ಪಿಕೆ ಚಿತ್ರಕ್ಕೆ ಸೆನ್ಸಾರ್ ಅನುಮತಿ ನೀಡಿದ್ದ ಅಧ್ಯಕ್ಷೆ ರಾಜೀನಾಮೆ
ಭಾರತೀಯ ಸೆನ್ಸಾರ್ ಮಂಡಳಿಯ (Censor Board of Film Certification) ಇತಿಹಾಸದಲ್ಲಿ ಲೀಲಾ ಸಾಮ್ಸನ್ ಅವರ ಹೆಸರು ಚಾಲ್ತಿಯಲ್ಲಿದಷ್ಟು ಬೇರೆಯವರ ಹೆಸರು ಬಂದು ಹೋದ ಉದಾಹರಣೆಗಳು ಕಮ್ಮಿ. ಈಗ ಲೀಲಾ ಸಾಮ್ಸನ್ ಸೆನ್ಸಾರ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಗುರುವಾರ (ಜ 16) ಬಂದಿದ್ದಾರೆ.
ಲೀಲಾ ರಾಜೀನಾಮೆ ನಿರ್ಧಾರದ ಹಿಂದೆಯೇ ಮಂಡಳಿಯ ಹಿರಿಯ ಅಧಿಕಾರಿ ಇರಾ ಭಾಸ್ಕರ್ ಕೂಡಾ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನುವುದು ಇದೀಗ ತಾನೆ ಬಂದ ಸುದ್ದಿ.
ಮೇಲ್ನೋಟಕ್ಕೆ ಸಾಮ್ಸನ್ ರಾಜೀನಾಮೆ ನಿರ್ಧಾರ 'ಮೆಸೆಂಜರ್ ಆಫ್ ಗಾಡ್' ಎನ್ನುವ ಹಿಂದಿ ಸಹಿತ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಕ್ಕೆ ಸಂಬಂಧ ಪಟ್ಟಿದ್ದು.
ಆದರೆ ಸಾಮ್ಸನ್ ತನ್ನ ರಾಜೀನಾಮೆ ನಿರ್ಧಾರಕ್ಕೆ ಬೊಟ್ಟು ಮಾಡುತ್ತಿರುವುದು ಮಾಹಿತಿ ಮತ್ತು ಪ್ರಸಾರಖಾತೆ ಇಲಾಖೆ ಮೇಲೆ. (ನೆಮ್ಮದಿ ಹಾಳುಗೆಡಹುವ ಚಲನಚಿತ್ರ ಯಾರಿಗೆ ಬೇಕು)

ಮೂಲತಃ ಭರತನಾಟ್ಯ ಕಲಾವಿದೆಯಾಗಿರುವ ಲೀಲಾ ಸಾಮ್ಸನ್, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮನೆಯಲ್ಲಿ ಮಗಳು ಪ್ರಿಯಾಂಕಾಗೆ ಡ್ಯಾನ್ಸ್ ಟೀಚರ್ ಆಗಿದ್ದವರು.
2010-14ರ ಅವಧಿಯಲ್ಲಿ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷೆಯಾಗಿದ್ದ ಲೀಲಾ, 2005-13ರ ಅವಧಿಯಲ್ಲಿ ಕಲಾಕ್ಷೇತ್ರದ ನಿರ್ದೇಶಕಿಯಾಗಿ ಜೊತೆಗೆ 2011ರಿಂದ ಸೆನ್ಸಾರ್ ಮಂಡಳಿಯ ಅಧ್ಯಕ್ಷೆಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ.
ಸಿಖ್ಖರ ದೀರಾ ಸಚ್ಚಾ ಸೌದಾ ಸಂಘಟನೆಯ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಪ್ರಮುಖ ಭೂಮಿಕೆಯಲ್ಲಿರುವ 'ಮೆಸೆಂಜರ್ ಆಫ್ ಗಾಡ್' ಎನ್ನುವ ಚಿತ್ರಕ್ಕೆ ಪ್ರಮಾಣ ಪತ್ರ ನೀಡುವ ಸಂಬಂಧ ಸೆನ್ಸಾರ್ ಮಂಡಳಿ ಮತ್ತು ಚಿತ್ರತಂಡದ ನಡುವೆ ಕಿತ್ತಾಟ ನಡೆಯುತ್ತಲೇ ಇತ್ತು.
ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡದೇ ಎಫ್ ಸಿಎಟಿ (Film Certification Appellate Tribunal) ಮಂಡಳಿಯನ್ನು ಸಂಪರ್ಕಿಸುವಂತೆ ಉಲ್ಲೇಖಿ ವಾಪಸ್ ಕಳುಹಿಸಿತ್ತು. ಎಫ್ ಸಿಎಟಿ ಈಗ ಚಿತ್ರ ಬಿಡುಗಡೆಗೆ ಅನುಮತಿ ನೀಡಿ ಪ್ರಮಾಣಪತ್ರ ನೀಡಿರುವುದು ಲೀಲಾ ಸಾಮ್ಸನ್ ರಾಜೀನಾಮೆಗೆ ನೀಡುತ್ತಿರುವ ಕಾರಣ.
ಮಾಹಿತಿ ಮತ್ತು ಪ್ರಸಾರಖಾತೆ ಬರೀ ಭ್ರಷ್ಟರಿಂದಲೇ ತುಂಬಿದೆ, ಲಂಚಾವತಾರ ಅಲ್ಲಿ ತಾಂಡವಾಡುತ್ತಿದೆ. ಮೆಸೆಂಜರ್ ಆಫ್ ಗಾಡ್ ಚಿತ್ರ ಬಿಡುಗಡೆಗೆ ಅನುಮತಿ ನೀಡಿ ಇಲಾಖೆ ಸೆನ್ಸಾರ್ ಮಂಡಳಿಯನ್ನು ಅವಮಾನಿಸಿದೆ ಎಂದು ಲೀಲಾ ಸಾಮ್ಸನ್ ಮೋದಿ ಸರಕಾರದ ವಿರುದ್ದ ಹರಿಹಾಯ್ದಿದಿದ್ದಾರೆ. ಮುಂದಿನ ಪುಟ ಕ್ಲಿಕ್ಕಿಸಿ
-
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್











Click it and Unblock the Notifications