ಅರುಣಾಚಲ ಪ್ರದೇಶ: ಭಾರತ- ಚೀನಾ ಗಡಿ ಉದ್ದಕ್ಕೂ 22 ಹೊಸ ಮೊಬೈಲ್ ಟವರ್ ಸ್ಥಾಪನೆ
ನವದೆಹಲಿ ಡಿ. 22: ಭಾರತ- ಚೀನಾದ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಉದ್ದಕ್ಕೂ ಮೊಬೈಲ್ ಸಂಪರ್ಕವನ್ನು ಸುಧಾರಿಸಲು ಅರುಣಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ 22 ಹೊಸ ಮೊಬೈಲ್ ಟವರ್ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಿಲಿಟರಿಗಾಗಿ ಮಿನಿ ಹೈಡಲ್ ಯೋಜನೆಯನ್ನು ನಿರ್ಮಿಸಲು ಸರ್ಕಾರ ಯೋಜಿಸುತ್ತಿದೆ.
ರಾಜ್ಯದ ಗಡಿ ಪ್ರದೇಶಗಳಲ್ಲಿ 22 ಹೊಸ ಮೊಬೈಲ್ ಟವರ್ಗಳನ್ನು ಸ್ಥಾಪಿಸಲಾಗುವುದು ಮತ್ತು ಕೇಂದ್ರ ಸರ್ಕಾರವು ಈಗಾಗಲೇ ಅದನ್ನು ಮಂಜೂರು ಮಾಡಿದೆ ಎಂದು ತವಾಂಗ್ನ ಡೆಪ್ಯೂಟಿ ಕಮಿಷನರ್ ಕೆಸಾಂಗ್ ನ್ಗುರುಪ್ ದಾಮೊ ಎಎನ್ಐಗೆ ತಿಳಿಸಿದ್ದಾರೆ.
"ಬಿಎಸ್ಎನ್ಎಲ್ ಮತ್ತು ಏರ್ಟೆಲ್ ಹೊಸ ಮೊಬೈಲ್ ಟವರ್ಗಳನ್ನು ಸ್ಥಾಪಿಸಲಿವೆ. ಬಿಎಸ್ಎನ್ಎಲ್ 18 ಮೊಬೈಲ್ ಟವರ್ಗಳನ್ನು ಸ್ಥಾಪಿಸಲಿದೆ. ಏರ್ಟೆಲ್ 4 ಮೊಬೈಲ್ ಟವರ್ಗಳನ್ನು ಸ್ಥಾಪಿಸಲಿದೆ. ನಾವು ಈ ಮೊದಲು 45 ಮೊಬೈಲ್ ಟವರ್ಗಳನ್ನು ಸ್ಥಾಪಿಸಲು ಪ್ರಸ್ತಾವನೆಯನ್ನು ನೀಡಿದ್ದೆವು. ಕೇಂದ್ರ ಸರ್ಕಾರ ಸದ್ಯಕ್ಕೆ 22 ಮೊಬೈಲ್ ಟವರ್ಗಳಿಗೆ ಅನುಮೋದನೆ ನೀಡಿದೆ" ಎಂದು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳಿಗೆ ಮತ್ತು ನಾಗರಿಕರಿಗೆ ಉತ್ತಮ ಮೊಬೈಲ್ ಸಂಪರ್ಕವನ್ನು ಗುರಿಯಾಗಿಟ್ಟುಕೊಂಡು ಗಡಿ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕವನ್ನು ಸುಧಾರಿಸಲು ಸರ್ಕಾರವು ಈ ಕ್ರಮ ತೆಗೆದುಕೊಂಡಿದೆ. ರಕ್ಷಣಾ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.
ಇನ್ನು, ಈ 22 ಹೊಸ ಮೊಬೈಲ್ ಟವರ್ಗಳನ್ನು ಗಡಿ ಪ್ರದೇಶಗಳಾದ ಚುನಾ, ಯಾಂಗ್ಟ್ಸೆ, ದಮ್ಟೆಂಗ್ ಬುಮ್ಲಾ, ಕ್ಲೆಮ್ಟಾ, ವೈ ಜಂಕ್ಷನ್, ಟಿ ಗೊಂಪಾ ಪ್ರದೇಶ, ಲುಂಪೊ, ಜೆಮಿತಾಂಗ್ನಲ್ಲಿ ಸ್ಥಾಪಿಸಲಾಗುವುದು ಎಂದು ಕೆಸಾಂಗ್ ನ್ಗುರುಪ್ ದಾಮೊ ಹೇಳಿದ್ದಾರೆ.
ಟಿ ಗೊಂಪಾ ಪ್ರದೇಶದಲ್ಲಿ ಸೇನೆಗಾಗಿ 200 ಕಿಲೋವ್ಯಾಟ್ನ ಮಿನಿ ಹೈಡಲ್ ಯೋಜನೆಯನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೇ ಮಾಗೋಡು ಪ್ರದೇಶದಲ್ಲಿ ಮತ್ತೊಂದು ಮಿನಿ ಹೈಡಲ್ ಯೋಜನೆಯನ್ನು ಸರ್ಕಾರ ನಿರ್ಮಿಸಲಿದೆ. ಜೊತೆಗೆ ಬಯಲು ಸೀಮೆ ಪ್ರದೇಶಗಳಿಗೂ ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಯೋಜಿಸಿದೆ ಎಂದು ಉನ್ನತ ಅಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಡಳಿತವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಭಾರತ ಮತ್ತು ಚೀನಾ ನಡುವೆ ಗಡಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲೇ ಸರ್ಕಾರದ ಈ ಯೋಜನೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ನೋಡಲಾಗುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications