ಸಿಸಿಟಿವಿಯಲ್ಲಿ ದೃಶ್ಯ ಸೆರೆ: ಕಾಂಜಾವಾಲಾ ಅಪಘಾತ: ಅಪಘಾತಕ್ಕೂ ಮುನ್ನ ಸ್ನೇಹಿತೆಯೊಂದಿಗೆ ಜಗಳವಾಡಿದ ಅಂಜಲಿ
ದೆಹಲಿ ಕಾಂಜಾವಾಲಾ ಅಪಘಾತದ ಬಗ್ಗೆ ಬಯಲಿಗೆಳೆದಷ್ಟು ವಿಚಾರಗಳು ಹೊರಬರುತ್ತಿವೆ. ಹೊಸ ವರ್ಷದ ದಿನದಂದು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಂಜಲಿ ಸಿಂಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಅಂಜಲಿ ಸಿಂಗ್ಗೆ ಡಿಕ್ಕಿ ಹೊಡೆದ ಕಾರು ಆಕೆಯನ್ನು 12 ಕಿ.ಮೀ ದೂರ ಎಳೆದೊಯ್ದಿದೆ. ಈ ಭೀಕರ ಘಟನೆ ಸಿಸಿಟಿವಿ ದೃರ್ಶಯದಲ್ಲಿ ಸೆರೆಯಾಗಿದೆ. ಇತ್ತೀಚೆಗೆ ಹೊರಬಂದ ಹೊಸ ಸಿಸಿಟಿವಿ ಫೂಟೇಜ್ನಲ್ಲಿ ಸಾವನ್ನಪ್ಪಿದ ಯುವತಿ ಮತ್ತೋರ್ವ ಯುವತಿಯೊಂದಿಗೆ ಜಗಳವಾಡುತ್ತಿರುವುದು ಕಂಡುಬಂದಿದೆ.
20 ವರ್ಷದ ಅಂಜಲಿ ಸಿಂಗ್ ಅವರು ಶನಿವಾರ ಸಂಜೆ ಹೊಸ ವರ್ಷದ ಮುನ್ನಾದಿನದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ರೋಹಿಣಿಯ ಹೋಟೆಲ್ನ ಹೊರಗೆ ರೆಕಾರ್ಡ್ ಮಾಡಿದ ದೃಶ್ಯಾವಳಿಯಲ್ಲಿ ತನ್ನ ಸ್ನೇಹಿತೆ ನಿಧಿಯೊಂದಿಗೆ ಆಕೆ ಜಗಳವಾಡುತ್ತಿರುವುದನ್ನು ಕಾಣಬಹುದು. ಅವರು ಪರಸ್ಪರ ಎಲೆದಾಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವಳು ಸಾಯುವ ಕೇವಲ 15 ನಿಮಿಷಗಳ ಮೊದಲು ಈ ವಿಡಿಯೋ ಸೆರೆಯಾಗಿದೆ.
ಅವರ ಜೋರಾಗಿ ಜಗಳವಾಡಿದ ಕಾರಣ, ಹೋಟೆಲ್ ಸಿಬ್ಬಂದಿ ಅವರನ್ನು ಹೊರಹೋಗುವಂತೆ ಕೇಳಿದರು ಎಂದು ವರದಿಯಾಗಿದೆ. "ಅವರು ಜಗಳವಾಡುತ್ತಿದ್ದರು ಮತ್ತು ನಿಂದನೆ ಮಾಡುತ್ತಿದ್ದರು, ಅದಕ್ಕಾಗಿಯೇ ಮ್ಯಾನೇಜರ್ ಅವರನ್ನು ಹೋಗುವಂತೆ ಹೇಳಿದರು. ಹೀಗಾಗಿ ಅವರು ತಮ್ಮ ಸ್ಕೂಟಿಯಲ್ಲಿ ಹೊರಟರು" ಎಂದು ಪಾರ್ಟಿ ನಡೆದ ಓಯೋ ಹೋಟೆಲ್ನ ಉದ್ಯೋಗಿಯೊಬ್ಬರು ಹೇಳಿದರು. ಅಪಘಾತದ ನಂತರ ಹೋಟೆಲ್ ಮುಚ್ಚಲ್ಪಟ್ಟಿದೆ.

ಇತರ ವಿಡಿಯೊಗಳಲ್ಲಿ ಅಂಜಲಿ ಸ್ಕೂಟಿಯಲ್ಲಿ ನಿಧಿ ಚಾಲನೆ ಮಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ಸಮಯದ ನಂತರ ಇಬ್ಬರು ಸ್ಥಳಗಳನ್ನು ಬದಲಾಯಿಸಿಕೊಂಡಿದ್ದಾರೆ. ನಿಧಿ ಬಳಿಕ ಅಂಜಲಿ ಸ್ಕೂಟಿ ಓಡಿಸಿದ್ದಾರೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐವರು ಜನರಿದ್ದ ಕಾರು ಕುಡಿದ ಅಮಲಿನಲ್ಲಿದ್ದ ಅಂಜಲಿಗೆ ಡಿಕ್ಕಿ ಹೊಡೆದಿದೆ. ಆಕೆಯ ಕಾಲು ಕಾರಿನ ಆಕ್ಸಲ್ನಲ್ಲಿ ಸಿಲುಕಿಕೊಂಡಿದೆ. ಅನೇಕ ಯು-ಟರ್ನ್ಗಳನ್ನು ತೆಗೆದುಕೊಂಡ ವಾಹನವು ಅವಳನ್ನು ಒಂದು ಗಂಟೆಗೂ ಹೆಚ್ಚು ಕಾಲ ಎಳೆದಾಡಿದೆ.
ನಿಧಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಘಟನೆಯ ಬಗ್ಗೆ ಆಕೆ ಪೊಲೀಸರಿಗೆ ಮಾಹಿತಿಯನ್ನು ನೀಡಿಲ್ಲ. ವಿಚಾರಿಸಿದಾಗ ಆಕೆ ಗಾಬರಿಯಾದ್ದಳು ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಮೂರನೇ ತಿರುವಿನಲ್ಲಿ, ದೇಹವು ಕಾರಿನಿಂದ ಸಡಿಲಗೊಂಡು ಬಿದ್ದಿದೆ. ಆಗ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಅಂಜಲಿಯ ದೇಹ ಬಟ್ಟೆ ಇಲ್ಲದೆ, ಚರ್ಮ ಸುಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳಿಕ ಕಾರಿನಲ್ಲಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಜಗಳವಾಡಿದ ಯುವತಿಗೂ ಈ ಅಪಘಾತಕ್ಕೂ ಏನಾದರೂ ಸಂಬಂಧವಿದಿಯಾ?ಹಲವಾರು ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ.
ಆಕೆಯ ಖಾಸಗಿ ಅಂಗಗಳಿಗೆ ಯಾವುದೇ ಗಾಯವಾಗಿಲ್ಲದ ಕಾರಣ ಶವಪರೀಕ್ಷೆಯು ಲೈಂಗಿಕ ದೌರ್ಜನ್ಯವನ್ನು ತಳ್ಳಿಹಾಕಿದೆ ಎಂದು ಮೂಲಗಳು ತಿಳಿಸಿವೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications