ಮಕ್ಕಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರದ ಮೊದಲ ಕ್ರಮವೇನು?
ನವದೆಹಲಿ, ಜೂನ್ 14: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ತೋರಲಿದೆ. ಈ ಅವಧಿಯಲ್ಲಿ ಅಧಿಕ ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗಲಿದ್ದಾರೆ ಎಂದು ಕೆಲವು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಲ್ಲಿ ಕೊರೊನಾ ಸೋಂಕಿನ ಸಾಧ್ಯತೆಗಳ ಕುರಿತು ಸಾಕಷ್ಟು ವರದಿಗಳು ಲಭ್ಯವಿಲ್ಲದಿದ್ದರೂ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.
ಇದೇ ನಿಟ್ಟಿನಲ್ಲಿ ಸರ್ಕಾರ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮಕ್ಕಳಿಗೆ ಆದ್ಯತೆಯಲ್ಲಿ ಲಸಿಕೆ ನೀಡುವ ಆಲೋಚನೆಯೊಂದಿಗೆ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗವನ್ನೂ ನಡೆಸಲಾಗುತ್ತಿದೆ. ಇದೀಗ 12-18ರ ವಯೋಮಾನದ 130 ಮಿಲಿಯನ್ ಮಕ್ಕಳಲ್ಲಿ 80% ಮಕ್ಕಳಿಗೆ ಲಸಿಕೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿರುವುದಾಗಿ ತಿಳಿದುಬಂದಿದೆ. ಮುಂದೆ ಓದಿ...

210 ಮಿಲಿಯನ್ ಡೋಸ್ ಲಸಿಕೆ ಅಗತ್ಯ
ಮಕ್ಕಳಿಗೆ ಮುಂಚಿತವಾಗಿಯೇ ಲಸಿಕೆ ನೀಡುವುದು ಕೊರೊನಾ ಸೋಂಕು ತಡೆಯುವ ಪ್ರಮುಖ ಸಾಧನವಾಗಲಿದೆ ಎಂದು ಕೇಂದ್ರ ಸರ್ಕಾರ ಲಸಿಕೆ ನೀಡಲು ಮುಂದಾಗಿದ್ದು, ಪ್ರಯೋಗಗಳನ್ನು ನಡೆಸುತ್ತಿದೆ. ಸದ್ಯಕ್ಕೆ 130 ಮಿಲಿಯನ್ ಮಕ್ಕಳಿಗೆ ಲಸಿಕೆ ನೀಡಲು 210 ಮಿಲಿಯನ್ ಡೋಸ್ ಲಸಿಕೆಗಳ ಸಂಗ್ರಹ ಅಗತ್ಯವಿರುವುದಾಗಿ ತಿಳಿದುಬಂದಿದೆ.

ಮಕ್ಕಳಲ್ಲಿ ಬೇರೆ ಬೇರೆ ಲಕ್ಷಣಗಳು ಗೋಚರ
ಮಕ್ಕಳಲ್ಲಿ ಕೊರೊನಾ ಸೋಂಕಿನ ಕುರಿತು ಪ್ರತಿಷ್ಠಿತ ಮಕ್ಕಳ ತಜ್ಞರೊಂದಿಗೆ ಲ್ಯಾನ್ಸೆಟ್ ಕಮಿಷನ್ ಇಂಡಿಯಾ ಕಾರ್ಯಪಡೆ ವರದಿ ಸಿದ್ಧಪಡಿಸಿದೆ. ಕೊರೊನಾ ಹೊಂದಿರುವ ಹೆಚ್ಚಿನ ಮಕ್ಕಳು ಲಕ್ಷಣ ರಹಿತರಾಗಿದ್ದಾರೆ. ಬಹುಪಾಲು ಮಕ್ಕಳಿಗೆ ಜ್ವರದೊಂದಿಗೆ ಉಸಿರಾಟದಲ್ಲಿ ಕೊಂಚ ತೊಂದರೆ ಕಾಣಿಸಿಕೊಳ್ಳುತ್ತಿದೆ. ಬೇಧಿ, ವಾಂತಿ ಹೊಟ್ಟೆ ನೋವಿನಂಥ ಜಠರಗರುಳಿನ ಸಮಸ್ಯೆಗಳು ಕಂಡುಬರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಬೇರೆಯದೇ ರೀತಿಯ ಲಕ್ಷಣಗಳು ಕಂಡುಬರುತ್ತಿವೆ. ಮಕ್ಕಳ ವಯಸ್ಸಿನ ಅನುಗುಣವಾಗಿ ಸೋಂಕಿನ ರೋಗಲಕ್ಷಣದ ತೀವ್ರತೆಯೂ ಇರುತ್ತದೆ. ವಯಸ್ಸು ಹೆಚ್ಚಾದಂತೆ ಸೋಂಕಿನ ಪ್ರಮಾಣವೂ ಹೆಚ್ಚಿರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2600 ಮಕ್ಕಳ ಸೋಂಕಿನ ವಿಶ್ಲೇಷಣೆ
ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಮಕ್ಕಳಲ್ಲಿನ ಸೋಂಕಿನ ಪ್ರಮಾಣದ ಮಾಹಿತಿ ಸಂಗ್ರಹಿಸಲಾಗಿದ್ದು, ಇದುವರೆಗೂ ಸೋಂಕಿನಿಂದ ಆಸ್ಪತ್ರೆ ಸೇರಿದ 10 ವರ್ಷಕ್ಕೂ ಕಡಿಮೆ ವಯಸ್ಸಿನ 2600 ಮಕ್ಕಳ ಪರಿಸ್ಥಿತಿ ವಿಶ್ಲೇಷಣೆ ಮಾಡಲಾಗಿದೆ. ತಮಿಳುನಾಡು, ಕೇರಳ, ಮಹಾರಾಷ್ಟ್ರ, ದೆಹಲಿಯ ಹತ್ತು ಆಸ್ಪತ್ರೆಗಳಲ್ಲಿ ದಾಖಲಾದ ಮಕ್ಕಳ ಪರಿಶೀಲನೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಿ ವಿಶ್ಲೇಷಣೆ ನಡೆಸಲಾಗಿದೆ. ಲಭ್ಯವಾದ ಈ ಮಾಹಿತಿಯಂತೆ, 10 ವರ್ಷ ಕೆಳಗಿನ ಮಕ್ಕಳ ಮರಣ ಪ್ರಮಾಣ 2.4% ಇದ್ದು, ಸಾವನ್ನಪ್ಪಿದ 40% ಮಕ್ಕಳಲ್ಲಿ ಇನ್ನಿತರ ಆರೋಗ್ಯ ಸಮಸ್ಯೆಗಳೂ ಇದ್ದವು ಎಂಬುದು ತಿಳಿದುಬಂದಿದೆ.

ದೇಶದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ
ಆಸ್ಪತ್ರೆಗೆ ಸೇರಿದ್ದ 10 ವರ್ಷ ಕೆಳಗಿನ ಮಕ್ಕಳಲ್ಲಿ 9% ಮಕ್ಕಳಿಗೆ ತೀವ್ರತರ ಜ್ವರ ಕಾಣಿಸಿಕೊಂಡಿತ್ತು ಎಂಬುದು ವಿಶ್ಲೇಷಣೆಯಿಂದ ತಿಳಿದುಬಂದಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಲಸಿಕೆ ನೀಡುವ ಸಿದ್ಧತೆ ನಡೆಸಲಾಗುತ್ತಿದೆ. ಏಮ್ಸ್ನ ಶೆಫಾಲಿ ಗುಲಾಟಿ, ಸುಶೀಲ್ ಕೆ ಕಬ್ರಾ ಹಾಗೂ ರಾಕೇಶ್ ಲೋಧಾ ಈ ಅಧ್ಯಯನ ನಡೆಸಿದ್ದಾರೆ.
-
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications