8th Pay Commission: 8ನೇ ವೇತನ ಆಯೋಗ ರಚನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಮುಂದಿನ ತಿಂಗಳೂ ಸಿಹಿಸುದ್ದಿ!
ನವದೆಹಲಿ, ಜೂನ್. 22: ಕೇಂದ್ರ ಸರ್ಕಾರಿ ನೌಕರರು ಬಹು ನಿರೀಕ್ಷೆಯಿಂದ ಕಾಯುತ್ತಿರುವ 8ನೇ ವೇತನ ಆಯೋಗ (8th Pay Commission)ದ ಬಗ್ಗೆ 2024 ರ ಮುಂಬರುವ ಬಜೆಟ್ನಲ್ಲಿ ನಿರ್ಧಾರವಾಗುವ ಸಾಧ್ಯತೆಯಿದೆ. ಈಗಾಗಲೇ ಕೇಂದ್ರ ವೇತನ ಆಯೋಗವನ್ನು (CPC) ರಚಿಸಲು ಕೇಂದ್ರ ಸರ್ಕಾರವು ಸಮಗ್ರ ಪ್ರಸ್ತಾವನೆಯನ್ನು ಸ್ವೀಕರಿಸಿದೆ.
ಈ ಪ್ರಸ್ತಾವನೆಯು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೂಲ ವೇತನ, ಭತ್ಯೆಗಳು, ಪಿಂಚಣಿಗಳು ಮತ್ತು ಇತರ ಪ್ರಯೋಜನಗಳನ್ನು ಪರಿಶೀಲಿಸುವ ಮತ್ತು ಪರಿಷ್ಕರಿಸುವ ಗುರಿಯನ್ನು ಹೊಂದಿದೆ. ಜುಲೈನಲ್ಲಿ 8ನೇ ವೇತನ ಆಯೋಗ ರಚನೆಯಾಗುವ ಸಾಧ್ಯತೆಯುದೆ.

ಕೇಂದ್ರ ಸರ್ಕಾರಿ ನೌಕರರ ಜಂಟಿ ಸಲಹಾ ರಾಷ್ಟ್ರೀಯ ಮಂಡಳಿ (ಸಿಬ್ಬಂದಿ ಕಡೆ)ರಾಷ್ಟ್ರೀಯ ಕೌನ್ಸಿಲ್ (ಸಿಬ್ಬಂದಿ ಭಾಗ) ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಅವರು 8 ನೇ ಸಿಪಿಸಿ ರಚನೆಗೆ ಆದ್ಯತೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಂಪುಟ ಕಾರ್ಯದರ್ಶಿಗೆ ಬರೆದಿರುವ ವಿವರವಾದ ಪತ್ರದಲ್ಲಿ ಶಿವ ಗೋಪಾಲ್ ಮಿಶ್ರಾ ಅವರು ಸರ್ಕಾರಿ ನೌಕರರು ಎದುರಿಸುತ್ತಿರುವ ಆರ್ಥಿಕ ಸವಾಲುಗಳನ್ನು ಪರಿಹರಿಸಲು ಈ ಆಯೋಗ ಅತ್ಯಗತ್ಯ ಎಂದು ಹೇಳಿದ್ದಾರೆ.
ಹತ್ತು ವರ್ಷಕ್ಕೊಮ್ಮೆ ವೇತನ ಆಯೋಗ
ಕೇಂದ್ರ ಸರ್ಕಾರಿ ನೌಕರರ ವೇತನ ರಚನೆ, ಭತ್ಯೆಗಳು ಮತ್ತು ಪ್ರಯೋಜನಗಳ ಬದಲಾವಣೆಗಳನ್ನು ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ಪ್ರತಿ ಹತ್ತು ವರ್ಷಗಳಿಗೊಮ್ಮೆ ಕೇಂದ್ರ ವೇತನ ಆಯೋಗವನ್ನು ರಚಿಸಲಾಗುತ್ತದೆ. ದೇಶದಲ್ಲಿ ಏರುತ್ತಿರುವ ಹಣದುಬ್ಬರಕ್ಕೆ ಅಗತ್ಯವಾದ ಹೊಂದಾಣಿಕೆಗಳನ್ನು ಮಾಡಲು ಇದು ಸಹಾಯ ಮಾಡುತ್ತದೆ.
ಫೆಬ್ರವರಿ 28, 2014 ರಂದು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಸ್ಥಾಪಿಸಿದ 7 ನೇ ವೇತನ ಆಯೋಗವು ತನ್ನ ಶಿಫಾರಸುಗಳನ್ನು ಜನವರಿ 1, 2016 ರಿಂದ ಜಾರಿಗೆ ತಂದಿತು. 8ನೇ ವೇತನ ಆಯೋಗವನ್ನು ಜನವರಿ 1, 2026 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ. ಆದರೆ, ಸರ್ಕಾರವು ತನ್ನ ಔಪಚಾರಿಕವಾಗಿ ಈ ಬಗ್ಗೆ ಏನು ಘೋಷಿಸಿಲ್ಲ. 1 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಅಪ್ಡೇಟ್ಗಾಗಿ ಕಾಯುತ್ತಿದ್ದಾರೆ.

ಕೋವಿಡ್-19 ನಂತರದ ಹಣದುಬ್ಬರ ಸರ್ಕಾರಿ ನೌಕರರನ್ನು ಬಾಧಿಸುತ್ತಿದೆ. ಇದು ಸರಾಸರಿ 5.5 ಏರಿಕೆಯಾಗಿದೆ. "2016 ರಿಂದ 2023 ರವರೆಗೆ ದೈನಂದಿನ ಜೀವನಕ್ಕೆ ಅಗತ್ಯವಿರುವ ಅಗತ್ಯ ಸರಕುಗಳು ಮತ್ತು ಸರಕುಗಳ ಚಿಲ್ಲರೆ ಬೆಲೆಗಳು 80% ಕ್ಕಿಂತ ಹೆಚ್ಚಿವೆ. ಆದರೆ, ಜುಲೈ 1, 2023 ರಂತೆ ನಾವು ಕೇವಲ 46% ರಷ್ಟು ತುಟ್ಟಿಭತ್ಯೆಯನ್ನು ಪಡೆದಿದ್ದೇವೆ. ಬೆಲೆ ಏರಿಕೆ ಮತ್ತು ಪಿಂಚಣಿದಾರರಿಗೆ ಒದಗಿಸಲಾದ ಡಿಎ ನಡುವಿನ ಅಸಮಾನತೆ ಹೆಚ್ಚಿದೆ ಎಂದು ನೌಕರರು ಹೇಳುತ್ತಾರೆ.
ಜನವರಿ 1, 2024 ರಂತೆ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (DA) 50% ತಲುಪಿದ್ದರೂ, ಜನವರಿ 1 ರ ನಂತರ ನೇಮಕಗೊಂಡವರಿಗೆ ಪಿಂಚಣಿ ನಿಯಮಗಳ ಅಡಿಯಲ್ಲಿ ಪಿಂಚಣಿ ಮರುಸ್ಥಾಪಿಸಲು ಯಾವುದೇ ನಿರ್ಧಾರವಾಗಿಲ್ಲ. 20 ಲಕ್ಷಕ್ಕೂ ಹೆಚ್ಚು ನಾಗರಿಕ ಕೇಂದ್ರ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ (NPS) ತಮ್ಮ ಮೂಲ ವೇತನ ಮತ್ತು ಡಿಎ ಮಾಸಿಕ 10% ರಷ್ಟು ಕೊಡುಗೆ ನೀಡುತ್ತಾರೆ. ಇದರಿಂದ ಅವರ ಕೈಗೆ ಸಿಗುವ ವೇತನ ಅತ್ಯಂತ ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರ್ಕಾರಿ ನೌಕರರು ಎದುರಿಸುತ್ತಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ಸರ್ಕಾರಿ ಸೇವೆಯಲ್ಲಿ ಅರ್ಹ ಮತ್ತು ಪ್ರತಿಭಾವಂತ ಅಭ್ಯರ್ಥಿಗಳನ್ನು ನೌಕರಿಯತ್ತ ಸೆಳೆಯಲು ಮತ್ತು ಉಳಿಸಿಕೊಳ್ಳಲು 8 ನೇ ವೇತನ ಆಯೋಗದ ಸ್ಥಾಪನೆಯು ನಿರ್ಣಾಯಕವಾಗಿದೆ. ತಡಮಾಡದೆ 8ನೇ ಕೇಂದ್ರೀಯ ವೇತನ ಆಯೋಗವನ್ನು ರಚಿಸಬೇಕು ಎಂದು ಶಿವ ಗೋಪಾಲ್ ಮಿಶ್ರಾ ಒತ್ತಾಯಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications