ನಿಗದಿತ ಅವಧಿಯಲ್ಲೇ ಸಿಬಿಎಸ್ ಇ ಫಲಿತಾಂಶ: ಜಾವಡೇಕರ್
ಈಗಾಗಲೇ ಹಲವಾರು ಕಾನೂನು ಕಗ್ಗಂಟುಗಳಿಗೆ ಸಿಬಿಎಸ್ ಸಿ ಸಿಲುಕಿಕೊಂಡಿದೆ. ಇದರ ನಡುವೆಯೇ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ನಿಗದಿತ ಅವಧಿಯಲ್ಲೇ 12ನೇ ತರಗತಿ ಫಲಿತಾಂಶ ಪ್ರಕಟಗೊಳ್ಳುತ್ತದೆ ಎಂದಿರುವುದು ಪ್ರಶ್ನಾರ್ಥಕವಾಗಿದೆ.
ನವದಹೆಲಿ, ಮೇ 25: ಕೇಂದ್ರೀಯ ಪ್ರೌಢ ಶಿಕ್ಷಣಾ ಮಂಡಳಿಯ (ಸಿಬಿಎಸ್ ಇ) 12ನೇ ತರಗತಿಯ ಫಲಿತಾಂಶವು ಈ ಮೊದಲು ಪ್ರಕಟಿಸಲಾಗಿದ್ದ ಅವಧಿಯಲ್ಲೇ ಪ್ರಕಟಗೊಳ್ಳಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಭರವಸೆ ನೀಡಿದ್ದಾರೆ.
ಸಿಬಿಎಸ್ ಇ ಮಂಡಳಿಯು ತಾನು ಹೊಂದಿದ್ದ ಅಂಕ ಮಿತಿ ನಿಯಮವನ್ನು ಕೈಬಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೆಹಲಿ ಹೈ ಕೋರ್ಟ್ ಅದೇ ನಿಯಮವನ್ನು ಮುಂದುವರಿಸುವಂತೆ ಮಂಡಳಿಗೆ ಮಂಗಳವಾರ ಸೂಚಿಸಿತ್ತು.[ಏನಿದು 'CBSE ಅಂಕ ನಿಯಮ' ? ನೀವು ತಿಳಿಯಬೇಕಾದ 5 ವಿಚಾರ]

ಇದರಿಂದಾಗಿ, ಮೇ 24ರಂದು ಪ್ರಕಟಗೊಳ್ಳಬೇಕಿದ್ದ 12ನೇ ತರಗತಿ ಫಲಿತಾಂಶ ಮುಂದೂಡಲ್ಪಟ್ಟಿತ್ತು. ಆದರೀಗ, ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುವುದಾಗಿ ಮಂಡಳಿ ಹೇಳಿದೆ. ಇದರಿಂದಾಗಿ, ಫಲಿತಾಂಶವು ಮತ್ತಷ್ಟು ಮುಂದೂಡಲ್ಪಡುವ ಪ್ರಮೇಯವಿದೆ. ಏತನ್ಮಧ್ಯೆ, ಮದ್ರಾಸ್ ಹೈಕೋರ್ಟ್ ನಿಂದಲೂ ಈ ಮಂಡಳಿಯ ತೀರ್ಮಾನದ ಬಗ್ಗೆ ಸಮನ್ಸ್ ಜಾರಿಯಾಗಿದೆ.[ಸಿಬಿಎಸ್ ಇ ಫಲಿತಾಂಶ ಮತ್ತಷ್ಟು ತಡ: ಆತಂಕದಲ್ಲಿ ವಿದ್ಯಾರ್ಥಿಗಳು]
ಇದಲ್ಲಾ ಗೊಂದಲಕ್ಕೂ ಮೊದಲೇ ಮೇ 24ರಿಂದ 27ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಮಂಡಳಿ ಹೇಳಿತ್ತು. ಇದೀಗ, ಕೇಂದ್ರ ಸಚಿವ ಜಾವಡೇಕರ್ ಕೂಡ ಅದೇ ಅವಧಿಯಲ್ಲೇ ಪಲಿತಾಂಶ ಪ್ರಕಟಗೊಳ್ಳಲಿದೆ ಎಂದಿದ್ದಾರೆ. ಆದರೆ, ಈ ವಿಚಾರ ಕಗ್ಗಂಟಾಗಿರುವುದರಿಂದ ಇಷ್ಟು ಬೇಗ ಫಲಿತಾಂಶ ಪ್ರಕಟಣೆ ಸಾಧ್ಯವೇ ಎಂಬುದು ವಿದ್ಯಾರ್ಥಿಗಳ ಪಾಲಿಗೆ ಪ್ರಶ್ನಾರ್ಥಕವಾಗಿದೆ.[ಸುಪ್ರೀಂ ಮೆಟ್ಟಿಲೇರದಿರಲು ಸಿಬಿಎಸ್ ಇ ನಿರ್ಧಾರ?]
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications