ಮ್ಯಾಪಿಂಗ್ ನೀತಿಯಲ್ಲಿ ಭಾರಿ ಬದಲಾವಣೆ ಪ್ರಕಟಿಸಿದ ಕೇಂದ್ರ ಸರ್ಕಾರ
ನವದೆಹಲಿ, ಫೆಬ್ರವರಿ 15: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ದೇಶದ 'ಮ್ಯಾಪಿಂಗ್ ಪಾಲಿಸಿ'ಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ಸೋಮವಾರ ಪ್ರಕಟಿಸಿದೆ. ನಿರ್ದಿಷ್ಟವಾಗಿ ಭಾರತೀಯ ಕಂಪೆನಿಗಳಿಗೆ ಅನುಕೂಲಕರವಾಗುವಂತೆ ಅತ್ಮನಿರ್ಭರ ಭಾರತ್ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ನೀತಿಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.
'ಜಾಗತಿಕವಾಗಿ ಲಭ್ಯವಿರು ಸಿದ್ಧಮಾದರಿಗಳು ಭಾರತದಲ್ಲಿ ನಿರ್ಬಂಧಿತವಾಗಬೇಕಿಲ್ಲ. ಹೀಗಾಗಿ ಇದುವರೆಗೂ ನಿರ್ಬಂಧಕ್ಕೆ ಒಳಗಾಗುತ್ತಿದ್ದ ಭೂಪ್ರಾದೇಶಿಕ ದತ್ತಾಂಶಗಳು ಭಾರತದಲ್ಲಿಯೂ ಮುಕ್ತವಾಗಿ ಲಭ್ಯವಾಗಲಿವೆ' ಎಂದು ಸಚಿವಾಲಯ ಹೇಳಿಕೆ ನೀಡಿದೆ.
ದೇಶದ ಕಾರ್ಪೊರೇಷನ್ಗಳು ಮತ್ತು ಹೂಡಿಕೆದಾರರು ಇನ್ನು ಮುಂದೆ ನಿಬಂಧನೆಗಳಿಗೆ ಒಳಪಡುವುದಿಲ್ಲ ಮತ್ತು ಅವರು ಭಾರತದ ಭೂಪ್ರದೇಶದ ಒಳಗೆ ಡಿಜಿಟಲ್ ಜಿಯೋಸ್ಪೇಷಿಯಲ್ ದತ್ತಾಂಶ ಹಾಗೂ ನಕಾಶೆಗಳನ್ನು ಸಂಗ್ರಹಿಸುವ, ಸೃಷ್ಟಿಸುವ, ಸಿದ್ಧಪಡಿಸುವ, ಸಂಗ್ರಹಿಸುವ, ಪ್ರಕಟಿಸುವ, ಪ್ರಸಾರ ಮಾಡುವ ಹಾಗೂ ಪರಿಷ್ಕರಿಸುವ ಕಾರ್ಯಗಳಿಗೆ ಪೂರ್ವ ಮಾಹಿತಿ ಪಡೆಯುವ ಅಗತ್ಯವಿಲ್ಲ ಎಂದು ಅದು ತಿಳಿಸಿದೆ.

'ನಮ್ಮ ಸರ್ಕಾರವು ಡಿಜಿಟಲ್ ಇಂಡಿಯಾಕ್ಕೆ ಭಾರಿ ಉತ್ತೇಜನ ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ. ಜಿಯೋಸ್ಪೇಷಿಯಲ್ ದತ್ತಾಂಶಗಳ ಸ್ವಾಧೀನ ಮತ್ತು ಉತ್ಪಾದನೆಯ ನಿರ್ವಹಣಾ ನೀತಿಗಳಲ್ಲಿನ ಉದಾರೀಕರಣವು ನಮ್ಮ ಆತ್ಮನಿರ್ಭರ ಭಾರತ್ನ ಗುರಿಯಲ್ಲಿ ಬೃಹತ್ ಹೆಜ್ಜೆಯಾಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications