24 ರಾಜ್ಯಗಳಿಗೆ 86,912 ಕೋಟಿ ರೂ. ಜಿಎಸ್ಟಿ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ
ನವದೆಹಲಿ, ಮೇ 31: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಭರ್ಜರಿ ಕೊಡುಗೆ ನೀಡಿದೆ. 2022ರ ಮೇ 31ರವರೆಗೆ ಎಲ್ಲಾ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪರಿಹಾರ ಬಾಕಿಗಳನ್ನು ತೆರವುಗೊಳಿಸಿದೆ. ಆ ಮೂಲಕ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಬರೋಬ್ಬರಿ 86,912 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
"ರಾಜ್ಯಗಳು ತಮ್ಮ ಸಂಪನ್ಮೂಲಗಳನ್ನು ನಿರ್ವಹಿಸುವುದಕ್ಕೆ ನೆರವಾಗಲು ಮತ್ತು ತಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಬಂಡವಾಳದ ಮೇಲಿನ ವೆಚ್ಚವನ್ನು ಈ ಹಣಕಾಸು ವರ್ಷದಲ್ಲಿ ಯಶಸ್ವಿಯಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ," ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಜಿಎಸ್ಟಿ ಪರಿಹಾರ ನಿಧಿಯಲ್ಲಿ 25 ಸಾವಿರ ಕೋಟಿ ರೂಪಾಯಿ ಮಾತ್ರ ಲಭ್ಯವಿದ್ದರೂ ಸರ್ಕಾರ ಸಂಪೂರ್ಣ ಪಾವತಿ ಮಾಡಿದೆ. ಬಾಕಿ ಹಣವನ್ನು ಕೇಂದ್ರದ ಸ್ವಂತ ಸಂಪನ್ಮೂಲಗಳಿಂದ ಸೆಸ್ ಸಂಗ್ರಹ ಬಾಕಿಯಿಂದ ಪಾವತಿಸಲಾಗಿದೆ.

ಬಾಕಿ ಚುಕ್ತಾ ಮಾಡಿದ ಕೇಂದ್ರ ಸರ್ಕಾರ!
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಬಿಡುಗಡೆಯಾದ ಒಟ್ಟು 86,912 ಕೋಟಿ ರೂಪಾಯಿಗಳಲ್ಲಿ 47,617 ಕೋಟಿ ರೂಪಾಯಿ ಮೌಲ್ಯದ ಪರಿಹಾರವು ಜನವರಿವರೆಗೆ ಬಾಕಿಯಾಗಿದ್ದರೆ, 21,322 ಕೋಟಿ ರೂಪಾಯಿ ಫೆಬ್ರವರಿ-ಮಾರ್ಚ್ನ ಬಾಕಿಯಾಗಿದೆ. ಅದೇ ರೀತಿ 17,973 ಕೋಟಿ ರೂಪಾಯಿ ಹಣವು ಏಪ್ರಿಲ್-ಮೇ ತಿಂಗಳ ಬಾಕಿ ಎಂದು ಹಣಕಾಸು ಸಚಿವಾಲಯವು ತಿಳಿಸಿದೆ.

ಕೋವಿಡ್-19 ಸಂದರ್ಭದಲ್ಲಿ ಸೆಸ್ ಸಂಗ್ರಹಣೆ ಇಳಿಕೆ
ಕಳೆದ 2017-18, 2018-19ರ ಅವಧಿಗೆ ರಾಜ್ಯಗಳಿಗೆ ದ್ವೈ-ಮಾಸಿಕ ಜಿಎಸ್ಟಿ ಪರಿಹಾರವನ್ನು ಪರಿಹಾರ ನಿಧಿಯಿಂದ ಸಮಯಕ್ಕೆ ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಸಂರಕ್ಷಿತ ಆದಾಯವು ಶೇ.14ರಷ್ಟು ಸಂಯೋಜಿತ ಬೆಳವಣಿಗೆಯಲ್ಲಿ ಬೆಳೆಯುತ್ತಿದೆ. ಆದರೆ ಸೆಸ್ ಸಂಗ್ರಹವು ಅದೇ ಅನುಪಾತದಲ್ಲಿ ಹೆಚ್ಚಾಗದ ಕಾರಣ, ಕೋವಿಡ್ -19 ರಕ್ಷಿತ ಆದಾಯ ಮತ್ತು ಸೆಸ್ ಸಂಗ್ರಹದಲ್ಲಿನ ಕಡಿತ ಸೇರಿದಂತೆ ನಿಜವಾದ ಆದಾಯದ ಸ್ವೀಕೃತಿಯ ನಡುವಿನ ಅಂತರ ಮತ್ತಷ್ಟು ಹೆಚ್ಚಿದೆ ಎಂದು ಸರ್ಕಾರ ಹೇಳಿದೆ.

ರಾಜ್ಯಗಳ ಸಂಪನ್ಮೂಲ ಕೊರತೆ ನೀಗಿಸಲು ಪರಿಹಾರ
ಅಲ್ಪ ಪ್ರಮಾಣದ ಪರಿಹಾರ ಬಿಡುಗಡೆಯಿಂದಾಗಿ ರಾಜ್ಯಗಳ ಸಂಪನ್ಮೂಲ ಅಂತರವನ್ನು ಪೂರೈಸಲು ಕೇಂದ್ರ ಸರ್ಕಾರವು 2020-21ರ ಸಾಲಿಗೆ ಸಂಬಂಧಿಸಿದಂತೆ 1.1 ಲಕ್ಷ ಕೋಟಿ ರೂಪಾಯಿ ಮತ್ತು 2021-22 ರಲ್ಲಿ 1.59 ಲಕ್ಷ ಕೋಟಿ ರೂಪಾಯಿ ಸಾಲವನ್ನು ಪಡೆದು ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ ಎಷ್ಟು ಜಿಎಸ್ಟಿ ಪರಿಹಾರವನ್ನು ಘೋಷಿಸಲಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡಿರುವ ಜಿಎಸ್ಟಿ ಪರಿಹಾರ ಎಷ್ಟು ಎಂಬುದನ್ನು ಈ ಪಟ್ಟಿಯಲ್ಲಿ ತಿಳಿದುಕೊಳ್ಳೋಣ.
ದಕ್ಷಿಣದ ರಾಜ್ಯಗಳಿಗೆ ಕೇಂದ್ರದ ಜಿಎಸ್ಟಿ ಪರಿಹಾರ:
* ಆಂಧ್ರ ಪ್ರದೇಶ - 3199 ಕೋಟಿ ರೂಪಾಯಿ
* ಗೋವಾ - 1291 ಕೋಟಿ ರೂಪಾಯಿ
* ಕರ್ನಾಟಕ - 8633 ಕೋಟಿ ರೂಪಾಯಿ
* ಕೇರಳ - 5693 ಕೋಟಿ ರೂಪಾಯಿ
* ಮಹಾರಾಷ್ಟ್ರ - 14145 ಕೋಟಿ ರೂಪಾಯಿ
* ತಮಿಳುನಾಡು - 9602 ಕೋಟಿ ರೂಪಾಯಿ
* ತೆಲಂಗಾಣ - 296 ಕೋಟಿ ರೂಪಾಯಿ

ಜಿಎಸ್ಟಿ ನೀತಿ ಜಾರಿಯಾಗಿದ್ದು ಯಾವಾಗ?
ಕಳೆದ 2017ರ ಜುಲೈ 1ರಂದು ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ನೀತಿ(ಜಿಎಸ್ಟಿ)ಯನ್ನು ಪರಿಚಯಿಸಲಾಯಿತು. ಐದು ವರ್ಷಗಳ ಅವಧಿಗೆ GST (ರಾಜ್ಯಗಳಿಗೆ ಪರಿಹಾರ) ಕಾಯಿದೆ, 2017ರ ನಿಬಂಧನೆಗಳ ಪ್ರಕಾರ GST ಅನುಷ್ಠಾನದ ಖಾತೆಯಲ್ಲಿ ಉಂಟಾಗುವ ಯಾವುದೇ ಆದಾಯದ ನಷ್ಟಕ್ಕೆ ಪರಿಹಾರಕ್ಕಾಗಿ ರಾಜ್ಯಗಳಿಗೆ ಭರವಸೆ ನೀಡಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications