ದೇಶದ ಪೊಲೀಸ್ ಆಧುನೀಕರಣಕ್ಕೆ 26,275 ಕೋಟಿ ರೂ. ಅನುದಾನ
ನವದೆಹಲಿ, ಫೆ. 14: ದೇಶದಲ್ಲಿ ಪೊಲೀಸರಿಗೆ ಗುಣಮಟ್ಟದ ಸಶಸ್ತ್ರ ಖರೀದಿ ಸೇರಿದಂತೆ ಪೊಲೀಸ್ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ 26,275 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ.
ಪೊಲೀಸ್ ಆಧುನೀಕರಣ, ಗುಣಮಟ್ಟದ ಸಶಸ್ತ್ರ ಖರೀದಿ, ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯಗಳ ಉನ್ನತೀಕರಣಕ್ಕಾಗಿ ಮುಂದಿನ ಐದು ವರ್ಷಗಳ ಅವಧಿಗೆ ಬಳಕೆ ಮಾಡಲು ಇಷ್ಟು ಮೊತ್ತದ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಸಂಬಂಧಿತ ವಿಚಾರ, ನಕ್ಸಲ್ ಪೀಡಿತ ರಾಜ್ಯಗಳಲ್ಲಿ ಅತ್ಯುತ್ತಮ ಪ್ರಯೋಗಾಲಯ, ಗುಣಮಟ್ಟದ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ತನಿಖಾ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಈ ಅನುದಾನ ಬಳಕೆ ಮಾಡಲಾಗುತ್ತದೆ.

ಈ ಕುರಿತು ಕೇಂದ್ರ ಗೃಹ ಇಲಾಖೆ ನೀಡಿರುವ ಹೇಳಿಕೆ ಪ್ರಕಾರ, ಭಾರತದ ಪೊಲೀಸ್ ವ್ಯವಸ್ಥೆ ಆಧುನೀಕರಣ, ಅದರ ಉಪ ಯೋಜನೆಗಳಿಗೆ ಬಳಕೆಗೆ 26, 275 ಕೋಟಿ ರೂ. ಅನುದಾನ ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ.
ಆಂತರಿಕ ಭದ್ರತೆ, ಕಾನೂನು ಸುವ್ಯವಸ್ಥೆ, ಪೊಲೀಸ್ ಆಧುನೀಕರಣ, ಮಾದಕ ವಸ್ತು ನಿಯಂತ್ರಣ, ನ್ಯಾಯ ವ್ಯವಸ್ಥೆ ಬದಲಾವಣೆ, ವಿಧಿ ವಿಜ್ಞಾನ ಪ್ರಯೋಗಾಲಯ ನಿರ್ಮಾಣಕ್ಕೆ ರಾಜ್ಯಗಳು ಈ ಅನುದಾನ ಸದ್ಭಳಕೆ ಮಾಡಿಕೊಳ್ಳಬಹುದು.

ಐದು ವರ್ಷದ ಅವಧಿಗೆ ದುಬಾರಿ ಮೊತ್ತವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
Recommended Video
ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ನಕ್ಸಲ್ ಪೀಡಿತ ಈಶಾನ್ಯ ವಲಯದ ರಾಜ್ಯಗಳಿಗೆ 18,839 ಕೋಟಿ ರೂ. ಬಳಕೆ ಮಾಡಲಾಗುತ್ತದೆ. ಉಳಿದ 4856 ಕೋಟಿ ರೂ. ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಲು ಕೇಂದ್ರ ಗೃಹ ಇಲಾಖೆ ಮುಂದಾಗಿದೆ. ಉಳಿದ 2080 ಕೋಟಿ ರೂ. ಅನುದಾನವನ್ನು ವೈಜ್ಞಾನಿಕ ತನಿಖಾ ವ್ಯವಸ್ಥೆ ಬಲ ಪಡಿಸಲು ರಾಜ್ಯಗಳಿಗೆ ನೀಡಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ











Click it and Unblock the Notifications