'ತಿರುಮಲ ದೇವಸ್ಥಾನ ಮೇಲೆ ನಿಯಂತ್ರಣ ಹೊಂದಲು ಕೇಂದ್ರ ಸರ್ಕಾರ ಸಂಚು'
Recommended Video

ಚಿತ್ತೂರು, ಜೂನ್ 8: ತಿರುಮಲ ದೇವಸ್ಥಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಸಂಚು ಮಾಡಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಚಿತ್ತೂರಿನಲ್ಲಿ ನವ ನಿರ್ಮಾಣ ದೀಕ್ಷಾ ಸಮಾವೇಶದ ಆರನೇ ದಿನವಾದ ಗುರುವಾರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಪಿತೂರಿಯನ್ನು ಯಶಸ್ವಿಗೊಳಿಸಲು ಬಿಡುವುದಿಲ್ಲ ಎಂದರು.

'ತಿರುಮಲ ದೇವಸ್ಥಾನದ ವಿರುದ್ಧದ ಯಾವುದೇ ಸಂಚನ್ನು ಸಫಲಗೊಳ್ಳಲು ನಾವು ಬಿಡುವುದಿಲ್ಲ. ದೇವಸ್ಥಾನವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕೇಂದ್ರ ಪ್ರಯತ್ನಿಸಿತ್ತು. ಅಂತಹ ಪಿತೂರಿಗಳು ಈಡೇರುವುದಿಲ್ಲ.
2003ರಲ್ಲಿ ನಾನು ಭಯೋತ್ಪಾದಕರ ದಾಳಿಯಿಂದ ಬಚಾವಾಗಲು ಬಾಲಾಜಿಯ ಆಶೀರ್ವಾದವೇ ಕಾರಣ. ಬಾಲಾಜಿ ದೇವರ ದೇವಸ್ಥಾನದ ಪಾವಿತ್ರ್ಯವನ್ನು ಹಾಳುಮಾಡಲು ನಾನು ಅವಕಾಶ ನೀಡುವುದಿಲ್ಲ' ಎಂದು ನಾಯ್ಡು ಹೇಳಿದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ವಂಚನೆ ಮಾಡಿದೆ ಎಂದು ಅವರು ಆರೋಪಿಸಿದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಹೇಳಿ ಕೇಂದ್ರ ಸರ್ಕಾರ ಮೋಸ ಮಾಡಿದೆ. ವಿಶೇಷ ಸ್ಥಾನಮಾನ ಕಲ್ಪಿಸುವುದಾಗಿ ಬಾಲಾಜಿ ದೇವರ ಪಾದಗಳಿಗೆ ನಮಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ಮಾಡಿದ್ದರು.
ನಾನು ಹಿರಿಯ ರಾಜಕಾರಣಿ. ಮುಖ್ಯಮಂತ್ರಿಯಾಗಿ ದೆಹಲಿಗೆ ತೆರಳಿ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮತ್ತು ಅಭಿವೃದ್ಧಿಗೆ ಅನುದಾನವನ್ನು ಕೋರಿದ್ದೆ. ಆದರೆ ಅವರು ನೀಡಲಿಲ್ಲ. ಬದಲಾಗಿ ನಮಗೆ ಮೋಸ ಮಾಡಿದರು ಎಂದು ದೂರಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications