Just in: ಮಂಕಿಪಾಕ್ಸ್, ಬಂದರು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ
ನವದೆಹಲಿ, ಜುಲೈ 19: ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಎಲ್ಲಾ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಾದ ಆರೋಗ್ಯ ತಪಾಸಣೆಯನ್ನು ನಡೆಸಲು ಕೇಂದ್ರ ಸರ್ಕಾರವು ಸೂಚಿಸಿದೆ.
ಕೇರಳದಲ್ಲಿ 2ನೇ ಮಂಕಿಪಾಕ್ಸ್ ಪ್ರಕರಣ ವರದಿಯಾದ ನಂತರ ಸರ್ಕಾರ ಈ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ಮತ್ತು ಬಂದರು ಆರೋಗ್ಯ ಅಧಿಕಾರಿಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳ ನಿರ್ದೇಶಕರ ಜೊತೆಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
"ಹೊರಗಿನಿಂದ ದೇಶಕ್ಕೆ ಮಂಕಿಪಾಕ್ಸ್ ಬರುವ ಅಪಾಯವನ್ನು ಕಡಿಮೆ ಮಾಡುವ ಕಾರಣದಿಂದ ವಿದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಕಟ್ಟುನಿಟ್ಟಾದ ಆರೋಗ್ಯ ತಪಾಸಣೆಯನ್ನು ನಡೆಸಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಆರೋಗ್ಯ ಇಲಾಖೆಯ ಮಂಕಿಪಾಕ್ಸ್ ನಿರ್ವಹಣೆಯ ಮಾರ್ಗಸೂಚಿಗಳ ಪ್ರಕಾರ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಲಾಗಿದೆ" ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಆರೋಗ್ಯ ತಪಾಸಣೆ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಅಂತರಾಷ್ಟ್ರೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿನ ಇತರ ಏಜೆನ್ಸಿಗಳ ಸಹಾಯ ಪಡೆಯಲು ತಿಳಿಸಲಾಗಿದೆ.
ಸೋಮವಾರ ಕೇರಳದ 31 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದಿದೆ. ಅವರಿಗೆ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಖಚಿತಪಡಿಸಿದೆ. ಕಳೆದ ವಾರ, ಯುಎಇಯಿಂದ ಕೇರಳಕ್ಕೆ ಮರಳಿದ್ದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿತ್ತು.
ಏಕಾಏಕಿ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಉಂಟಾಗಿದೆಯೇ? ಎಂದು ನಿರ್ಧರಿಸಲು ಜುಲೈ 21 ರಂದು ಮಂಕಿಪಾಕ್ಸ್ ಸಮಿತಿಯನ್ನು ಮರುಸಂಘಟಿಸುವುದಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ಜುಲೈ 14ರಂದು ಹೇಳಿದೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಇಲ್ಲಿಯವರೆಗೆ ಮಂಕಿಪಾಕ್ಸ್ ಬಾಧಿತವಾಗಿರುವ ಬಹುತೇಕ ಎಲ್ಲಾ ರೋಗಿಗಳು ಪುರುಷರು ಎಂದು WHO ಹೇಳಿದೆ.
ಮಂಕಿಪಾಕ್ಸ್ನ ಲಕ್ಷಣಗಳು
* ಮಂಕಿಪಾಕ್ಸ್ನ ಲಕ್ಷಣಗಳೆಂದರೆ ಅಧಿಕ ಜ್ವರ, ಊದಿಕೊಂಡ ದುಗ್ಧರಸ ಗ್ರಂಥಿಗಳು ಮತ್ತು ಚಿಕನ್ಪಾಕ್ಸ್ನಂತಹ ದದ್ದುಗಳನ್ನು ಒಳಗೊಂಡಿರುತ್ತವೆ.
* ಮೊದಲು 1958 ರಲ್ಲಿ ಈ ಕಾಯಿಲೆ ಮಂಗಗಳಲ್ಲಿ ಕಂಡುಬಂದಿತು, ಆದ್ದರಿಂದ ಈ ಹೆಸರು ಬಂದಿದೆ. ಇದು ಪ್ರಾಣಿಗಳಿಂದ ಮತ್ತು ಸಾಮಾನ್ಯವಾಗಿ ಮನುಷ್ಯರ ನಡುವೆ ನಿಕಟ ಸಂಪರ್ಕದ ಮೂಲಕ ಹರಡುತ್ತದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications