ಸಿಮಿ ಮೇಲೆ ಹೇರಿದ್ದ ನಿಷೇಧ ಇನ್ನೂ ಐದು ವರ್ಷ ಮುಂದುವರಿಕೆ
ನವದೆಹಲಿ, ಫೆಬ್ರವರಿ 2 : ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಯನ್ನು 'ಕಾನೂನು ವಿರೋಧಿ ಸಂಘಟನೆ' ಎಂದು ಘೋಷಿಸಿದೆ.
ಈ ಪ್ರಕಟಣೆಯನ್ನು ಕೇಂದ್ರ ಗೃಹ ಇಲಾಖೆ ಹೊರಡಿಸಿದ್ದು, ಈ ಕಾನೂನು ವಿರೋಧಿ ಸಂಘಟನೆಗೆ ಸಮಾಜದ ಸಾಮರಸ್ಯವನ್ನು ಕದಡುವ ಸಾಮರ್ಥ್ಯವಿದೆ ಮತ್ತು ಅದರ ಚಟುವಟಿಕೆಗಳು ದೇಶದ ಸುರಕ್ಷತೆಗೆ ಮಾರಕವಾಗಿವೆ. ಈ ಸಂಘಟನೆಯ ಮೇಲೆ ಹೇರಿದ್ದ ನಿಷೇಧವನ್ನು ಇನ್ನೂ ಐದು ವರ್ಷಕ್ಕೆ ಮುಂದುವರಿಸಲಾಗುವುದು ಎಂದು ಹೇಳಿದೆ.
ಕಳೆದ ಸರಕಾರವೇ 2014ರಲ್ಲಿ ಈ ಸಂಘಟನೆಯನ್ನು ನಿಷೇಧಿಸಿತ್ತು. ಈ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಮುಂದುವರಿಸಲಾಗಿದೆ. ಆದರೆ, ಈ ಸಂಘಟನೆಯನ್ನು ಪರ್ಮನಂಟ್ ಆಗಿ ಏಕೆ ಬ್ಯಾನ್ ಮಾಡುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಕೆಲವರು ತಡವಾಗಿಯಾದರೂ ಕೇಂದ್ರ ಸರಕಾರ ಸರಿಯಾದ ಕ್ರಮ ಜರುಗಿಸಿದೆ ಎಂದು ಶ್ಲಾಘಿಸಿದ್ದಾರೆ.

ಸಿಮಿ ಸಂಘಟನೆಯನ್ನು ಹಿಂದೆ ಕೂಡ ಹಲವಾರು ಬಾರಿ ನಿಷೇಧಿಸಲಾಗಿದೆ. ಮೊದಲ ಬಾರಿ ಅಮೆರಿಕದ ಮೇಲೆ 2001ರ ಸೆಪ್ಟೆಂಬರ್ 26ರಂದು ಭಯೋತ್ಪಾದಕ ದಾಳಿಯಾದ ನಂತರ ಸಿಮಿಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು. ನಂತರ 2003ರಿಂದ 2005ರವರೆಗೆ ಎರಡನೇ ಬಾರಿ ನಿಷೇಧಿಸಲಾಗಿತ್ತು. ನಂತರ ಮೂರನೇ ಬಾರಿ 2006ರ ಫೆಬ್ರವರಿ 8ರಂದು ಸಿಮಿಯನ್ನು ಬ್ಯಾನ್ ಮಾಡಲಾಗಿತ್ತು. 2008ರಲ್ಲಿ ಈ ನಿಷೇಧವನ್ನು ದೆಹಲಿ ಹೈಕೋರ್ಟ್ ತೆರವುಗೊಳಿಸಿತ್ತು. ಆದರೆ, ಅದರ ಮರುದಿನವೇ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು.
1977ರಲ್ಲಿ ಉತ್ತರ ಪ್ರದೇಶದ ಅಲಿಘರ್ ನಲ್ಲಿ ಸ್ಥಾಪಿತವಾದ ಈ ಸಂಘಟನೆ 20ಕ್ಕೂ ಹೆಚ್ಚು ವಿಧ್ವಂಸಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೂ ಸಂಪರ್ಕ ಹೊಂದಿದೆ. ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದಿನ್ ಇದೇ ಸಿಮಿಯ ಒಂದು ಶಾಖೆ ಎಂದು ಹೇಳಲಾಗುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications