ಮೋದಿ ಸರಕಾರಕ್ಕೆ 3 ವರ್ಷ, 900 ನಗರಗಳಲ್ಲಿ 'ಮೋದಿ ಫೆಸ್ಟ್'
ಈ ಮೋದಿ ಫೆಸ್ಟ್ ನಲ್ಲಿ MODI ಎಂದರೆ 'Making of Developed India (MODI) ಎಂದು ಬಣ್ಣಿಸಲಾಗಿದೆ. ಈ 900 ಕಾರ್ಯಕ್ರಮಗಳಲ್ಲಿ ಬಿಜೆಪಿಯ 450 ನಾಯಕರು ಭಾಷಣ ಮಾಡಲಿದ್ದಾರೆ.ಮೇ 26 ರಿಂದ ಜೂನ್ 15 ರವರೆಗೆ ಈ ಕಾರ್ಯಕ್ರಮಗಳು ನಡೆಯಲಿವೆ.
ನವದೆಹಲಿ, ಮೇ 22: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ದೇಶದ 900 ನಗರಗಳಲ್ಲಿ 'ಮೋದಿ ಫೆಸ್ಟ್' ನಡೆಸಲು ತೀರ್ಮಾನಿಸಲಾಗಿದೆ. ಮೇ 26 ರಿಂದ ಜೂನ್ 15 ರವರೆಗೆ ಈ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿವೆ.
ಈ ಮೋದಿ ಫೆಸ್ಟ್ ನಲ್ಲಿ MODI ಎಂದರೆ 'Making of Developed India (MODI) ಎಂದು ಬಣ್ಣಿಸಲಾಗಿದೆ. ಈ 900 ಕಾರ್ಯಕ್ರಮಗಳಲ್ಲಿ ಬಿಜೆಪಿಯ 450 ನಾಯಕರು ಭಾಷಣ ಮಾಡಲಿದ್ದಾರೆ. ಈ ಮಾಹಿತಿಯನ್ನು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ನೀಡಿದ್ದಾರೆ.

ಕೇಂದ್ರ ಸಚಿವರು, ಸಂಸದರು, ಮುಖ್ಯಮಂತ್ರಿಗಳ ನೇತೃತ್ವದಲ್ಲೇ ಹೆಚ್ಚಿನ 'ಮೋದಿ ಫೆಸ್ಟ್' ನಡೆಯಲಿದೆ. ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಕೇರಳ, ಅಂಡಮಾನ್ ನಿಕೋಬಾರ್, ಛತ್ತೀಸ್ ಗಢ, ಅರುಣಾಚಲ ಪ್ರದೇಶಗಳಲ್ಲಿ ನಡೆಯುವ ಫೆಸ್ಟ್ ಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುವಾಹಟಿಯಿಂದ ಚಾಲನೆ
ಸಂಭ್ರಮಾಚರಣೆ ಕಾರ್ಯಕ್ರಮಗಳಿಗೆ ಗುವಾಹಟಿಯಲ್ಲಿ ಚಾಲನೆ ನೀಡಲಾಗುತ್ತದೆ. ಮೇ. 26ರಂದು ಗುವಾಹಟಿಯ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮಾಡಿದ ಸಾಧನೆಗಳು, ಕೈಗೊಂಡ ಜನಪರ ಯೋಜನೆಗಳನ್ನು ಸಾರ್ವಜನಿಕರ ಮುಂದಿಡುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications