2023ರಿಂದ 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ ವಿತರಣೆ
ಬೆಂಗಳೂರು, ಡಿಸೆಂಬರ್ 26: ಮುಂದಿನ ವರ್ಷದಿಂದ ಒಂದು ವರ್ಷವರೆಗೆ ದೇಶದ 81.35 ಕೋಟಿ ಫಲಾನುಭವಿಗಳು ಕೇಂದ್ರ ಸರ್ಕಾರದಿಂದ ಉಚಿತ ಆಹಾರ ಧಾನ್ಯಗಳನ್ನು ಪಡೆಯಲಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು, ಮುಂದಿನ ವರ್ಷ 2023 ಜನವರಿ 1 ರಿಂದ ಒಂದು ವರ್ಷದವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎಣ್ಎಫ್ಎಸ್ಎ) ಅಡಿಯಲ್ಲಿ ಸುಮಾರು 81.35 ಕೋಟಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಉಚಿತ ಆಹಾರ ಧಾನ್ಯಗಳನ್ನು ನೀಡುವ ಯೋಜನೆಗೆ ಒಪ್ಪಿಗೆ ಸೂಚಿಸಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪೀಯೂಷ್ ಗೋಯಲ್ ಅವರು, ಕೇಂದ್ರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಆಹಾರ ಸಬ್ಸಿಡಿಯಾಗಿ ರೂ.2 ಲಕ್ಷ ಕೋಟಿಗಿಂತ ಹೆಚ್ಚು ಹಣವನ್ನು ಮೀಸಲಿಟ್ಟಿದೆ. ಬಡತನ ಮತ್ತು ಬಡವರ ಆರ್ಥಿಕ ಹೊರೆಯನ್ನು ತೆಗೆದುಹಾಕಲು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಈ ಉಚಿತ ಆಹಾರ ಧಾನ್ಯಗಳ ವಿತರಣೆಗೆ ತೀರ್ಮಾನಿಸಿದೆ ಎಂದು ಪೀಯೂಷ್ ಗೋಯಲ್ ತಿಳಿಸಿದ್ದಾರೆ.

ಕಲ್ಯಾಣ ಯೋಜನೆಗಳ ಫಲಾನುಭವಿಗಳ ಬಗ್ಗೆ ಪ್ರಧಾನ ಮಂತ್ರಿಗಳ ಸಂವೇದನಾಶೀಲತೆಯನ್ನು ಪ್ರತಿಬಿಂಬಿಸುವ ಐತಿಹಾಸಿಕ ನಿರ್ಧಾರ ಇದಾಗಿದೆ. ಪಡಿತರ ಆದ್ಯತಾ ಕುಟುಂಬಗಳ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಆಹಾರ ಧಾನ್ಯಗಳು ಮತ್ತು ಅಂತ್ಯೋದಯ ಅನ್ನ ಯೋಜನೆ ಫಲಾನುಭವಿಗಳಿಗೆ ಪ್ರತಿ ಮನೆಗೆ 35 ಕೆಜಿ ಆಹಾರ ಧಾನ್ಯಗಳನ್ನು ನೀಡಲಾಗುವುದು ಎಂದರು.
ಕಾಯ್ದೆಯಡಿಲ್ಲಿ ಪ್ರತಿ ಕೆ.ಜಿ ಅಕ್ಕಿಗೆ 3 ರೂಪಾಯಿ, ಗೋಧಿಗೆ ಕೆಜಿಗೆ 2 ರೂಪಾಯಿ ಮತ್ತು 1 ಕೆಜಿ ಒರಟಾದ ಧಾನ್ಯಗಳನ್ನು ಫಲಾನುಭವಿಗಳಿಗೆ ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಇದೀಗ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ನೀರ್ಣಯ ಕೈಗೊಳ್ಳಲಾಗಿದೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ 28 ತಿಂಗಳ ಕಾಲ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮಾಡಲಾಗಿತ್ತು ಎಂದು ವಿವರಿಸಿದರು.
-
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications