ಭಾರತದ ಮೇಲೆ ಸೈಬರ್ ದಾಳಿ ನಡೆಸುವ ಸಾಮರ್ಥ್ಯ ಚೀನಾಕ್ಕಿದೆ: ರಾವತ್
ನವದೆಹಲಿ, ಏಪ್ರಿಲ್ 8: ಚೀನಾದ ಸೈಬರ್ ದಾಳಿಯ ಸಾಮರ್ಥ್ಯವು ಭಾರತಕ್ಕೆ ಬಹುದೊಡ್ಡ ಬೆದರಿಕೆಯಾಗಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ. ಭಾರತವು ಸೈಬರ್ ರಕ್ಷಣೆಯ ಕ್ಷೇತ್ರದತ್ತ ಹೆಚ್ಚು ಗಮನ ಹರಿಸಿದೆ ಮತ್ತು ಅಂತಹ ಬೆದರಿಕೆಗಳನ್ನು ಎದುರಿಸಲು ಆಕ್ರಮಣಕಾರಿ ಸೈಬರ್ ಸಾಮರ್ಥ್ಯಗಳನ್ನು ರೂಪಿಸುವತ್ತ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
'ಆರಂಭದಲ್ಲಿ ನಾವು ಕೊಂಚ ನಿಧಾನಗತಿಯಲ್ಲಿದ್ದೆವು. ಹೀಗಾಗಿ ಕಳೆದ ಕೆಲವು ವರ್ಷಗಳಲ್ಲಿ ಈ ಸಾಮರ್ಥ್ಯ ಬೆಳೆದಿರಲಿಲ್ಲ. ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸಲು ಚೀನಾ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದು, ಇಷ್ಟು ಅನುದಾನ ಪೂರೈಸಲು ಅದಕ್ಕೆ ಸಾಮರ್ಥ್ಯವಿದೆ. ಹೀಗಾಗಿ ಅವರು ಈ ವಿಚಾರದಲ್ಲಿ ಖಂಡಿತವಾಗಿಯೂ ನಮಗಿಂತ ಮುಂದಿದ್ದಾರೆ. ನಾವು ಕೂಡ ಅವರೊಂದಿಗೆ ಸರಿಸಮನಾಗಿ ನಿಲ್ಲಲು ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.
'ಮುಖ್ಯವಾಗಿ ನಮ್ಮ ನಡುವಿನ ಬಹುದೊಡ್ಡ ಅಂತರ ಇರುವುದು ಸೈಬರ್ ಕ್ಷೇತ್ರದಲ್ಲಿ. ಚೀನಾವು ನಮ್ಮ ಮೇಲೆ ಸೈಬರ್ ದಾಳಿಗಳನ್ನು ನಡೆಸುವಷ್ಟು ಸಶಕ್ತವಾಗಿದೆ. ಅದು ನಮ್ಮ ವ್ಯವಸ್ಥೆಯ ಮೇಲೆ ಭಾರಿ ಪ್ರಮಾಣದಲ್ಲಿ ಹಾನಿಮಾಡಬಹುದು ಎಂದು ನಮಗೆ ತಿಳಿದಿದೆ' ಎಂದು ತಿಳಿಸಿದ್ದಾರೆ.

'ಸೈಬರ್ ರಕ್ಷಣೆಗಾಗಿ ವ್ಯವಸ್ಥೆಯೊಂದನ್ನು ಸೃಷ್ಟಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ನಮಗೆ ಅದು ಸಾಧ್ಯವಾಗಿದೆ ಕೂಡ. ಹೀಗಾಗಿ ಸೇನಾ ಪಡೆಗಳ ಒಳಗೆ ನಮ್ಮದೇ ಆದ ಸೈಬರ್ ಸಂಸ್ಥೆಯೊಂದನ್ನು ಸ್ಥಾಪಿಸಬೇಕಿದೆ. ಪ್ರತಿ ಸೇವೆಯೂ ತಮ್ಮದೇ ಸೈಬರ್ ಸಂಸ್ಥೆಯೊಂದನ್ನು ಹೊಂದಬೇಕು. ನಾವು ಸೈಬರ್ ದಾಳಿಗೆ ಒಳಗಾದರೂ ಅದನ್ನು ದೀರ್ಘಾವಧಿ ನಡೆಯದಂತೆ ಹತ್ತಿಕ್ಕುವ ಸಾಮರ್ಥ್ಯ ಬೆಳೆಯಬೇಕು. ಸೈಬರ್ ದಾಳಿಗಳನ್ನು ಎದುರಿಸುವ ಶಕ್ತಿ ಬರಬೇಕಿದೆ' ಎಂದಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications