ಕೊವಿಡ್ 19 ಹಿನ್ನೆಲೆ: ಜನ ಗಣತಿ, ಎನ್ ಪಿಆರ್ ಎಲ್ಲವೂ ಮುಂದಕ್ಕೆ!
ನವದೆಹಲಿ, ಆ. 31: ಕೊರೊನಾವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಜನಗಣತಿ ಮೊದಲನೇ ಹಂತ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ(NPR) ಎಲ್ಲವನ್ನು ಮುಂದಿನ ವರ್ಷಕ್ಕೆ ಮುಂಡೂಡಲಾಗಿದೆ. ಭಾರತದ ಜನ ಗಣತಿ ಪ್ರಕ್ರಿಯೆಯು ವಿಶ್ವದಲ್ಲೇ ಅತಿ ದೊಡ್ಡ ಆಡಳಿತಾತ್ಮಕ ಹಾಗೂ ಅಂಕಿ ಅಂಶ ಸಂಗ್ರಹ ಪ್ರಕ್ರಿಯೆ ಎನಿಸಿಕೊಂಡಿದೆ.
Recommended Video
ಈ ಬಾರಿ ಸುಮಾರು 30 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಭಾಗಿಯಾಗಿ, ಅಂಕಿ ಅಂಶ ಸಂಗ್ರಹದಲ್ಲಿ ತೊಡಗಿಕೊಳ್ಳಬೇಕಾಗಿತ್ತು. ಆದರೆ, ಕೊವಿಡ್ 19 ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ತಡವಾದರೂ ಸಮಸ್ಯೆಯಿಲ್ಲೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 2021ರಲ್ಲಿ ಮೇ ಅಥವಾ ಜೂನ್ ತಿಂಗಳಿನಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಯಿದೆ.
ಎಲ್ಲವೂ ಸರಿಯಾಗಿದ್ದರೆ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ಎನ್ ಪಿ ಆರ್ ಮಾಹಿತಿ ಸಂಗ್ರಹ, ಜನಗಣತಿ, ಮನೆ ಗಣತಿ ಇನ್ನಿತರ ಮಾಹಿತಿ ಸಂಗ್ರಹ ಕಾರ್ಯ ಮುಕ್ತಾಯವಾಗಬೇಕಿತ್ತು. ಆದರೆ, ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಜನಗಣತಿ: ಕಳೆದ 130 ವರ್ಷಗಳಿಂದ ನಡೆದುಕೊಂಡು ಬಂದಿರುವ ಬೃಹತ್ ಅಂಕಿ ಅಂಶ ಕಲೆ ಹಾಕುವ ಪ್ರಕ್ರಿಯೆ ಇದಾಗಿದೆ. ಭಾರತದಲ್ಲಿ ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಈಗೆಲ್ಲ ಜನಗಣತಿ ಡಾಟಾವನ್ನು ವಿಶೇಷವಾಗಿ ರೂಪಿಸಿರುವ ಮೊಬೈಲ್ ಅಪ್ಲಿಕೇಷನ್ ಮೂಲಕ ಪಡೆಯಬಹುದಾಗಿದೆ. ಸಾಮಾನ್ಯ ನಿವಾಸಿಯ ಮಾಹಿತಿ ಸಂಗ್ರಹ ಎನ್ ಪಿ ಆರ್ ಉದ್ದೇಶವಾಗಿದೆ.
ಕಟ್ಟಡ ಸಂಖ್ಯೆ, ಸೆನ್ಸಸ್ ಹೌಸ್ ಸಂಖ್ಯೆ, ನಿವಾಸಿಗಳ ಸಂಖ್ಯೆ, ಕುಡಿಯುವ ನೀರಿನ ಮೂಲ, ಬೆಳಕಿನ ಮೂಲ, ಶೌಚಾಲಯ ವ್ಯವಸ್ಥೆ ಹಾಗೂ ಮಾದರಿ, ಟಿವಿ, ಲ್ಯಾಪ್ಟಾಪ್, ಇಂಟರ್ನೆಟ್, ಮೋಟಾರ್ ಸೈಕಲ್, ಕಾರು, ಮೊಬೈಲ್ ಸಂಖ್ಯೆ ಸೇರಿದಂತೆ ಒಟ್ಟು 31 ವಿಚಾರಗಳ ಬಗ್ಗೆ ಪ್ರತಿ ಮನೆಯಿಂದ ಮಾಹಿತಿ ಸಂಗ್ರಹಿಸಲಾಗುವುದು. ಇದೇ ಮೊದಲ ಬಾರಿಗೆ ಜನಗಣತಿಯನ್ನು ಡಿಜಿಟಲ್ ಮಾದರಿಯಲ್ಲಿ ನೋಂದಣಿ ಮಾಡಲಾಗುತ್ತಿದೆ.
ಜನಗಣತಿಯು 1948ರ ಜನಗಣತಿ ಕಾಯ್ದೆಯಿಂದ ಮಾನ್ಯತೆ ಪಡೆದು ನಡೆಯುತ್ತದೆ. ಎನ್ಪಿಆರ್ಅನ್ನು 1955ರ ಪೌರತ್ವ ಕಾಯ್ದೆಯಡಿ ರೂಪಿಸಲಾದ ನಿಯಮಗಳ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. 1955ರ ಪೌರತ್ವ ಕಾಯ್ದೆಗೆ 2004ರಲ್ಲಿ ಸೆಕ್ಷನ್ 14A ಅನ್ನು ಅಡಕ ಮಾಡಲಾಗಿತ್ತು. ಇದರ ಮೂಲಕ ಭಾರತದ ಪ್ರತಿ ನಾಗರಿಕನ ಕಡ್ಡಾಯ ನೋಂದಣಿ ಮಾಡಿಕೊಳ್ಳುವುದು ಹಾಗೂ ಅವರಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡುವುದಕ್ಕೆ ಚಾಲನೆ ನೀಡಲಾಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications