23 ರಾಜ್ಯಗಳಿಗೆ ಮುಂಗಡ ವಿಪತ್ತು ಪರಿಹಾರ ನಿಧಿ ನೀಡಲು ಕೇಂದ್ರ ಅನುಮೋದನೆ
ನವದೆಹಲಿ, ಅಕ್ಟೋಬರ್ 01: ರಾಜ್ಯ ವಿಪತ್ತು ಪರಿಹಾರ ನಿಧಿಯ (ಎಸ್ಡಿಆರ್ಎಫ್) ಎರಡನೇ ಕಂತನ್ನು 23 ರಾಜ್ಯಗಳಿಗೆ ಮುಂಗಡವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.
23 ರಾಜ್ಯಗಳಿಗೆ ಮುಂಗಡವಾಗಿ ಎರಡನೇ ಕಂತಿನ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ನೀಡಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ತಮ್ಮ ಎಸ್ಡಿಆರ್ಎಫ್ನಲ್ಲಿ ಸಾಕಷ್ಟು ಹಣ ಹೊಂದಿರಬೇಕೆಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜಿಸಿದ್ದು, ಅದರ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಪ್ರಕಾರ, ಐದು ರಾಜ್ಯಗಳಿಗೆ ಈಗಾಗಲೇ ಮುಂಚಿತವಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಎರಡನೇ ಕಂತಿನ 1599 ಕೋಟಿ ರೂ ಬಿಡುಗಡೆ ಮಾಡಿರುವುದಾಗಿ ತಿಳಿದುಬಂದಿದೆ.

ಕೇಂದ್ರ ಸರ್ಕಾರ ಸೆಪ್ಟೆಂಬರ್ 25ರಂದು ಈ ಸಂಬಂಧ ಆದೇಶ ಹೊರಡಿಸಿದ್ದು, ಎಸ್ಡಿಆರ್ಎಫ್ ಅಡಿಯಲ್ಲಿ ನೆರವು ನೀಡಲು ಮಾನದಂಡಗಳನ್ನು ಪರಿಷ್ಕರಿಸಿ ಕೊರೊನಾ ಸೋಂಕಿನಿಂದ ಮೃತಪಟ್ಟ ಸಂಬಂಧಿಗಳಿಗೆ ಪರಿಹಾರ ನೀಡುವ ಅವಕಾಶವನ್ನು ನೀಡಿದೆ.
ಜೂನ್ 30ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶಕ್ಕೆ ಅನುಸಾರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೆಪ್ಟೆಂಬರ್ 11ರಂದು ಹೊರಡಿಸಿದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಎಸ್ಡಿಆರ್ಎಫ್ ನಿಯಮಗಳಲ್ಲಿ ಅವಕಾಶ ನೀಡಲಾಗಿದೆ. ಇದರಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಪರಿಹಾರ ನೀಡುವುದು ಸೇರಿದೆ.
SDRF ಕೇಂದ್ರದ ಎರಡನೇ ಕಂತಿನ 7274 ಕೋಟಿ ರೂ ಹಣವನ್ನು ಮುಂಗಡವಾಗಿ 23 ರಾಜ್ಯಗಳಿಗೆ ಬಿಡುಗಡೆ ಮಾಡಲು ಅಮಿತ್ ಶಾ ಅನುಮೋದನೆ ನೀಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರಗಳು ಈಗ ತಮ್ಮ ಎಸ್ಡಿಆರ್ಎಫ್ನಲ್ಲಿ 2021-22ರ ಆರ್ಥಿಕ ವರ್ಷದಲ್ಲಿ 23,218.40 ಕೋಟಿ ರೂ ಮೊತ್ತವನ್ನು ಹೊಂದಿವೆ. SDRFನಲ್ಲಿ ಲಭ್ಯವಿರುವ ಆರಂಭಿಕ ಉಳಿಕೆ ಮೊತ್ತದ ಜೊತೆಗೆ ಕೋವಿಡ್ನಿಂದ ಮೃತಪಟ್ಟ ಸಂಬಂಧಿಗಳಿಗೆ ಪರಿಹಾರ ನೀಡಲು ಸೂಚಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications