Budget Session : ಜ. 31ರಿಂದ ಏ.6ರವರೆಗೆ 66 ದಿನಗಳ ಕಾಲ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ : ಪ್ರಹ್ಲಾದ್ ಜೋಶಿ
ಬೆಂಗಳೂರು, ಜನವರಿ 13: ಕೇಂದ್ರದ ಬಜೆಟ್ ಅಧಿವೇಶನವು ಇದೇ ತಿಂಗಳ ಜನವರಿ 31 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಈ ಬಾರಿಯ ಬಜೆಟ್ ಅಧಿವೇಶನವು 66 ದಿನಗಳ ಕಾಲ ನಡೆಯಲಿದೆ. ಜನವರಿ 31ರಂದು ಆರಂಭಗೊಳ್ಳುವ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪಗಳು ಎಪ್ರಿಲ್ 6 ರ ವರೆಗೆ ನಡೆಯಲಿದೆ ಎಂದು ಹೇಳಿದರು.
ಅಧಿವೇಶನದಲ್ಲಿ ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಅವರು 2023ರ ಬಜೆಟ್ ಮಂಡಿಸಲಿದ್ದಾರೆ. ನಂತರ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಹಲವು ರಾಜ್ಯಗಳ ಅನುದಾನಗಳ ಬೇಡಿಕೆ ಕುರಿತು ನಿರ್ಣಯ ಕೈಗೊಳ್ಳಲು ಹಾಗೂ ವಿವಿಧ ಸಚಿವಾಲಯಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ವರದಿ ಸಿದ್ಧ ಪಡಿಸಲು ಫೆಬ್ರವರಿ 14 ರಿಂದ ಮಾರ್ಚ್ 12ರ ವರೆಗೆ ವಿರಾಮ ಪಡೆಯಲಾಗುವುದು ಎಂದು ಅವರು ವಿವರಿಸಿದರು.

ಫೆಬ್ರವರಿ 14-ಮಾರ್ಚ್ 12ವರೆಗೆ ಬಿಡುವು
ಸಂಸತ್ತಿನ ಸ್ಥಾಯಿ ಸಮಿತಿಯ ಮುಂದೆ ವಿವಿಧ ರಾಜ್ಯಗಳ ಅನುದಾನದ ಬೇಡಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಮತ್ತು ವಿವಿಧ ಸಚಿವಾಲಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ವರದಿಯನ್ನು ತಯಾರಿಸಲು ಫೆಬ್ರವರಿ 14 ರಿಂದ ಮಾರ್ಚ್ 12 ರವರೆಗೆ ವಿರಾಮ ತೆಗೆದುಕೊಳ್ಳಲಾಗುವುದು ಎಂದು ಜೋಶಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮುಖದಲ್ಲಿ ಅರ್ಥಶಾಸ್ತ್ರಜ್ಞರೊಂದಿಗೆ ಸಭೆ ನಡೆಸಲಿದ್ದಾರೆ. ತಜ್ಞರು ಪ್ರಧಾನ ಮಂತ್ರಿಗಳ ಅಭಿಪ್ರಾಯಗಳು, ಸಲಹೆ ಪಡೆಯಲಿದ್ದಾರೆ. ಕೇಂದ್ರ ಬಜೆಟ್ಗೆ ಮುಂಚಿತವಾಗಿ ಭಾರತೀಯ ಆರ್ಥಿಕತೆಯ ಸ್ಥಿತಿ ಮತ್ತು ಅದರ ಸವಾಲುಗಳನ್ನು ಮೌಲ್ಯಮಾಪನ ಮಾಡುತ್ತಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ನಂತರ ಅಧಿವೇಶನವು ಪ್ರಾರಂಭವಾಗುತ್ತದೆ. ಇದು ರಾಷ್ಟ್ರಪತಿಗಳಾದ ಮೇಲೆ ದ್ರೌಪತಿ ಮುರ್ಮು ಅವರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾಡುವ ಮೊದಲ ಭಾಷಣವಾಗಿದೆ.

ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಆಯವ್ಯಯ 2023 ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನ ಎರಡನೇ ಭಾಗದಲ್ಲಿ ಮಾರ್ಚ್ ವೇಳೆಗೆ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಯಾಗಲಿದೆ. ನಂತರ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಸಂಸತ್ ಭವನದ ಕಾಮಗಾರಿ ಭರದಿಂದ ಸಾಗುತ್ತಿದೆ. ಮುಂದಿನ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications