ಯುಪಿಎಸ್ಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಸಿಗುವುದೇ?
ನವದೆಹಲಿ, ನ.19: ಕೇಂದ್ರೀಯ ಲೋಕಸೇವಾ ಆಯೋಗ(ಯುಪಿಎಸ್ ಸಿ) ದ ಹುದ್ದೆಗಳ ಆಕಾಂಕ್ಷಿಗಳ ವಯೋಮಿತಿ ಇಳಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅದರೆ, ಇನ್ನೂ ಅಧಿಕೃತ ಆದೇಶ ಹೊರ ಬಂದಿಲ್ಲ. ಅದರೆ, ಕೇಂದ್ರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈಗಾಗಲೇ ನೂತನ ಅಧಿಸೂಚನೆ ಹೊರಡಿಸಿದೆ.
ಕೇಂದ್ರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹೊರಡಿಸಿರುವ ನೂತನ ಅಧಿಸೂಚನೆಯಂತೆ ಇನ್ನು ಮುಂದೆ ಕೇಂದ್ರೀಯ ಲೋಕಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಮೋದಿ ಸರ್ಕಾರದ ಈ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದರಂತೆ 2015ರಲ್ಲಿ ಯುಪಿಎಸ್ ಸಿ ನಡೆಸುವ ಪರೀಕ್ಷೆಗಳಿಗೆ
* ಸಾಮಾನ್ಯ ವರ್ಗಕ್ಕೆ 30 ರಿಂದ 26,
* ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ 35 ರಿಂದ 29
* ಇತರೆ ಹಿಂದುಳಿದ ವರ್ಗಗಳಿಗೆ 33 ರಿಂದ 28ಕ್ಕಿಳಿಸಿದೆ.
ಎಲ್ಲಾ ವರ್ಗದ ವಿಕಲಚೇತನರಿಗೆ ಹೆಚ್ಚುವರಿಯಾಗಿ 2 ವರ್ಷ ನೀಡಲಾಗಿದೆ. ಕಳೆದ ತಡರಾತ್ರಿ ಕೇಂದ್ರ ಸರ್ಕಾರ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈ ಅಧಿಸೂಚನೆ ಹೊರಡಿಸಿದ್ದು, 2015ರಿಂದ ಕೇಂದ್ರೀಯ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ನೂತನ ನಿಯಮ ಅನ್ವಯವಾಗಲಿದೆ.

ಎಷ್ಟು ಬಾರಿ ಪರೀಕ್ಷೆ ಯತ್ನಿಸಬಹುದು:
* ಸಾಮಾನ್ಯ ವರ್ಗ: 3 ಬಾರಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ : 6
* ಇತರೆ ಹಿಂದುಳಿದ ವರ್ಗಗಳಿಗೆ : 5
ಈ ಹಿಂದೆ ಸಿಪಿಎಸ್ ಸಿ ಪರೀಕ್ಷೆಗಳಿಗೆ ವಯಸ್ಸಿನ ಮಿತಿಯನ್ನು ಇಳಿಕೆ ಮಾಡಬೇಕೆಂದು ಎರಡನೆ ಆಡಳಿತ ಸುಧಾರಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ ಇದನ್ನು ಅನುಷ್ಠಾನ ಮಾಡಲು ನಾನಾ ಕಾರಣಗಳನ್ನು ನೀಡಿ ಮುಂದೂಡಿತ್ತು. ಇದೀಗ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಸೂಚನೆ ಹೊರಡಿಸಿ ಹಲವಾರು ಆಕಾಂಕ್ಷಿಗಳ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಅದರೆ, ಈ ಬಗ್ಗೆ ಯಾವುದೇ ಸುತ್ತೋಲೆ ಬಂದಿಲ್ಲ ಎಂದು ಯುಪಿಎಸ್ ಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications