Sugar Export Ban: ಅಕ್ಟೋಬರ್ನಿಂದ ಸಕ್ಕರೆ ರಫ್ತು ಬ್ಯಾನ್: ಭಾರತ
ಬೆಂಗಳೂರು, ಆಗಸ್ಟ್ 23: ಭಾರತದಲ್ಲಿ ನಿರೀಕ್ಷೆ ಮಳೆ ಆಗದೇ ಕೊರತೆ ಸೃಷ್ಟಿಯಾಗಿದ್ದರಂದ ಕಬ್ಬಿನ ಇಳುವರಿ ಕಡಿಮೆ ಆಗಿದೆ. ಈ ಸಂಬಂಧ ಭಾರತ ಸರ್ಕಾರ ಅಕ್ಟೋಬರ್ ತಿಂಗಳಲ್ಲಿ ಸಕ್ಕರೆ ರಫ್ತು ಅನ್ನು ನಿಷೇಧಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಭಾರತದ ಅನೇಕ ಕಡೆ ನಿರೀಕ್ಷಿತ ಮಳೆ ಕೊರತೆ ಉಂಟಾಗಿದೆ. ಇದರಿಂದ ಕಬ್ಬು-ಉತ್ಪಾದಿಸುವ ಪ್ರದೇಶಗಳಲ್ಲಿ ಪರಿಣಾಮ ಬೀರುತ್ತದೆ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಸರಾಸರಿಗಿಂತ ಶೇಕಡಾ 50 ಪ್ರತಿಶತದಷ್ಟು ಕಡಿಮೆ ಆಗಿದೆ.

ಏಳು ವರ್ಷಗಳಲ್ಲಿ ಸಂಭವಿಸದ ಭಾರತೀಯ ಸಕ್ಕರೆ ರಫ್ತಿನ ಮೇಲಿನ ನಿಷೇಧವು ಜಾಗತಿಕ ಮಾನದಂಡದ ಬೆಲೆಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಅಲ್ಲದೇ ಜಾಗತಿಕ ಆಹಾರ ಮಾರುಕಟ್ಟೆಗಳಲ್ಲಿ ಹಣದುಬ್ಬರ ಸಹ ಹೆಚ್ಚಿಸಬಹುದು ಎನ್ನಲಾಗುತ್ತಿದೆ.
ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಗರಿಷ್ಠ ಶೇಕಡಾ 7.4 ರಷ್ಟಿದ್ದದ್ದು ಶೇಕಡಾ 11.5 ಕ್ಕೆ ಏರಿಕೆ ಆಗಿದ್ದು, ಈ ಕುರಿತು ಕಳವಳ ವ್ಯಕ್ತಪಡಿಸಿರುವ ಭಾರತ ಹಣದುಬ್ಬರ ಹೆಚ್ಚಾಗದಂತೆ ತಡೆಯಲು ಈ ರಫ್ತು ನಿಷೇಧ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಪ್ರಸಕ್ತ ವರ್ಷ ಕಬ್ಬು ಇಳುವರಿ ಇಳಿಕೆ
2023-24 ಪ್ರಸಕ್ತತುವಿನಲ್ಲಿ ದೇಶದ ಸಕ್ಕರೆ ಉತ್ಪಾದನೆಯು ಶೇಕಡಾ 3.3 ರಷ್ಟು ಅಂದರೆ ಪ್ರತಿ ವರ್ಷಕ್ಕಿಂತ 31.7 ಮಿಲಿಯನ್ ಟನ್ಗಳಿಷ್ಟು ಇಳಿಯಬಹುದು. ಭಾರತವು ಪ್ರಸಕ್ತ ಋತುವಿನಲ್ಲಿ ಕೇವಲ 6.1 ಮಿಲಿಯನ್ ಟನ್ ಸಕ್ಕರೆ ರಫ್ತು ಮಾಡಲು ಗಿರಣಿಗಳಿಗೆ ಅನುಮತಿ ನೀಡಿತ್ತು.
ಇನ್ನು ಭಾರತೀಯ ಅಧಿಕಾರಿಗಳು ಸ್ಥಳೀಯ ಸಕ್ಕರೆ ಅಗತ್ಯತೆಗಳು ಮತ್ತು ಹೆಚ್ಚುವರಿ ಕಬ್ಬಿನಿಂದ ಎಥೆನಾಲ್ ಉತ್ಪಾದನೆ ಮಾಡುವಲ್ಲಿ ಆದ್ಯತೆ ನೀಡುತ್ತಿದ್ದಾರೆ. ಆದರೆ ಸರ್ಕಾರ ಸ್ಥಳೀಯ ಸಕ್ಕರೆ ಅಗತ್ಯತೆ- ಬೇಡಿಕೆ ಪೂರೈಸುವುದು ಮತ್ತು ಹೆಚ್ಚುವರಿ ಕಬ್ಬಿನಿಂದ ಎಥೆನಾಲ್ ಅನ್ನು ಉತ್ಪಾದಿಸುವಲ್ಲಿ ಗಮನ ನೀಡುತ್ತದೆ ಎಂದು ಸರ್ಕಾರಿ ಮೂಲವು ಸುದ್ದಿ ಸಂಸ್ಥೆಗೆ ತಿಳಿಸಿದೆ.
ಆಹಾರ ಹಣದುಬ್ಬರದ ಉಂಟಾದಂತೆ ಸಂಭಾವ್ಯ ಪ್ರಭಾವ ಅರಿತು ಸರ್ಕಾರ ದೇಶದಲ್ಲಿ ಆಂತರಿಕ ಸಕ್ಕರೆ ಸರಬರಾಜು ಮತ್ತು ಸ್ಥಿರ ಬೆಲೆ ಖಚಿತಪಡಿಸಿಕೊಳ್ಳಲು ಗುರಿ ಹೊಂದಿದೆ. ಹೀಗಾಗಿ ಸಕ್ಕರೆ ರಫ್ತುವಿನ ಮೇಲೆ ನಿರ್ಬಂಧ ವಿಧಿಸಲು ಸರ್ಕಾರ ಮುಂದಾಗಿದೆ.
ಭಾರತದಿಂದ ರಫ್ತು ನಿಷೇಧವು ಥೈಲ್ಯಾಂಡ್ನಲ್ಲಿನ ಉತ್ಪಾದನೆ ನಿರ್ಬಂಧವು ಮತ್ತು ಉತ್ಪಾದನೆ ಕೊರತೆಯನ್ನು ಸಂಪೂರ್ಣವಾಗಿ ಸರಿದೂಗಿಸಲು ಪ್ರಮುಖ ಉತ್ಪಾದಕ ಬ್ರೆಜಿಲ್ನ ಅಸಮರ್ಥತೆಯು ಜಾಗತಿಕ ಪೂರೈಕೆಯ ಕಾಳಜಿ ಉಲ್ಬಣಗೊಳಿಸಬಹುದು. ಭಾರತ ಈ ನಿರ್ಧಾರವು ಜಾಗತಿಕ ಸಕ್ಕರೆ ಮಾರುಕಟ್ಟೆಗಳ ಮೆಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications