ಕೊವಿಡ್ 19 ಹಿನ್ನೆಲೆ: ಜನ ಗಣತಿ, ಎನ್ ಪಿಆರ್ ಎಲ್ಲವೂ ಮುಂದಕ್ಕೆ!
ನವದೆಹಲಿ, ಆ. 31: ಕೊರೊನಾವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಜನಗಣತಿ ಮೊದಲನೇ ಹಂತ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ(NPR) ಎಲ್ಲವನ್ನು ಮುಂದಿನ ವರ್ಷಕ್ಕೆ ಮುಂಡೂಡಲಾಗಿದೆ. ಭಾರತದ ಜನ ಗಣತಿ ಪ್ರಕ್ರಿಯೆಯು ವಿಶ್ವದಲ್ಲೇ ಅತಿ ದೊಡ್ಡ ಆಡಳಿತಾತ್ಮಕ ಹಾಗೂ ಅಂಕಿ ಅಂಶ ಸಂಗ್ರಹ ಪ್ರಕ್ರಿಯೆ ಎನಿಸಿಕೊಂಡಿದೆ.
Recommended Video
ಈ ಬಾರಿ ಸುಮಾರು 30 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಭಾಗಿಯಾಗಿ, ಅಂಕಿ ಅಂಶ ಸಂಗ್ರಹದಲ್ಲಿ ತೊಡಗಿಕೊಳ್ಳಬೇಕಾಗಿತ್ತು. ಆದರೆ, ಕೊವಿಡ್ 19 ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ತಡವಾದರೂ ಸಮಸ್ಯೆಯಿಲ್ಲೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 2021ರಲ್ಲಿ ಮೇ ಅಥವಾ ಜೂನ್ ತಿಂಗಳಿನಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಯಿದೆ.
ಎಲ್ಲವೂ ಸರಿಯಾಗಿದ್ದರೆ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ಎನ್ ಪಿ ಆರ್ ಮಾಹಿತಿ ಸಂಗ್ರಹ, ಜನಗಣತಿ, ಮನೆ ಗಣತಿ ಇನ್ನಿತರ ಮಾಹಿತಿ ಸಂಗ್ರಹ ಕಾರ್ಯ ಮುಕ್ತಾಯವಾಗಬೇಕಿತ್ತು. ಆದರೆ, ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಜನಗಣತಿ: ಕಳೆದ 130 ವರ್ಷಗಳಿಂದ ನಡೆದುಕೊಂಡು ಬಂದಿರುವ ಬೃಹತ್ ಅಂಕಿ ಅಂಶ ಕಲೆ ಹಾಕುವ ಪ್ರಕ್ರಿಯೆ ಇದಾಗಿದೆ. ಭಾರತದಲ್ಲಿ ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಈಗೆಲ್ಲ ಜನಗಣತಿ ಡಾಟಾವನ್ನು ವಿಶೇಷವಾಗಿ ರೂಪಿಸಿರುವ ಮೊಬೈಲ್ ಅಪ್ಲಿಕೇಷನ್ ಮೂಲಕ ಪಡೆಯಬಹುದಾಗಿದೆ. ಸಾಮಾನ್ಯ ನಿವಾಸಿಯ ಮಾಹಿತಿ ಸಂಗ್ರಹ ಎನ್ ಪಿ ಆರ್ ಉದ್ದೇಶವಾಗಿದೆ.
ಕಟ್ಟಡ ಸಂಖ್ಯೆ, ಸೆನ್ಸಸ್ ಹೌಸ್ ಸಂಖ್ಯೆ, ನಿವಾಸಿಗಳ ಸಂಖ್ಯೆ, ಕುಡಿಯುವ ನೀರಿನ ಮೂಲ, ಬೆಳಕಿನ ಮೂಲ, ಶೌಚಾಲಯ ವ್ಯವಸ್ಥೆ ಹಾಗೂ ಮಾದರಿ, ಟಿವಿ, ಲ್ಯಾಪ್ಟಾಪ್, ಇಂಟರ್ನೆಟ್, ಮೋಟಾರ್ ಸೈಕಲ್, ಕಾರು, ಮೊಬೈಲ್ ಸಂಖ್ಯೆ ಸೇರಿದಂತೆ ಒಟ್ಟು 31 ವಿಚಾರಗಳ ಬಗ್ಗೆ ಪ್ರತಿ ಮನೆಯಿಂದ ಮಾಹಿತಿ ಸಂಗ್ರಹಿಸಲಾಗುವುದು. ಇದೇ ಮೊದಲ ಬಾರಿಗೆ ಜನಗಣತಿಯನ್ನು ಡಿಜಿಟಲ್ ಮಾದರಿಯಲ್ಲಿ ನೋಂದಣಿ ಮಾಡಲಾಗುತ್ತಿದೆ.
ಜನಗಣತಿಯು 1948ರ ಜನಗಣತಿ ಕಾಯ್ದೆಯಿಂದ ಮಾನ್ಯತೆ ಪಡೆದು ನಡೆಯುತ್ತದೆ. ಎನ್ಪಿಆರ್ಅನ್ನು 1955ರ ಪೌರತ್ವ ಕಾಯ್ದೆಯಡಿ ರೂಪಿಸಲಾದ ನಿಯಮಗಳ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. 1955ರ ಪೌರತ್ವ ಕಾಯ್ದೆಗೆ 2004ರಲ್ಲಿ ಸೆಕ್ಷನ್ 14A ಅನ್ನು ಅಡಕ ಮಾಡಲಾಗಿತ್ತು. ಇದರ ಮೂಲಕ ಭಾರತದ ಪ್ರತಿ ನಾಗರಿಕನ ಕಡ್ಡಾಯ ನೋಂದಣಿ ಮಾಡಿಕೊಳ್ಳುವುದು ಹಾಗೂ ಅವರಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡುವುದಕ್ಕೆ ಚಾಲನೆ ನೀಡಲಾಗಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications