Niti Ayoag: ಸಂಪನ್ಮೂಲಗಳ ಹಂಚಿಕೆ ಬಗ್ಗೆ ಮುಖ್ಯಮಂತ್ರಿಗಳ ಅಸಮಾಧಾನ!
ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪನ್ಮೂಲಗಳ ಹಂಚಿಕೆ ತಾರತಮ್ಯದ ಬಗ್ಗೆ ನೀತಿ ಆಯೋಗ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಧ್ವನಿ ಎತ್ತಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ ಭಾರತದ ಅಭಿವೃದ್ಧಿಯತ್ತ ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ. ಇದಕ್ಕೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಕ್ಕೆ ಸಂಪನ್ಮೂಲ ಹಂಚಿಕೆ ಅಸಮಾನತೆ ಬಗ್ಗೆ ಧ್ವನಿ ಎತ್ತಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರವು ರಾಜ್ಯಗಳೊಂದಿಗೆ ಹೆಚ್ಚಿನ ಹಣವನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಹರಿಯಾಣ ಜೊತೆ ಹಂಚಿಕೊಳ್ಳಲು ತಮ್ಮ ಬಳಿ ನೀರು ಇಲ್ಲ ಎಂದಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ತ್ರಿಭಾಷಾ ಷರತ್ತಿನ ಕುರಿತು ಬಿಜೆಪಿ ನೇತೃತ್ವದ ಕೇಂದ್ರದೊಂದಿಗೆ ಮುಖಾಮುಖಿಯಾಗಿರುವ ಮತ್ತು ಆ ಕಾರಣದಿಂದಾಗಿ ರಾಜ್ಯದಿಂದ 2,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ತಡೆಹಿಡಿಯಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್, ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳಿಗೆ ತಾರತಮ್ಯವಿಲ್ಲದ ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಧ್ವನಿ ಎತ್ತಿದ ಸ್ಟಾಲಿನ್
ನೀತಿ ಆಯೋಗದ 10ನೇ ಆಡಳಿತ ಮಂಡಳಿಯಲ್ಲಿ ಮಾತನಾಡಿದ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, "ಭಾರತದಂತಹ ಫೆಡರಲ್ ಪ್ರಜಾಪ್ರಭುತ್ವದಲ್ಲಿ ರಾಜ್ಯಗಳು ತಮಗೆ ಬರಬೇಕಾದ ಹಣವನ್ನು ಸರಿಯಾಗಿ ಪಡೆಯಲು ಹೋರಾಡುವುದು, ವಾದಿಸುವುದು ಅಥವಾ ಮೊಕದ್ದಮೆ ಹೂಡುವುದು ಸೂಕ್ತವಲ್ಲ. ಇದು ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ" ಎಂದು ಹೇಳಿದರು.
ತೆರಿಗೆ ಆದಾಯದಲ್ಲಿ ರಾಜ್ಯಗಳ ಪಾಲನ್ನು 50% ಕ್ಕೆ ಹೆಚ್ಚಿಸಬೇಕೆಂದು ವಾದಿಸಿದ ಅವರು, 15 ನೇ ಹಣಕಾಸು ಆಯೋಗವು ಭಾಗಿಸಬಹುದಾದ ತೆರಿಗೆ ಆದಾಯದ 41% ಅನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳಬೇಕೆಂದು ಶಿಫಾರಸು ಮಾಡಿದೆ ಎನ್ನುವುದನ್ನು ಆಯೋಗದ ಸಭೆಯಲ್ಲಿ ಗಮನಕ್ಕೆ ತಂದರು. ಕಳೆದ ನಾಲ್ಕು ವರ್ಷಗಳಲ್ಲಿ, ಕೇಂದ್ರ ಸರ್ಕಾರದ ಒಟ್ಟು ತೆರಿಗೆ ಆದಾಯದ ಕೇವಲ 33.16% ಅನ್ನು ಮಾತ್ರ ಹಂಚಿಕೊಳ್ಳಲಾಗಿದೆ ಎಂದರು.
ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯ ಸರ್ಕಾರಗಳಿಂದ ನಿರೀಕ್ಷಿಸಲಾದ ವೆಚ್ಚದ ಪಾಲು ಹೆಚ್ಚುತ್ತಲೇ ಇದೆ, ಇದು ತಮಿಳುನಾಡಿನಂತಹ ರಾಜ್ಯಗಳ ಹಣಕಾಸಿನ ಮೇಲೆ ಮತ್ತಷ್ಟು ಒತ್ತಡ ಉಂಟು ಮಾಡುತ್ತದೆ. ತೆರಿಗೆಯ ಹಂಚಿಕೆಯನ್ನು ಕಡಿಮೆ ಮಾಡುತ್ತಿರುವುದು ಕೂಡ ರಾಜ್ಯದ ಹಣಕಾಸಿನ ಮೇಲೆ ಪರಿಣಾಮಬೀರುತ್ತದೆ, ಕೇಂದ್ರದ ಯೋಜನೆಗಳಿಗೆ ಅಗತ್ಯವಿರುವ ಹೆಚ್ಚಿನ ಕೊಡುಗೆಗಳು ಹೆಚ್ಚುವರಿ ಹೊರೆಯಾಗಿವೆ. ರಾಜ್ಯಗಳ ಪಾಲನ್ನು ಶೇ. 50 ಕ್ಕೆ ಹೆಚ್ಚಿಸಬೇಕೆಂದು ಪ್ರಸ್ತಾಪಿಸಿದ ಡಿಎಂಕೆ ಮುಖ್ಯಸ್ಥರು, ಕೇಂದ್ರವು ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.
ಭಾಕ್ರಾ-ನಂಗಲ್ ಅಣೆಕಟ್ಟಿನ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಹರಿಯಾಣದೊಂದಿಗೆ ವಿವಾದದಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ತಮ್ಮ ರಾಜ್ಯವು ಕೊರತೆಯನ್ನು ಎದುರಿಸುತ್ತಿದೆ ಮತ್ತು ನೀಡಲು ನೀರಿನ ಕೊರತೆಯಿದೆ ಎಂದು ವಾದಿಸಿದ್ದಾರೆ.
ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕರ್ನಾಟಕದ ಸಿದ್ದರಾಮಯ್ಯ, ಕೇರಳದ ಪಿಣರಾಯಿ ವಿಜಯನ್, ಪುದುಚೇರಿಯ ಎನ್ ರಂಗಸ್ವಾಮಿ ಮತ್ತು ಬಿಹಾರದ ನಿತೀಶ್ ಕುಮಾರ್ ಅವರನ್ನು ಹೊರತುಪಡಿಸಿ ಹೆಚ್ಚಿನ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.












Click it and Unblock the Notifications