ಜಾತಿ ಲೆಕ್ಕಾಚಾರ ತಪ್ಪಿಸಲು ಕೇಂದ್ರದ ಸಂಚು: ಶೀಘ್ರ ಜನಗಣತಿ ಪುನರಾರಂಭ
ನವದೆಹಲಿ, ಆ.09: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸ್ಥಗಿತಗೊಂಡಿರುವ ಜನಗಣತಿ ಕಾರ್ಯಾಚರಣೆಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿವೆ. ಕೊರೊನಾ ವೈರಸ್ ಸೋಂಕು ಪ್ರಕರಣಗಳ ಏರಿಕೆ ಮಧ್ಯೆ ಮೂರನೇ ಕೋವಿಡ್ ಅಲೆಯ ಆತಂಕ ಇದೆ. ಈ ನಡುವೆ ಗೃಹ ವ್ಯವಹಾರಗಳ ಸಚಿವಾಲಯವು ಕಳೆದ ಒಂದು ವಾರದಿಂದ ರಾಜ್ಯಗಳಲ್ಲಿನ ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಿದೆ
ಉತ್ತರ ಪ್ರದೇಶ, ಗುಜರಾತ್ ಮತ್ತು ಛತ್ತೀಸ್ಗಢದಂತಹ ದೊಡ್ಡ ರಾಜ್ಯಗಳು ಹಾಗೂ ಮಿಜೋರಾಂ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಂತಹ ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಜನಗಣತಿ ನಡೆಯಲಿದೆ ಎಂದು ಹೇಳಲಾಗಿದೆ. ಇನ್ನು ಈ ಜನಗಣತಿಯ ಹಿನ್ನೆಲೆ ಗೃಹ ವ್ಯವಹಾರಗಳ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಅನುಗುಣವಾದ ಖಾಲಿ ಹುದ್ದೆಗಳನ್ನು ಕೂಡ ಭರ್ತಿ ಮಾಡಲಾಗಿದೆ.
ಈ ಜನಗಣತಿ ಕಾರ್ಯಾಚರಣೆಯಲ್ಲಿ ಜಾತಿ ಎಣಿಕೆಗೆ ಹೊಸ ಬೇಡಿಕೆಗಳು ಇರುವುದರಿಂದ ಕೇಂದ್ರ ಸರ್ಕಾರ ಜನಗಣತಿಯ ಕೆಲಸವನ್ನು ಪುನರುಜ್ಜೀವನಗೊಳಿಸಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಜಾತಿ ಎಣಿಕೆಗೆ ಹೊಸ ಬೇಡಿಕೆಯನ್ನು ಮಾಡಿದ್ದಾರೆ. ಬಿಹಾರ ರಾಜ್ಯದ ವಿರೋಧ ಪಕ್ಷದ ನಾಯಕರು ಕೂಡಾ ಮುಖ್ಯಮಂತ್ರಿ ನಿತೀಶ್ ಕುಮಾರ್ರ ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ಜನಗಣತಿಯ ಕಾರ್ಯಾಚರಣೆಯ ನಿರ್ದೇಶಕರ ಹುದ್ದೆಗಳು ಖಾಲಿ ಇರುವ ರಾಜ್ಯಗಳಲ್ಲಿ ಭರ್ತಿ ಮಾಡಲು ತರಾತುರಿ ನಡೆಸುತ್ತಿರುವುದು ಎಣಿಕೆ ಕಾರ್ಯಗಳನ್ನು ವೇಗವಾಗಿ ಮುನ್ನಡೆಗೆ ತರುವ ಸಲುವಾಗಿ ಎಂದು ಕೇಂದ್ರ ಸರ್ಕಾರದ ಮೂಲವೊಂದು ಹೇಳಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಭಾರತದ ಜನಸಂಖ್ಯಾಶಾಸ್ತ್ರವನ್ನು ಗಮನಿಸಿದರೆ, ಈ ಜನಗಣತಿ ಕಾರ್ಯಾಚರಣೆ ಆರಂಭವಾದರೆ, ಈಗ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಹೇಳುವುದು ಕೇಂದ್ರಕ್ಕೆ ತುಲನಾತ್ಮಕವಾಗಿ ಸುಲಭವಾಗುತ್ತದೆ. ಜಾತಿ ಜನಗಣತಿಯ ಬೇಡಿಕೆಯ ನಡುವೆ ಕೇಂದ್ರ ಸರ್ಕಾರ ತರಾತುರಿಯಲ್ಲಿ ಈ ಜನಗಣಿತಯನ್ನು ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.
ಮುಂದಿನ ಜನಗಣತಿಯು 10 ವರ್ಷಗಳ ನಂತರ 2031 ರಲ್ಲಿ, ನಡೆಯಲಿದೆ. 2011 ರ ಬಳಿಕ 2021 ರಲ್ಲಿ ಜನಗಣತಿ ನಡೆಸಲು ಸಿದ್ದತೆ ಮಾಡಲಾಗುತ್ತಿದೆ. ಮುಂದಿನ ಜನಗಣತಿಯು 10 ವರ್ಷಗಳ ನಂತರ 2031 ರಲ್ಲಿ ಆಗಿರುವುದು ರಾಜಕೀಯ ಸಮೀಕರಣಗಳಲ್ಲಿ ದೀರ್ಘಾವಧಿಯ ಕಾಲವಾಗಿದೆ. ಆದ್ದರಿಂದ ಈ ಕೋವಿಡ್ ಸಾಂಕ್ರಾಮಿಕದ ಮಧ್ಯೆಯೂ ಸರ್ಕಾರ ಈ ಜನಗಣತಿಗೆ ಮುಂದಾಗಿದೆ ಎನ್ನಲಾಗಿದೆ.
ಕೊರೊನಾ ವೈರಸ್ನ ಮೊದಲ ಅಲೆಯ ಸಂದರ್ಭದಲ್ಲಿ ಭಾರತದ ಜನಗಣತಿ ಆಯುಕ್ತರ ಕಚೇರಿ ಮತ್ತು ರಾಜ್ಯಗಳಲ್ಲಿನ ಕಚೇರಿಗಳನ್ನು ಲಾಕ್ಡೌನ್ ಕಾರಣದಿಂದಾಗಿ ಕಚೇರಿಗಳನ್ನು ಮುಚ್ಚಲಾಗಿದೆ. ಈ ಪರಿಣಾಮವಾಗಿ ಕಳೆದ ವರ್ಷ ಆರಂಭ ಮಾಡಬೇಕಾಗಿದ್ದ ಜನಗಣತಿಯ ಸಿದ್ಧತೆಗಳು ಸ್ಥಗಿತಗೊಂಡಿವೆ. ಈ ಕೊರೊನಾ ವೈರಸ್ ಸಾಂಕ್ರಾಮಿಕ ಪ್ರೇರಿತ ಲಾಕ್ಡೌನ್ನಿಂದಾಗಿ ಎಲ್ಲಾ ಸರ್ಕಾರಿ ಕಚೇರಿಗಳು ಪರಿಣಾಮ ಬೀರಿವೆ.
ಭಾರತದ ಜನಗಣತಿ ಸಂಸ್ಥೆಯು ಪ್ರತಿ ರಾಜ್ಯ ರಾಜಧಾನಿಯಲ್ಲಿ 33 ಜನಗಣತಿ ಕಾರ್ಯಾಚರಣೆಗಳ ನಿರ್ದೇಶನಾಲಯಗಳ ಒಂದು ಕುಟುಂಬವಾಗಿದೆ. ಪ್ರತಿ ರಾಜ್ಯ ರಾಜಧಾನಿಯಲ್ಲಿನ 33 ಜನಗಣತಿ ಕಾರ್ಯಾಚರಣೆಗಳ ನಿರ್ದೇಶನಾಲಯಗಳು ನವದೆಹಲಿಯಲ್ಲಿನ ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯುಕ್ತರಿಗೆ ತಮ್ಮ ಪ್ರಗತಿಯ ಬಗ್ಗೆ ವರದಿ ಮಾಡುತ್ತಾರೆ.
ಇನ್ನು ದೇಶದಲ್ಲಿ ಜನಗಣತಿಯ ಪೂರ್ವಭಾವಿ ಕಾರ್ಯಗಳು ಆರಂಭ ಮಾಡಲಾಗಿತ್ತು. ಆದರೆ ಜನಗಣತಿ, ದೇಶದಾದ್ಯಂತ ಜನರ ಎಣಿಕೆ ಸೇರಿದಂತೆ, ಒಂದೇ ಬಾರಿಗೆ ಸಂಭವಿಸುವ ಕಾರ್ಯವನ್ನು ಆರಂಭ ಮಾಡಲಾಗಿತ್ತು. ಆದರೆ ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಈ ಕಾರ್ಯವು ಸ್ಥಗಿತಗೊಂಡಿದೆ. ಸಾಮಾನ್ಯವಾಗಿ ಜನಗಣತಿ ವರ್ಷದ ಫೆಬ್ರವರಿ ತಿಂಗಳಲ್ಲಿ, ಆರಂಭಿಸಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಸಾಂಕ್ರಾಮಿಕದ ಕಾರಣ ಈವರೆಗೂ ಜನಗಣತಿ ಆರಂಭವಾಗಿಲ್ಲ. ಮುಂದಿನ ವರ್ಷದ ಫೆಬ್ರವರಿ ವೇಳೆಗೆ ಜನರ ನಿಜವಾದ ಎಣಿಕೆ ಸೇರಿದಂತೆ ಕಾರ್ಯಾಚರಣೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿ ತಿಳಿಸಿದೆ. ಜಾತಿ ಗಣತಿಯು ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
(ಒನ್ಇಂಡಿಯಾ ಸುದ್ದಿ)
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications