ಕರ್ನಾಟಕ ಸೇರಿ 6 ರಾಜ್ಯಗಳಿಗೆ 4381 ಕೋಟಿ ಹೆಚ್ಚುವರಿ ನೆರವು ಘೋಷಿಸಿದ ಕೇಂದ್ರ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ (ಎಚ್ಎಲ್ಸಿ) ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ 4,381.88 ಕೋಟಿ ರೂ ನೆರವು ನೀಡಲು ಅನುಮೋದನೆ ನೀಡಿದೆ. ಪ್ರಸಕ್ತ ವರ್ಷ ಚಂಡಮಾರುತ, ಪ್ರವಾಹ ಮತ್ತು ಭೂಕುಸಿತಗಳಿಂದ ಹಾನಿಗೊಳಗಾದ ರಾಜ್ಯಗಳಿಗೆ ಈ ನೆರವು ನೀಡಲಾಗುತ್ತಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ (ಎನ್ಡಿಆರ್ಎಫ್) ಅಡಿಯಲ್ಲಿ ಕೇಂದ್ರ ಸರ್ಕಾರವು ಈ ಅನುದಾನವನ್ನು ಬಿಡುಗಡೆ ಮಾಡಿದೆ.
ಅನುದಾನ ವಿತರಣೆ ಹೇಗೆ?
* 'ಅಂಫಾನ್' ಚಂಡಮಾರುತದಿಂದ ಹಾನಿಗೊಳಗಾದ ಪಶ್ಚಿಮ ಬಂಗಾಳಕ್ಕೆ 2,707.77 ಕೋಟಿ ರೂ ಮತ್ತು ಒಡಿಶಾಕ್ಕೆ 128.23 ಕೋಟಿ ರೂ ನೀಡಲಾಗಿದೆ.

* ಮಹಾರಾಷ್ಟ್ರಕ್ಕೆ 'ನಿಸರ್ಗ' ಚಂಡಮಾರುತದಿಂದ ಉಂಟಾದ ಹಾನಿಗಾಗಿ 268.59 ಕೋಟಿ ರೂ ಮಂಜೂರು ಮಾಡಲಾಗಿದೆ.
* ನೈಋತ್ಯ ಮುಂಗಾರಿನಿಂದ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ತೀವ್ರ ನಷ್ಟ ಅನುಭವಿಸಿದ ಕರ್ನಾಟಕಕ್ಕೆ 577.84 ರೂ. ನೆರವು ಮಂಜೂರು ಮಾಡಲಾಗಿದೆ. ಜತೆಗೆ ಮಧ್ಯಪ್ರದೇಶಕ್ಕೆ 611.61 ಕೋಟಿ ರೂ ಮತ್ತು ಸಿಕ್ಕಿಂಗೆ 87.84 ಕೋಟಿ ರೂ. ನೀಡಲಾಗಿದೆ.
ಮಧ್ಯಂತರ ಪರಿಹಾರ
ಅಂಫಾನ್ ಚಂಡಮಾರುತದ ಅಬ್ಬರದ ಬಳಿಕ ಅಪಾರ ಹಾನಿಗೊಳಗಾದ ಪಶ್ಚಿಮ ಬಂಗಾಳಕ್ಕೆ 1,000 ಕೋಟಿ ರೂ ಮತ್ತು ಒಡಿಶಾಗೆ 500 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಮೇ 22ರಂದು ಪ್ರಧಾನಿ ಮೋದಿ ಘೋಷಿಸಿದ್ದರು. ಆಗ ಅವರು ಈ ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ವೀಕ್ಷಿಸಿದ್ದರು.
ಜತೆಗೆ, ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಹಾಗೂ ಗಾಯಾಳುಗಳಿಗೆ 50,000 ರೂ ನೆರವನ್ನು ಕೂಡ ಪ್ರಧಾನಿ ಘೋಷಿಸಿದ್ದರು.
ಈ ಆರು ರಾಜ್ಯಗಳಲ್ಲಿ ವಿಪತ್ತು ಸಂಭವಿಸಿದ ಕೂಡಲೇ ಕೇಂದ್ರ ಸರ್ಕಾರವು ಅಂತರ್ ಸಚಿವಾಲಯಗಳ ಕೇಂದ್ರ ತಂಡಗಳನ್ನು (ಐಎಂಸಿಟಿ) ನಿಯೋಜನೆ ಮಾಡಿತ್ತು. 2020-21ರ ಅವಧಿಯಲ್ಲಿ ಇದುವರೆಗೂ ಕೇಂದ್ರ ಸರ್ಕಾರವು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 28 ರಾಜ್ಯಗಳಿಗೆ 15,524.43 ಕೋಟಿ ರೂ. ಬಿಡುಗಡೆ ಮಾಡಿದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ












Click it and Unblock the Notifications