ಸೆಂಟ್ರಲ್ ವಿಸ್ಟಾ ಹೊಸ ಸಂಸತ್ತಿನ ಕಟ್ಟಡವನ್ನು ವಿನ್ಯಾಸಗೊಳಿಸಿದ ವ್ಯಕ್ತಿ ಇವರೇ ನೋಡಿ
ನವದೆಹಲಿ, ಸೆಪ್ಟೆಂಬರ್ 19: ನವದೆಹಲಿಯಲ್ಲಿ ನಿರ್ಮಾಣವಾಗಿರುವ ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಮೇ 27 ರಂದು ಉದ್ಘಾಟಿಸಲಾಗಿದೆ. ಆದರೆ ಹೊಸದಾಗಿ ನಿರ್ಮಿಸಲಾದ ರಚನೆಯಲ್ಲಿ ಇನ್ನೂ ಯಾವುದೇ ಅಧಿವೇಶನಗಳನ್ನು ನಡೆಸಲಾಗಿಲ್ಲ. ಈಗ ಸಂಸತ್ ವಿಶೇಷ ಅಧಿವೇಶನವನ್ನು ಹೊಸ ಕಟ್ಟದಲ್ಲಿ ನಡೆಸಲು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಹೊಸ ಸಂಸತ್ ಕಟ್ಟಡವನ್ನು ಬಿಮಲ್ ಪಟೇಲ್ ಎಂಬುವವರು ವಿನ್ಯಾಸಗೊಳಿಸಿದ್ದಾರೆ. ಬಿಮಲ್ ಪಟೇಲ್ ವಾಸ್ತುಶಿಲ್ಪ ಕ್ಷೇತ್ರದಲ್ಲಿ ಪ್ರಮುಖ ಹೆಸರು ಮತ್ತು ಹೊಸ ಸಂಸತ್ತಿನ ಕಟ್ಟಡದ ವಿನ್ಯಾಸಕಾರರಾಗಿದ್ದಾರೆ. ಇವರು ಗುಜರಾತ್ ಮೂಲದ ವಾಸ್ತುಶಿಲ್ಪಿ ಬಿಮಲ್ ಪಟೇಲ್ ಅವರು ಕಾಶಿ ವಿಶ್ವನಾಥ ಕಾರಿಡಾರ್ನ ಹಿಂದಿನ ವಿನ್ಯಾಸದ ವ್ಯಕ್ತಿಯೂ ಹೌದು. ಅವರು ಈ ಮೊದಲು ಸಾಬರಮತಿ ರಿವರ್ಫ್ರಂಟ್ ಯೋಜನೆಯನ್ನೂ ವಿನ್ಯಾಸಗೊಳಿಸಿದ್ದರು.

ಬಿಮಲ್ ಪಟೇಲ್ ಯಾರು?:
ಬಿಮಲ್ ಹಸ್ಮುಖ್ ಪಟೇಲ್ ಅವರು ಮೂರು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಪ್ರಸಿದ್ಧ ವಾಸ್ತುಶಿಲ್ಪಿ. ಪಟೇಲ್ ಅವರು ಅಹಮದಾಬಾದ್ನ ಸಿಇಪಿಟಿ ವಿಶ್ವವಿದ್ಯಾಲಯದ ಅಧ್ಯಕ್ಷರಾಗಿದ್ದಾರೆ. ಅವರು HCP ವಿನ್ಯಾಸ ಯೋಜನೆ ಮತ್ತು ನಿರ್ವಹಣೆ ಪ್ರೈವೇಟ್ ಲಿಮಿಟೆಡ್ನ ಮುಖ್ಯಸ್ಥರಾಗಿದ್ದಾರೆ. HCP ಡಿಸೈನ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಅನ್ನು ಅವರ ತಂದೆ ಹಸ್ಮುಖ್ ಸಿ ಪಟೇಲ್ 1960 ರಲ್ಲಿ ಸ್ಥಾಪಿಸಿದ್ದರು.
ಬಿಮಲ್ ಪಟೇಲ್ ಅಹಮದಾಬಾದ್ನ ಸೇಂಟ್ ಕ್ಸೇವಿಯರ್ಸ್ ಹೈಸ್ಕೂಲ್ನಲ್ಲಿ ಶಿಕ್ಷಣ ಪಡೆದರು. ಶಾಲೆಯ ವಿದ್ಯಾಭ್ಯಾಸ ಪೂರ್ಣಗೊಳಿಸಿದ ನಂತರ ಅವರು ಸ್ಕೂಲ್ ಆಫ್ ಆರ್ಕಿಟೆಕ್ಚರ್, ಸೆಂಟರ್ ಫಾರ್ ಎನ್ವಿರಾನ್ಮೆಂಟಲ್ ಪ್ಲಾನಿಂಗ್ ಅಂಡ್ ಟೆಕ್ನಾಲಜಿ ಕಲಿಯಲು CEPT ಗೆ ಹೋದರು. ಬಳಿಕ ಬಿಮಲ್ ಅವರು 1995 ರಲ್ಲಿ ಯುಎಸ್ನ ಯುಸಿ ಬರ್ಕ್ಲಿನಲ್ಲಿ ಪಿಎಚ್ಡಿ ಪಡೆದರು.
ಬಿಮಲ್ ಪಟೇಲ್ ಅವರಿಗೆ 2019 ರಲ್ಲಿ ಪದ್ಮಶ್ರೀ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಬಿಮಲ್ ಪಟೇಲ್ ಅವರ ಸಂಸ್ಥೆಯು ಹೊಸ ಸಂಸತ್ತು ಸೇರಿದಂತೆ ಮಹತ್ವಾಕಾಂಕ್ಷೆಯ ಯೋಜನೆಗೆ ಸಲಹಾ ಸೇವೆಗಳಿಗಾಗಿ 229.75 ಕೋಟಿ ರೂಪಾಯಿಗಳನ್ನು ಪಡೆದಿದೆ ಎನ್ನಲಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications