Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
ನವದೆಹಲಿ, ಮಾರ್ಚ್ 28: ಕೇಂದ್ರ ರಕ್ಷಣಾ ಸಚಿವಾಲಯದ ಮಹತ್ವದ ನೇಮಕಾತಿಗಳಲ್ಲಿ ಒಂದಾಗಿರುವ 'ಅಗ್ನಿವೀರ್ ನೇಮಕಾತಿ' ಯೋಜನೆಯಲ್ಲಿ ಅಗತ್ಯ ಬಿದ್ದರೆ ಸರ್ಕಾರ "ಬದಲಾವಣೆಗೆ ಮುಕ್ತವಾಗಿ'' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಗುರುವಾರ ಟೈಮ್ಸ್ ನೌ ಶೃಂಗಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ದೇಶದಲ್ಲಿ ಅಗ್ನಿವೀರರ ಭವಿಷ್ಯವು ಸುರಕ್ಷಿತವಾಗಿದೆ ಎಂದು ಸರ್ಕಾರ ಖಚಿತಪಡಿಸಿದೆ. ರಕ್ಷಣಾ ಪಡೆಗೆ ತರುಣರ ಅಗತ್ಯವಿದೆ. ನಾಲ್ಕು ವರ್ಷ ಸೇವೆ ಬಳಿಕ ಅವರ ಭವಿಷ್ಯ ಉತ್ತಮವಾಗಿರುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಯುವಕರ ಉತ್ಸಾಹ ದೇಶಸೇವೆಗೆ
ದೇಶದ ಯುವಕರು ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುವ ಅಗತ್ಯತೆ ಪ್ರತಿಪಾದಿಸಿದ ಅವರು, ಸರ್ಕಾರ ಅಗ್ನಿವೀರ್ ಯೋಜನೆಯನ್ನು ಸಮರ್ಥಿಸಿಕೊಂಡರು. "ಸೇನಾ ಮೇ ಯೌವನದ ಹೋನಿ ಚಾಹಿಯೇ'' ಎಂದು ಅವರು, ತಂತ್ರಜ್ಞಾನ ಯುಗದಲ್ಲಿ ಬುದ್ಧಿವಂತ ಯುವಕರು ಹೆಚ್ಚು ಉತ್ಸಾಹಿಗಳಾಗಿದ್ದಾರೆ. ಅವರ ಈ ಉತ್ಸಾಹವನ್ನು ನಾಲ್ಕು ವರ್ಷಗಳ ಕಾಲ ಸೇನೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.
ಅಗ್ನಿವೀರರಿಗೆ ಮೊದಲ 6 ತಿಂಗಳು ತರಬೇತಿ
ಅಗ್ನಿವೀರ್ ನೇಮಕಾತಿಯಡಿ ಅರ್ಹ ಯುವಕ ನಾಲ್ಕು ವರ್ಷಗಳ ಅವಧಿಗೆ ರಕ್ಷಣಾ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾರೆ. ಅದರಲ್ಲಿ ಅವರಿಗೆ ಆರು ತಿಂಗಳ ತರಬೇತಿ ಒಳಗೊಂಡಿರುತ್ತದೆ. ನಂತರ 3.5 ವರ್ಷಗಳ ಸೇವೆ ನಿಯೋಜನೆಗೊಳ್ಳುತ್ತಾರೆ. ಸೇವೆಯಿಂದ ನಿವೃತ್ತರಾದ ನಂತರ ಸಶಸ್ತ್ರ ಪಡೆಗಳಲ್ಲಿ ಅವರು ಸೇವೆ ಮುಂದುವರೆಸಬಹುದು. ಅದಕ್ಕಾಗಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

'ಅಗ್ನಿಪಥ್' ಅಥವಾ 'ಅಗ್ನಿವೀರ್' ಯೋಜನೆಯು ಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ಸೈನಿಕರನ್ನು ನೇಮಕ ಮಾಡುವ ಪ್ರಕ್ರಿಯೆಯಾಗಿದೆ. ಇದರಡಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅರ್ಹ ಯುವಕರು ಒಪ್ಪಂದದ ಮೇಲೆ ನಾಲ್ಕು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.
ಭಾರತವನ್ನು ರಫ್ತು ದೇಶವಾಗಿ ಕಾಣುವ ಕನಸು
ಆತ್ಮನಿರ್ಭರ್ ಭಾರತ್ ಪರಿಕಲ್ಪಿನೆಯಡಿ ಭಾರತ ರಫ್ತು ದೇಶವಾಗಿ ಬೆಳೆಯುತ್ತಿದೆ. ತಂತ್ರಜ್ಞಾನದಲ್ಲಿ ಮುಂದಿರುವ ಭಾರತದಲ್ಲಿ ವಿವಿಧ ಇಂಜಿನ್ಗಳನ್ನು ತಯಾರಿ ಅವುಗಳನ್ನು ರಫ್ತು ಮಾಡಲು ಸಿದ್ಧವಾಗಿದೆ. ಯಾವ ರೀತಿಯ ಇಂಜಿನ್ಗಳನ್ನು ಉತ್ಪಾದಿಸಬೇಕು ಎಂಬೆಲ್ಲ ಮಾಹಿತಿಯ ಬಗ್ಗೆ ಡಿಆರ್ಡಿಒ ಜೊತೆಗೆ ಮಾತನಾಡಿದ್ದೇವೆ. ಎಲ್ಲವು ಅಂದುಕೊಂಡಂತಾದರೆ ಬೇರೆ ದೇಶಗಳಿಗೆ ಸ್ವದೇಶಿ ಯಂತ್ರಗಳು ರಫ್ತಾಗಲಿವೆ. ಇವುಗಳನ್ನು ಭಾರತಿಯರು ನಿರ್ಮಿಸಲಿದ್ದಾರೆ ಎಂಬುದೇ ಹೆಮ್ಮೆಯ ವಿಷಯ ಎಂದು ತಿಳಿಸಿದರು.
ಭಾರತದ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದ ರಾಜನಾಥ್ ಸಿಂಗ್, ಭಾರತ ಎಲ್ಲ ಭಾಗದ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಮ್ಮ ಸೈನ್ಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇರಬೇಕು. ನಮ್ಮ ದೇಶ ಮತ್ತು ಅದರ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಇದು ನಮ್ಮ ಸರ್ಕಾರ ದೇಶವಾಸಿಗಳಿಗೆ ನೀಡುವ ಭರವಸೆ ಎಂದು ವಿಪಕ್ಷಗಳಿಗೆ ತಿರುಗೇಟು ಕೊಟ್ಟರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications