇದೀಗ ವೈರಲ್ ಆಗಿದೆ.
ಈ ನಡುವೆ ನೇಹಾ ಮತ್ತು ಟ್ವಿಟರ್ ಬಳಕೆದಾರನ ನಡುವಿನ ವಾಟ್ಸಾಪ್ ಸಂಭಾಷಣೆಯಂತೆ ಕಾಣುವ ಸ್ಕ್ರೀನ್ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸಂಭಾಷಣೆ ಹೇಳಿದಂತೆ 'ನೀನು ನನ್ನನ್ನು ಸೀರೆಯಲ್ಲಿ ನೋಡಲು ಬಯಸಿದರೆ ನೀನು ನನಗೆ ಹೇಳಬೇಕಿತ್ತು. ಈಗ ಎಲ್ಲರೂ ನನಗೆ ಸಂದೇಶ ಕಳುಹಿಸುತ್ತಿದ್ದಾರೆ' ಎಂದು ನೇಹಾ ಹೇಳಿದ್ದಾಳೆ. ಅದಕ್ಕೆ ಕುಕಿ ಇದು ವೈರಲ್ ಆಗುತ್ತದೆ ಎಂದು ನನಗೆ ಹೇಗೆ ಗೊತ್ತಿತ್ತು? ಎಂದಿದ್ದಾನೆ.

ಕುಕಿ ಅಗರ್ವಾಲ್ ಎಂಬ ವಿದ್ಯಾರ್ಥಿ ಈ ಕಮೆಂಟ್ ಮಾಡಿದ್ದು ಇದು 338 ರಿಟ್ವೀಟ್ಗಳು ಮತ್ತು 1,400 ಲೈಕ್ಗಳನ್ನು ಗಳಿಸಿದೆ. ನೆಟ್ಟಿಗರು ಹಾಸ್ಯದೊಂದಿಗೆ ಪ್ರತಿಕ್ರಿಯಿಸಿದ್ದಾರೆ.
ಕೋವಿಡ್ -19 ರ ಎರಡನೇ ಅಲೆಯಿಂದ ದೇಶವು ತೀವ್ರವಾಗಿ ತತ್ತರಿಸಿದೆ ಮತ್ತು ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅನಿಶ್ಚಿತತೆಯನ್ನು ಗಮನದಲ್ಲಿಟ್ಟುಕೊಂಡು ಬೋರ್ಡ್ ಪರೀಕ್ಷೆಗಳನ್ನು ನಡೆಸದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ, ಪ್ರಧಾನಿ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಕಾರಣ ನೀಡಿ ಪ್ರಧಾನಿ ಮೋದಿ 12 ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಬಗ್ಗೆ ಪ್ರಕಟಿಸಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications