ಕೇಂದ್ರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ; ಮಲ್ಲಿಕಾರ್ಜುನ ಖರ್ಗೆ ಆರೋಪ
ನವದೆಹಲಿ, ಜುಲೈ 27: ಪೆಗಾಸಸ್ ಬೇಹುಗಾರಿಕೆ ಪ್ರಕರಣ ಸಂಬಂಧ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, "ದೇಶದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಈ ಪ್ರಕರಣವನ್ನು ಪ್ರಜಾಪ್ರಭುತ್ವ ಮಾರ್ಗದಲ್ಲಿ ಪರಿಹರಿಸಲು ಕೇಂದ್ರ ಸಿದ್ಧವಿಲ್ಲ" ಎಂದು ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಕೇಂದ್ರ ಸರ್ಕಾರವೇ ಪೆಗಾಸಸ್ ಬೇಹುಗಾರಿಕೆಗೆ ಅವಕಾಶ ನೀಡಿದಂತಿದೆ. ನ್ಯಾಯಾಧೀಶರ, ಸೇನಾಧಿಕಾರಿಗಳ, ಪತ್ರಕರ್ತರ, ವಿರೋಧ ಪಕ್ಷಗಳ ನಾಯಕರ ಮೇಲೆ ಕಣ್ಗಾವಲಿಗೆ ಅವಕಾಶ ನೀಡಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
"ಕಣ್ಗಾವಲು ನಡೆಸಲು ಕೇಂದ್ರದ ಅನುಮತಿ ಬೇಕು ಎಂದು ಐಟಿ ಕಾಯ್ದೆ ಹೇಳುತ್ತದೆ. ಕೇಂದ್ರವೇ ಇದಕ್ಕೆ ಅನುಮತಿ ನೀಡಿದಂತೆ ಕಾಣುತ್ತಿದೆ. ವಿಶ್ಬದ ಯಾವ ಪ್ರಜಾಪ್ರಭುತ್ವವೂ ಹೀಗೆ ಮಾಡಲು ಸಾಧ್ಯವಿಲ್ಲ. ಈ ಕುರಿತ ಚರ್ಚೆಗೆ ವಿರೋಧ ಪಕ್ಷ ಸಿದ್ಧವಿದೆ. ಕೇಂದ್ರ ಸರ್ವಪಕ್ಷ ಸಭೆ ಕರೆಯಬೇಕು" ಎಂದು ಆಗ್ರಹಿಸಿದ್ದಾರೆ.

"ದೇಶದಲ್ಲಿ ಸರ್ವಾಧಿಕಾರ, ನಿರಂಕುಶ ಆಡಳಿತವಿದೆ. ಈ ಪ್ರಕರಣವನ್ನು ಪ್ರಜಾಪ್ರಭುತ್ವದ ಮಾರ್ಗದಲ್ಲಿ ನಿರ್ವಹಿಸಲು ಮೋದಿ ಸಿದ್ಧರಿಲ್ಲ. ಈ ವಿಷಯದ ಕುರಿತು ನಾವೆಲ್ಲರೂ ಹೋರಾಟ ಮುಂದುವರೆಸುತ್ತೇವೆ" ಎಂದು ಹೇಳಿದರು.
ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶ ಬಳಸಿಕೊಂಡು ಭಾರತದ ಪ್ರಮುಖ ಪತ್ರಕರ್ತರು, ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿರುವುದಾಗಿ ಈಚೆಗೆ "ದಿ ವೈರ್" ವರದಿ ಮಾಡಿತ್ತು.
ಕೆಲವು ಸಚಿವರು, ವಿರೋಧ ಪಕ್ಷಗಳ ನಾಯಕರು, ಕಾನೂನು ಕ್ಷೇತ್ರದವರು ಉದ್ಯಮಿಗಳು, ಅಧಿಕಾರಿಗಳು, ವಿಜ್ಞಾನಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿ ಸುಮಾರು 300 ಭಾರತೀಯರ ಮೊಬೈಲ್ಗಳು ಹ್ಯಾಕ್ ಆಗಿವೆ ಎಂದು ವರದಿ ತಿಳಿಸಿದೆ. ಫೋನ್ಗಳಲ್ಲಿ ನಡೆಸಿದ ವಿಧಿ ವಿಜ್ಞಾನ ಪರೀಕ್ಷೆಗಳು ಪೆಗಾಸಸ್ ತಂತ್ರಾಂಶ ಬಳಕೆಯನ್ನು ಬಹಿರಂಗಪಡಿಸಿತ್ತು.
ಇಸ್ರೇಲಿ ಸೈಬರ್-ಆರ್ಮ್ಸ್ ಸಂಸ್ಥೆ ಎನ್ಎಸ್ಒ ಗ್ರೂಪ್ ಟೆಕ್ನಾಲಜೀಸ್ ಲಿಮಿಟೆಡ್ ತಯಾರಿಸಿದ ಪೆಗಾಸಸ್ ಸಾಫ್ಟ್ವೇರ್ ಅತ್ಯಂತ ಸುಧಾರಿತವಾಗಿದ್ದು, ಮಾಲೀಕರೊಂದಿಗೆ ಯಾವುದೇ ಸಂವಹನವಿಲ್ಲದೆ ಮೊಬೈಲ್ ಫೋನ್ ಹ್ಯಾಕ್ ಮಾಡಬಲ್ಲ ತಂತ್ರಾಂಶ ಆಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications