New Railway Lines: ₹24,634 ಕೋಟಿ ವೆಚ್ಚದ 4 ಯೋಜನೆಗಳಿಗೆ ಸಂಪುಟ ಒಪ್ಪಿಗೆ, ಎಲ್ಲೆಲ್ಲಿ?
ನವದೆಹಲಿ, ಅಕ್ಟೋಬರ್ 8: ಭಾರತದಲ್ಲಿ ರೈಲ್ವೆ ಜಾಲವು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ವಿಸ್ತರಣೆ ಸಹ ಆಗುತ್ತಿದೆ. ಮೂಲಸೌಕರ್ಯಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದೀಗ ಕೇಂದ್ರ ಸರ್ಕಾರ ದೇಶದ ನಾಲ್ಕು ರಾಜ್ಯಗಳಿಗೆ ಗುಡ್ ನ್ಯೂಸ್ ನೀಡಿದೆ. ಬರೋಬ್ಬರಿ 24,634 ಕೋಟಿ ರೂಪಾಯಿ ರೈಲ್ವೆ ಯೋಜನೆಗೆ ಸಂಪುಟದಲ್ಲಿ ಅನುಮೋದನೆ ನೀಡಿದೆ. ಇದು ಯಾವ ಯೋಜನೆ, ಎಷ್ಟು ಕಿಲೋ ಮಿಟರ್, ಯಾವೆಲ್ಲ ರಾಜ್ಯದ ಜನರಿಗೆ ಅನುಕೂಲ ಎಂಬ ಮಾಹಿತಿ ಇಲ್ಲಿದೆ.
ಕೇಂದ್ರ ಸಚಿವ ಸಂಪುಟ ದಲ್ಲಿ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್ಗಢ ರಾಜ್ಯಗಳ 18 ಜಿಲ್ಲೆಗಳನ್ನು ಒಳಗೊಂಡು ಬಹುಕೋಟಿ ವೆಚ್ಚದಲ್ಲಿ 04 ರಸ್ತು ಯೋಜನೆಗಳನ್ನು ಅನುಮೋದಿಸಿದೆ. ಸದರಿ ಈ ಯೋಜನೆಯಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿ.ಮೀ ನಷ್ಟು ಹೆಚ್ಚಿಸಲಿವೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಯಾವ 4 ರಾಜ್ಯ? ಮಾರ್ಗ ಯೋಜನೆಗಳ ವಿವರ
* ವಾರ್ಧಾ - ಭೂಸಾವಲ್ - 3ನೇ ಮತ್ತು 4ನೇ ಮಾರ್ಗ ರೈಲು ಯೋಜನೆ: ಇದು ಮಹಾರಾಷ್ಟ್ರ ರಾಜ್ಯ ವ್ಯಾಪ್ತಿಯಲ್ಲಿ314 ಕಿಲೋ ಮಿಟರ್ ಇದೆ.
* ಗೊಂಡಿಯಾ - ಡೊಂಗರ್ಗಢ - 4ನೇ ಮಾರ್ಗ ಯೋಜನೆ: ಇದು ಮಹಾರಾಷ್ಟ್ರ ಮತ್ತು ಛತ್ತೀಸ್ಗಢ ವ್ಯಾಪ್ತಿಯಲ್ಲಿ 84 ಕಿಲೋ ಮೀಟರ್ ಇದೆ.
* ವಡೋದರಾ - ರತ್ನಾಮ್ - 3ನೇ ಮತ್ತು 4ನೇ ಮಾರ್ಗ ಯೋಜನೆಯು ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯದಲ್ಲಿ - 259 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳಲಿದೆ.
* ಇಟಾರ್ಸಿ - ಭೋಪಾಲ್ - ಬೀನಾ 4ನೇ ಮಾರ್ಗವು ಮಧ್ಯ ಪ್ರದೇಶದ ವ್ಯಾಪ್ತಿಯ 237 ಕಿಲೋ ಮೀಟರ್ ಉದ್ದದ ಯೋಜನೆ ಆಗಿದೆ ಎಂದು ಕೇಂದ್ರ ರೈಲ್ವೆ ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ. ಈ ಕುರಿತು ರೈಲ್ವೆ ಎಕ್ಸ್ ಹ್ಯಾಂಡಲ್ಗಳು ಮಾಹಿತಿ ಹಂಚಿಕೊಂಡಿವೆ.
Cabinet approved four railway projects today:
— Ashwini Vaishnaw (@AshwiniVaishnaw) October 7, 2025
🛤️ Bhusaval - Wardha: 3rd & 4th line
🛤️ Gondia - Dongargarh: 4th line
🛤️ Vadodara - Ratlam: 3rd & 4th line
🛤️ Itarsi - Bhopal - Bina: 4th line
These projects will strengthen the major corridors of Bharatiya Rail & lower the… pic.twitter.com/q8Zw9ORxRA
ಈ ನಾಲ್ಕು ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 24,634 ಕೋಟಿ ರೂಪಾಯಿ ಆಗಿದೆ. ಇವು 2030-31ರ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಗಡುವು ನೀಡಲಾಗಿದೆ. ಇದು ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 894 ಕಿ.ಮೀ ರಷ್ಟು ಹೆಚ್ಚಿಸುತ್ತದೆ. ಈ ಯೋಜನೆಗಳು ಅಂದಾಜು 3,633 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತವೆ. ಕೋಟ್ಯಾಂತರ ಪ್ರಯಾಣಿಕರಿಗೆ ಈ ರೈಲ್ವೆ ಯೋಜನೆಗಳಿಂದ ಸಾರಿಗೆ ಅನುಕೂಲ ಸಿಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಇದು ರೈಲುಗಳ ಸಂಚಾರವನ್ನು ಗಣನೀಯವಾಗಿ ಹೆಚ್ಚಿಸಿ, ಕಾರ್ಯಾಚರಣೆಯ ದಕ್ಷತೆ ಮತ್ತು ಭಾರತೀಯ ರೈಲ್ವೆಯ ಸೇವಾ ವಿಶ್ವಾಸಾರ್ಹತೆಯನ್ನು ಸುಧಾರಿಸಲು ಕಾರಣವಾಗುತ್ತದೆ. ಈ ಯೋಜನೆಗಳು ಕಾರ್ಯಾಚರಣೆಗಳನ್ನು ಸುಗಮಗೊಳಿಸಿ, ದಟ್ಟಣೆಯನ್ನು ಕಡಿಮೆ ಮಾಡಲಿವೆ ಎಂದು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications