Budget 2024: ಕೇಂದ್ರ ಬಜೆಟ್ ಅಧಿವೇಶನ ದಿನಾಂಕ ಫಿಕ್ಸ್, ಬಜೆಟ್ ಮಂಡನೆ ಯಾವತ್ತು?
ಬೆಂಗಳೂರು, ಜುಲೈ 07: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಭಾರಿಗೆ ಅಧಿಕಾರಕ್ಕೆ ಬಂದು ತಿಂಗಳು ಕಳೆದಿದೆ. ಇದರ ಬೆನ್ನಲ್ಲೆ 18ನೇ ಲೋಕಸಭೆಯ ಬಜೆಟ್ ಮಂಡನೆ ಹಾಗೂ ಬಜೆಟ್ ಅಧಿವೇಶನದ ಮಹೂತ್ಸವ ಫಿಕ್ಸ್ ಆಗಿದೆ. ಈ ಭಾರಿಯು ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಬಜೆಟ್ ಮಂಡಿಸಲಿದ್ದಾರೆ.
ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಕಿರಣ ರಿಜಿಜು ಅವರು ಸಾಮಾಜಿಕ ಜಾಲತಾನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ 3.0 ಸರ್ಕಾರದ ಬಜೆಟ್ ಅಧಿವೇಶನವು ಜುಲೈ 22ರಿಂದ ಆಗಸ್ಟ್ 12ರವರೆಗೆ ಜರುಗಲಿದೆ. ಒಟ್ಟು 22 ದಿನಗಳ ಕಾಲ ಈ ಬಜೆಟ್ ಸೆಷನ್ ನಡೆಯಲಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜುಲೈ 23ರಂದು ಮುಂಗಡಪತ್ರ (ಬಜೆಟ್) ಮಂಡನೆ ಮಾಡಲಿದ್ದಾರೆ. ಈ ಬಜೆಟ್ ಮೇಲೆ ಸಾಕಷ್ಟು ಆಶಾಭಾವನೆ, ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ಆಗಸ್ಟ್ 12ರವರೆಗೆ ಬಜೆಟ್ ಅಧಿವೇಶನ
ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿಗಳು 2024ರ ಜುಲೈ 22ರಿಂದ ಆಗಸ್ಟ್ 12ರವರೆಗೆ ಬಜೆಟ್ ಅಧಿವೇಶನ ಕರೆಯಲು ಅನುಮೋದಿಸಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೆ ಬಜೆಟ್ ಮಂಡನೆ ಏಕೆ?
ಇನ್ನೂ 2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿಯಲ್ಲೇ ಪ್ರಧಾನಿ ಮೋದಿ ಸರ್ಕಾರವು ಮಧ್ಯಂತರ ಬಜೆಟ್ ಮಂಡನೆ ಮಾಡಿತ್ತು. ಸಾಮಾನ್ಯವಾಗಿ ಫೆಬ್ರವರಿ 1ರಂದು ಬೆಜೆಜ್ ಮಂಡನೆ ಆಗಬೇಕು. ಅದು ಏಪ್ರಿಲ್ ಹೊಸ ಆರ್ಥಿಕ ವರ್ಷದಿಂದಲೇ ಜಾರಿಗೆ ಬರಬೇಕು.

ಆದರೆ ಈ ಭಾರಿ ಏಪ್ರಿಲ್, ಮೇ ತಿಂಗಳಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆದಿದೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡಿದೆ. ಆಗ ಅದು ಸೀಮಿತ ಅವಧಿಯ ಮಧ್ಯಂತರ ಬಜೆಟ್ ಮಂಡಲಾಗಿದ್ದು, ಇದೀಗ ಮಂಡಿಸಲಿರುವ ಬಜೆಟ್ 2024-25 ನೇ ಸಾಲಿನ ಪೂರ್ಣವಧಿ ಬಜೆಟ್ ಆಗಿರಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications