'ದಲಿತ' ಪದ ಪ್ರಯೋಗಕ್ಕೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ!
Recommended Video

ನವದೆಹಲಿ, ಸೆಪ್ಟೆಂಬರ್ 04: 'ದಲಿತ' ಎಂಬ ಪದಪ್ರಯೋಗ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. 'ದಲಿತ' ಪದದ ಬದಲು ಪರಿಶಿಷ್ಟ ಜಾತಿ ಎಂಬ ಪದಪ್ರಯೋಗ ಮಾಡುವಂತೆ ಅದು ಸೂಚಿಸಿದೆ.
'ದಲಿತ ಎಂಬ ಪದಬಳಕೆಗೆ ಸಂಬಂಧಿಸಿದಂತೆ ನಿರ್ದೇಶನ ನೀಡಬೇಕೆ?' ಎಂದು ಬಾಂಬೆ ಹೈಕೋರ್ಟಿನ ನಾಗ್ಪುರ ಬೆಂಚ್ ಕೇಂದ್ರ ಸರ್ಕಾರವನ್ನು ಕೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ದಲಿತ ಪದದ ಬದಲು ಪರಿಶಿಷ್ಟ ಜಾತಿ ಎಂಬ ಪದವನ್ನು ಬಳಕೆ ಮಾಡಲು ತಿಳಿಸಿದೆ.
ದಲಿತ ಎಂಬುದಕ್ಕೆ ಸಾಂವಿಧಾನಿಕ ಪದ ಪರಿಶಿಷ್ಟ ಜಾತಿ ಎಂದಾಗಿದ್ದು, ಇನ್ನು ಮೇಲೆ ಪ್ರಮಾಣ ಪತ್ರ ಅಥವಾ ಇನ್ನು ಯಾವುದೇ ಗುರುತಿನ ಚೀಟಿಗಳಲ್ಲಿ ಇದೇ ಪದವನ್ನು ಬಳಸುವಂತೆ ಕೇಂದ್ರ ಹೇಳಿದೆ.

ಈಗಾಗಲೇ ಈ ಕುರಿತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ಸೂಚನೆ ನೀಡಿದೆ. ಇನ್ನೊಂದು ತಿಂಗಳಿನಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಕಡೆಯಿಂದ ಎಲ್ಲಾ ಮಾಧ್ಯಗಮಳಿಗೆ ಈ ಕುರಿತು ಪ್ರಕಟಣೆ ನೀಡಲಾಗುವುದು ಎಂದು ಮಾಹಿತಿ-ಪ್ರಸಾರ ಸಚಿವಾಲಯ ತಿಳಿಸಿದೆ.












Click it and Unblock the Notifications