ನೀಟ್ ಪರೀಕ್ಷೆ ಫಲಿತಾಂಶ ಮಂಗಳವಾರ ಘೋಷಣೆ
ನವದೆಹಲಿ, ಜೂನ್ 20: ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರನ್ಸ್ ಟೆಸ್ಟ್ (NEET) 2017ರ ಫಲಿತಾಂಶವನ್ನು ಮಂಗಳವಾರ ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಕ್ಸಾಮಿನೇಷನ್ (ಸಿಬಿಎಸ್ ಇ)ನಿಂದ ಘೋಷಣೆ ಮಾಡಲಾಗುವುದು.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ cbseresults.nic.in ಮತ್ತು cbseneet.nic.inನಲ್ಲಿ ನೋಡಬಹುದು. ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನು ಎಂಬಿಬಿಎಸ್ ಅಥವಾ ಬಿಡಿಎಸ್ ನ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.

ಕಳೆದ ವಾರವಷ್ಟೇ ಸುಪ್ರೀಂ ಕೋರ್ಟ್ NEET 2017ರ ಪದವಿ ಪೂರ್ವ ವೈದ್ಯಕೀಯ ಕೋರ್ಸ್ ಗಳ ಫಲಿತಾಂಶವನ್ನು ಪ್ರಕಟಿಸುವುದಕ್ಕೆ ಸಿಬಿಎಸ್ ಇಗೆ ಅನುಮತಿ ನೀಡಿತ್ತು. ಫಲಿತಾಂಶ ಪ್ರಕಟಿಸುವುದರ ವಿರುದ್ಧದ ಯಾವುದೇ ಅರ್ಜಿಯನ್ನು ಹೈಕೋರ್ಟ್ ಗಳು ಪುರಸ್ಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದರಿಂದ ದೇಶದಲ್ಲಿ ಎಂಬಿಬಿಎಸ್ ಹಾಗೂ ಬಿಡಿಎಸ್ ಪ್ರವೇಶಕ್ಕೆ ಐವತ್ತಾರು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನೀಟ್ ಪರೀಕ್ಷೆ ಮೇ ಏಳರಂದು ನಡೆದಿತ್ತು. ದೇಶದಾದ್ಯಂತ ಹನ್ನೊಂದು ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ, ಬೆಂಗಾಲಿ, ಅಸ್ಸಾಮಿ, ಗುಜರಾತಿ ಮತ್ತು ಒಡಿಯಾ ಸೇರಿ ಹತ್ತು ಪ್ರಾದೇಶ್ಸಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು.
ನೀಟ್ ಪರೀಕ್ಷೆ ರದ್ದು ಮಾಡಬೇಕು. ಇಂಗ್ಲಿಷ್ ಹಾಗೂ ಪ್ರಾದೇಶಿಕ ಭಾಷೆಗಳ ಪ್ರಶ್ನೆಗಳಲ್ಲಿ ವ್ಯತ್ಯಾಸವಿದೆ ಎಂದು ಮದ್ರಾಸ್ ಹಾಗೂ ಗುಜರಾತ್ ಹೈ ಕೋರ್ಟ್ ನಲ್ಲಿ ಅರ್ಜಿ ಹಾಕಿಕೊಳ್ಳಲಾಗಿತ್ತು.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications