ಯುಪಿಎಸ್ಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಸಿಗುವುದೇ?
ನವದೆಹಲಿ, ನ.19: ಕೇಂದ್ರೀಯ ಲೋಕಸೇವಾ ಆಯೋಗ(ಯುಪಿಎಸ್ ಸಿ) ದ ಹುದ್ದೆಗಳ ಆಕಾಂಕ್ಷಿಗಳ ವಯೋಮಿತಿ ಇಳಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅದರೆ, ಇನ್ನೂ ಅಧಿಕೃತ ಆದೇಶ ಹೊರ ಬಂದಿಲ್ಲ. ಅದರೆ, ಕೇಂದ್ರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈಗಾಗಲೇ ನೂತನ ಅಧಿಸೂಚನೆ ಹೊರಡಿಸಿದೆ.
ಕೇಂದ್ರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹೊರಡಿಸಿರುವ ನೂತನ ಅಧಿಸೂಚನೆಯಂತೆ ಇನ್ನು ಮುಂದೆ ಕೇಂದ್ರೀಯ ಲೋಕಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಮೋದಿ ಸರ್ಕಾರದ ಈ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದರಂತೆ 2015ರಲ್ಲಿ ಯುಪಿಎಸ್ ಸಿ ನಡೆಸುವ ಪರೀಕ್ಷೆಗಳಿಗೆ
* ಸಾಮಾನ್ಯ ವರ್ಗಕ್ಕೆ 30 ರಿಂದ 26,
* ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ 35 ರಿಂದ 29
* ಇತರೆ ಹಿಂದುಳಿದ ವರ್ಗಗಳಿಗೆ 33 ರಿಂದ 28ಕ್ಕಿಳಿಸಿದೆ.
ಎಲ್ಲಾ ವರ್ಗದ ವಿಕಲಚೇತನರಿಗೆ ಹೆಚ್ಚುವರಿಯಾಗಿ 2 ವರ್ಷ ನೀಡಲಾಗಿದೆ. ಕಳೆದ ತಡರಾತ್ರಿ ಕೇಂದ್ರ ಸರ್ಕಾರ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈ ಅಧಿಸೂಚನೆ ಹೊರಡಿಸಿದ್ದು, 2015ರಿಂದ ಕೇಂದ್ರೀಯ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ನೂತನ ನಿಯಮ ಅನ್ವಯವಾಗಲಿದೆ.

ಎಷ್ಟು ಬಾರಿ ಪರೀಕ್ಷೆ ಯತ್ನಿಸಬಹುದು:
* ಸಾಮಾನ್ಯ ವರ್ಗ: 3 ಬಾರಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ : 6
* ಇತರೆ ಹಿಂದುಳಿದ ವರ್ಗಗಳಿಗೆ : 5
ಈ ಹಿಂದೆ ಸಿಪಿಎಸ್ ಸಿ ಪರೀಕ್ಷೆಗಳಿಗೆ ವಯಸ್ಸಿನ ಮಿತಿಯನ್ನು ಇಳಿಕೆ ಮಾಡಬೇಕೆಂದು ಎರಡನೆ ಆಡಳಿತ ಸುಧಾರಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ ಇದನ್ನು ಅನುಷ್ಠಾನ ಮಾಡಲು ನಾನಾ ಕಾರಣಗಳನ್ನು ನೀಡಿ ಮುಂದೂಡಿತ್ತು. ಇದೀಗ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಸೂಚನೆ ಹೊರಡಿಸಿ ಹಲವಾರು ಆಕಾಂಕ್ಷಿಗಳ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಅದರೆ, ಈ ಬಗ್ಗೆ ಯಾವುದೇ ಸುತ್ತೋಲೆ ಬಂದಿಲ್ಲ ಎಂದು ಯುಪಿಎಸ್ ಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications