Ayushman Bharat: ದೇಶದ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ದೀಪಾವಳಿ ಗಿಪ್ಟ್
ನವದೆಹಲಿ, ಅಕ್ಟೋಬರ್ 29: ಭಾರತದಲ್ಲಿ ಕಳೆದ ಸೆಪ್ಟಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದ್ದ 'ಆಯುಷ್ಮಾನ್ ಪ್ರಧಾನಮಂತ್ರಿ ಜನ ಆರೋಗ್ಯ' ಯೋಜನೆ ಹಾಗೂ ಬಹುಕೋಟಿ ಮೊತ್ತದ ಯೋಜನೆಗಳಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಹಿರಿಯ ನಾಗರಿಕರ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಕೇಂದ್ರವು ಮಹತ್ವದ ಯೋಜನೆಗೆ (ABPMJAY) ಗ್ರೀನ್ ಸಿಗ್ನಲ್ ನೀಡಿದೆ.
ಈ ಯೋಜನೆಗಳಿಂದ ದೇಶದ ಸುಮಾರು 06 ಕೋಟಿ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯ ಖಚಿತತೆ ಲಭ್ಯವಾಗುತ್ತಿದೆ. ಅಂದರೆ ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ 70 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ 5 ಲಕ್ಷ ರೂಪಾಯಿವರೆಗಿನ ಆರೋಗ್ಯ ವಿಮಾ ಯೋಜನೆ ಇದಾಗಿದೆ.

ಈ ಆಯುಷ್ಮಾನ್ ಭಾರತ್ ಯೋಜನೆ ಹಾಗೂ U-WIN ಪೋರ್ಟಲ್ ಅನ್ನು ಸಹ ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ದೇಶದ 4.5 ಕೋಟಿ ಕುಟುಂಬಗಳು ಹಾಗೂ ಒಟ್ಟು ಆರು ಕೋಟಿ ವೃದ್ಧರಿಗೆ ಈ 'ಆಯುಷ್ಮಾನ್ ಪ್ರಧಾನಮಂತ್ರಿ ಜನ ಆರೋಗ್ಯ' (ABPMJAY) ಯೋಜನೆ ಸಹಾಯ ಮಾಡಲಿದೆ.
ಕಡಿಮೆ ಆದಾಯ ಹೊಂದಿರುವವರು ಮಾತ್ರವಲ್ಲದೇ ಕಡು ಬಡವರು, ಮಧ್ಯಮ ವರ್ಗದವರು, ಮೇಲ್ಮಧ್ಯಮ ವರ್ಗದವರಿ (ಶ್ರೀಮಂತರು) ಒಳಗೊಂಡಂತೆ ಜಾತಿ ಭೇದ ಇಲ್ಲದೇ 70 ವರ್ಷ ಇಲ್ಲವೇ ಅದಕ್ಕಿಂತ ಹೆಚ್ಚು ವಯಸ್ಸಾದವರು ಈ ಯೋಜನೆ ಫಲಾನುಭವಿಗಳಾಗುತ್ತಾರೆ.
ರೂ. 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ
ಯೋಜನೆಯಡಿ ಒಮ್ಮೆ ನೋಂದಣಿಯಾದರೆ ಫಲಾನುಭವಿ ಹಿರಿಯ ನಾಗರಿಕರು AB PMJAY ನೆಟ್ವರ್ಕ್ ಅಡಿಯಲ್ಲಿ ದೇಶದ, ನಿಮ್ಮ ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ರೂ. 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು. ಇದು ಸೇರಿದಂತೆ ಹಲವು ಸೌಲಭ್ಯಗಳು ಈ ಯೋಜನೆಯಿಂದ ದೊರಕಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ಯೋಜನೆ ವ್ಯಾಪ್ತಿಯಡಿ ಈಗಾಗಲೇ ಅರ್ಹ ಹಿರಿಯ ನಾಗರಿಕರು ನೋಂದಣಿ ಮಾಡಿಕೊಂಡಿದ್ದರೆ, ಹೊಸ ಯೋಜನೆ ಜಾರಿ ಬಳಿಕ ನಿಮ್ಮ ಕಾರ್ಡ್ಗೆ ಹೆಚ್ಚುವರಿ ಅನುದಾನ ಸೇರ್ಪಡೆಯಾಗಲಿದೆ. ನಿಮಗೆ ಪ್ರತಿ ವರ್ಷ 5 ಲಕ್ಷವರೆಗೆ ವಿಮೆ ಅನುದಾನದಡಿ ಚಿಕಿತ್ಸೆ ಪಡೆಯಲು ಅರ್ಹರಾಗುತ್ತೀರಿ.
ವಿಶೇಷವೆಂದರೆ ಸರ್ಕಾರದ ಇತರ ಯಾವುದೇ ಯೋಜನೆ, ಆರೋಗ್ಯ ವಿಮೆ ಪಡೆದುಕೊಂಡಿದ್ದರೂ ಸಹಿತ ಈ ಯೋಜನೆಯ ಲಾಭವನ್ನು ಅರ್ಹರು ಫಲಾನುಭವಿಗಳಾಗುತ್ತಾರೆ. ಕೇಂದ್ರ ಇತರ ಪಡೆಗಳಲ್ಲಿ ಕಾರ್ಯನಿರ್ವಹಿಸಿದ್ದವರು, ಅದರೊಂದಿಗೆ ಈ ಆಯಷ್ಮಾನ್ ಭಾರತ್ ಯೋಜನೆ ಆರೋಗ್ಯ ಲಾಭ ಪಡೆದುಕೊಳ್ಳಬಹುದು ಎಂದು ಕೇಂದ್ರವು ಮಾಹಿತಿ ನೀಡಿದೆ.
ಖಾಸಗಿ ಕಂಪನಿ ಆರೋಗ್ಯ ವಿಮೆ ಪಡೆದವರು ಅರ್ಹರು
ಮುಖ್ಯ ವಿಷಯವೆಂದರೆ 70 ವರ್ಷ ಮೇಲ್ಪಟ್ಟವರು ಖಾಸಗಿ ಕಂಪನಿಗೆ ಆರೋಗ್ಯ ವಿಮೆ ಇಲ್ಲವೇ ಸರ್ಕಾರಿ ನೌಕರರಿಗೆ ನೀಡುವ ವಿಮಾ ಯೋಜನೆ ಇದ್ದರೂ ಸಹಿತ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಪಡೆಯಬಹುದಾಗಿದೆ.
ಆಯುಷ್ಮಾನ್ ಕಾಡ್ ಹೊಂದಿದ ನಾಗರಿಕರಿಗೆ ಐದು ಲಕ್ಷ ರೂ.ವರೆಗೆ ನಿಗಿದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸಿಗಲಿದೆ. ವೈದ್ಯಕೀಯ ತಪಾಸಣೆ, ಚಿಕಿತ್ಸೆ, ಔಷಧಿ, ಇತರ ಪೂರಕ ಚಿಕಿತ್ಸೆ, ತೀವ್ರ ನಿಗಾ ಘಟಕ ಇನ್ನಿತರ ಸೇವೆಗಳು ಈ ಯೋಜನೆಯಡಿ ಸಿಗಲಿವೆ..
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications