Modi Government: ಮೋದಿ ಸರ್ಕಾರ ಜಾಹೀರಾತಿಗೆ ಖರ್ಚು ಮಾಡಿದ್ದೆಷ್ಟು?
ನವದೆಹಲಿ: ಇದು ಜಾಹೀರಾತುಗಳ ಜಮಾನ, ಅದರಲ್ಲೂ ಸರ್ಕಾರಗಳು ತಮ್ಮ ಯೋಜನೆ ಕುರಿತಾಗಿ ಜನರಿಗೆ ಮಾಹಿತಿ ನೀಡಲು ಸಾವಿರಾರು ಕೋಟಿ ಸುರಿಯುತ್ತವೆ. ಹೀಗೆ ನರೇಂದ್ರ ಮೋದಿ ಅವರ ಸರ್ಕಾರ ಕೂಡ ಭಾರಿ ಹಣವನ್ನ ಖರ್ಚು ಮಾಡಿದೆ. ಹಾಗಾದರೆ ನರೇಂದ್ರ ಮೋದಿ ಸರ್ಕಾರ ಜಾಹೀರಾತಿಗಾಗಿ ಖರ್ಚು ಮಾಡಿರುವ ಹಣವೆಷ್ಟು ಗೊತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
2018ರಿಂದ ಇಲ್ಲಿಯ ತನಕ ಕೇಂದ್ರ ಸರ್ಕಾರ ಬರೋಬ್ಬರಿ 3,064 ಕೋಟಿ ರೂ. ಹಣವನ್ನು ಜಾಹೀರಾತು ಹಾಗೂ ಪ್ರಚಾರಕ್ಕಾಗಿ ಖರ್ಚು ಮಾಡಿದೆ. ಇದರಲ್ಲಿ ಪ್ರಮುಖವಾಗಿ ಮುದ್ರಣ ಮಾಧ್ಯಮಗಳು ಅತಿಹೆಚ್ಚು ಜಾಹೀರಾತು ಪಡೆದಿದ್ದು ಹಾಗೂ ನಂತರದ ಸ್ಥಾನದಲ್ಲಿ ಟಿವಿ ಮಾಧ್ಯಮಗಳು ಸ್ಥಾನ ಪಡೆದಿವೆ. ಹಾಗಾದರೆ ಈ ಮಾಹಿತಿಯನ್ನ ನೀಡಿದ್ದು ಯಾರು? ಯಾವ ಯಾವ ಮಾಧ್ಯಮಗಳಿಗೆ ಎಷ್ಟು ಜಾಹೀರಾತು ನೀಡಲಾಗಿದೆ? ಅದರ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.

ಯಾವ ಯಾವ ಮಾಧ್ಯಮಕ್ಕೆ ಎಷ್ಟು?
ಹೌದು, ಕಳೆದ ವಾರ ರಾಜ್ಯಸಭೆಯಲ್ಲಿ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ಒದಗಿಸಿದ ಅಂಕಿ ಅಂಶಗಳ ಪ್ರಕಾರ ಸರ್ಕಾರ 2018-19 ಮತ್ತು 2023-24ರ ನಡುವೆ ಒಟ್ಟಾರೆ ಮುದ್ರಣ ಮಾಧ್ಯಮಗಳಿಗೆ 1,338 ಕೋಟಿ ರೂಪಾಯಿ, ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ 1,273 ಕೋಟಿ ರೂಪಾಯಿ ಹಾಗೂ ಹೊರಾಂಗಣ ಪ್ರಚಾರಕ್ಕಾಗಿ 452 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಮೂಲಕ ಮೊದಲ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳು ಸ್ಥಾನ ಪಡೆದಿವೆ. ಇನ್ನೂ ಈ ಜಾಹೀರಾತು ನೀಡುವ ಪ್ರಮಾಣ ಇತ್ತೀಚೆಗೆ ಒಂದಷ್ಟು ಕಡಿಮೆ ಆಗಿದೆ. ಒಟ್ಟಾರೆ ವೆಚ್ಚವು 2018-19ರಲ್ಲಿ 1,179 ಕೋಟಿ ರೂಪಾಯಿಯಿಂದ 2022-23ರಲ್ಲಿ 408 ಕೋಟಿ ರೂ.ಗೆ ಇಳಿಕೆ ಕಂಡಿದೆ.
ಮುದ್ರಣ ಮಾಧ್ಯಮಕ್ಕೆ ಹೆಚ್ಚಿನ ಪಾಲು!
ಹಾಗೇ 2019-20ರಲ್ಲಿ ಕೇಂದ್ರ ಸರ್ಕಾರದ ಜಾಹೀರಾತು ವೆಚ್ಚ 708.18 ಕೋಟಿ ರೂಪಾಯಿಗೆ ಕುಸಿದಿತ್ತು. ಇದು 2020-21ರಲ್ಲಿ 409 ಕೋಟಿಗೆ ಮತ್ತು 2021-22ರಲ್ಲಿ ರೂ 315.98 ಕೋಟಿಗೆ ಕುಸಿದಿತ್ತು. ಆದರೆ ಇದೀಗ ಅಂದರೆ 2022-23ರಲ್ಲಿ ಮತ್ತೆ ಏರಿಕೆ ಕಂಡಿದ್ದು, ಈ ವರ್ಷದ ಏಪ್ರಿಲ್ ಮತ್ತು ಜುಲೈ 13 ನಡುವೆ ಕೇಂದ್ರ ಸರ್ಕಾರವು ಜಾಹೀರಾತಿಗಾಗಿ 43.16 ಕೋಟಿ ರೂ. ಖರ್ಚು ಮಾಡಿದೆ ಅಂತಿದೆ ಅಂಕಿ-ಅಂಶ. ಈ ಪ್ರಕಾರ ಮುದ್ರಣ ಮಾಧ್ಯಮದಲ್ಲಿ 2018-19 ಮತ್ತು 2019-20ರಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮಗಳು ಹೆಚ್ಚಿನ ಪಾಲನ್ನು ಹೊಂದಿದೆ. ಹೀಗೆ ಕೇಂದ್ರ ಸರ್ಕಾರ ಜಾಹೀರಾತು ಹಾಗೂ ಪ್ರಚಾರಕ್ಕೆ ಸಾಕಷ್ಟು ಖರ್ಚು ಮಾಡಿದೆ.
ಒಟ್ನಲ್ಲಿ ಕಳೆದ ಲೋಕಸಭೆ ಚುನಾವಣೆ ಬಳಿಕ ಕೇಂದ್ರ ಸರ್ಕಾರದ ಜಾಹೀರಾತು ಹಾಗೂ ಪ್ರಚಾರ ವೆಚ್ಚ ಇಳಿಕೆ ಕಾಣುತ್ತಾ ಬಂದಿದೆ. ಇದೀಗ ಇನ್ನೇನು ಮತ್ತೆ ಲೋಕಸಭೆ ಎಲೆಕ್ಷನ್ ಹತ್ತಿರವಿದ್ದು, ಜಾಹೀರಾತು ವೆಚ್ಚ ಏರಿಕೆ ಆಗಬಹುದಾ? ಅಥವಾ ಇಳಿಕೆ ಕಾಣುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications