ಹಿಂದಿ ಹೇರಿಕೆಗೆ ಹೊಸ ಮಾರ್ಗ ಕಂಡುಕೊಂಡ ಕೇಂದ್ರ ಸರ್ಕಾರ: ಕಾಂಗ್ರೆಸ್ನಿಂದ ತೀವ್ರ ವಿರೋಧ
ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ. ಇಂಗ್ಲಿಷ್ ಅಕ್ಷರಗಳಲ್ಲಿ ಹಿಂದಿ ಭಾಷೆಯನ್ನು ಬಳಕೆ ಮಾಡಲಾಗುತ್ತಿದೆ. ಇದು ಹಿಂದಿಯೇತರ ಭಾಷೆ ಮಾತನಾಡುವ ಹಾಗೂ ದೇಶದ ವಿವಿಧ ಭಾಷಿಕರಿಗೆ ಮಾಡುವ ಅವಮಾನ ಎಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರ್ ಮಾಜಿ ಸಚಿವ ಪಿ ಚಿದಂಬರಂ ಅವರು, ಸಂಸತ್ತಿನಲ್ಲಿ ಪರಿಚಯಿಸಲಿರುವ ಮಸೂದೆಗಳ ಶೀರ್ಷಿಕೆಯಲ್ಲಿ ಸರ್ಕಾರವು ಇಂಗ್ಲಿಷ್ ಅಕ್ಷರಗಳಲ್ಲಿ ಹಿಂದಿ ಪದಗಳನ್ನು ಬಳಸುವುದನ್ನು ನಾನು ವಿರೋಧಿಸುತ್ತೇನೆ. ಸಂಸತ್ನಲ್ಲಿ ಇಲ್ಲಿಯವರೆಗೆ, ಮಸೂದೆಯ ಶೀರ್ಷಿಕೆಯನ್ನು ಇಂಗ್ಲಿಷ್ ಆವೃತ್ತಿಯಲ್ಲಿ ಇಂಗ್ಲಿಷ್ ಪದಗಳಲ್ಲಿ ಮತ್ತು ಮಸೂದೆಯ ಹಿಂದಿ ಆವೃತ್ತಿಯಲ್ಲಿ ಹಿಂದಿ ಪದಗಳಲ್ಲಿ ಬರೆಯುವ ಪದ್ಧತಿ ಇತ್ತು. 75 ವರ್ಷಗಳ ಆಚರಣೆಯಲ್ಲಿ ಯಾರೂ ಯಾವುದೇ ತೊಂದರೆಯ ಬಗ್ಗೆ ಮಾತನಾಡದೆ ಇದ್ದ ಸಂದರ್ಭದಲ್ಲಿ, ಸರ್ಕಾರ ಏಕೆ ಬದಲಾವಣೆ ಮಾಡಬೇಕು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮುಂದುವರಿದು ಈ ಬದಲಾವಣೆಯು ಹಿಂದಿ ಮಾತನಾಡದ ಜನರಿಗೆ ಮತ್ತು ಹಿಂದಿ ಹೊರತುಪಡಿಸಿ ಬೇರೆ ಅಧಿಕೃತ ಭಾಷೆಯನ್ನು ಹೊಂದಿರುವ ರಾಜ್ಯಗಳಿಗೆ ಅವಮಾನವಾಗಿದೆ. ಹಿಂದಿ ಮಾತನಾಡದ ಜನರು ಇಂಗ್ಲಿಷ್ ಅಕ್ಷರಗಳಲ್ಲಿ ಬರೆಯಲಾದ ಹಿಂದಿ ಪದಗಳಲ್ಲಿರುವ ಶೀರ್ಷಿಕೆಗಳೊಂದಿಗೆ ಮಸೂದೆ/ಕಾಯ್ದೆಯನ್ನು ಗುರುತಿಸಲು ಸಾಧ್ಯವಿಲ್ಲ; ಅಥವಾ ಅವರು ಮಸೂದೆ/ ಕಾಯ್ದೆಯ ಶೀರ್ಷಿಕೆಯನ್ನು ಉಚ್ಚರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಂಗ್ಲಿಷ್ ಸಹಾಯಕ ಅಧಿಕೃತ ಭಾಷೆಯಾಗಿ ಉಳಿಯುತ್ತದೆ ಎಂಬ ಭರವಸೆಯನ್ನು ಸತತ ಸರ್ಕಾರಗಳು ಪುನರುಚ್ಚರಿಸಿವೆ. ಆ ಭರವಸೆ ಮುರಿಯುವ ಅಪಾಯದಲ್ಲಿದೆ ಎಂದು ನಾನು ಆತಂಕಕ್ಕೆ ಒಳಗಾಗಿದ್ದೇನೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರದ ನಿರ್ಧಾರಕ್ಕೂ ವಿರೋಧ
ಇನ್ನು ಈಚೆಗೆ ಪಿ. ಚಿದಂಬರಂ ಅವರು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರ ನಿರ್ಧಾರಕ್ಕೂ ವಿರೋಧ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲಿ ಡ್ರಗ್ಸ್ ಮಾರಾಟ ಪ್ರಕರಣ ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದ್ದರು.
ಈ ರೀತಿ ಅವರು ಹೇಳುವಾಗ ವಿಶಾಲ ಕಾರ್ಯತಂತ್ರದ ಭಾಗವಾಗಿ ಮಾದಕ ದ್ರವ್ಯ ವ್ಯಾಪಾರದಲ್ಲಿ ಭಾಗಿಯಾಗಿರುವ ವಿದೇಶಿ ಪ್ರಜೆಗಳು ವಾಸಿಸುವ ಮನೆಗಳನ್ನು ನೆಲಸಮ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಅಲ್ಲದೇ ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದೂ ಎಚ್ಚರಿಕೆಯನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದರು. ಆದರೆ, ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿಯ ರೀತಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಾತನಾಡಿದ್ದು ವಿರೋಧಕ್ಕೆ ಕಾರಣವಾಗಿತ್ತು. ಇದಕ್ಕೂ ಪಿ.ಚಿದಂಬರಂ ಅವರು ಈಚೆಗೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ಕಾಂಗ್ರೆಸ್ ಸಹ ಗೃಹ ಸಚಿವ ಜಿ. ಪರಮೇಶ್ವರ್ ಅವರ ಹೇಳಿಕೆಯಿಂದ ಮುಜುಗರಕ್ಕೆ ಒಳಗಾದಂತೆ ಇತ್ತು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications