"ಭಾರತೀಯ ರೂಪಾಂತರ" ಪದದ ಉಲ್ಲೇಖ ತೆಗೆದುಹಾಕುವಂತೆ ಸಾಮಾಜಿಕ ಜಾಲತಾಣಗಳಿಗೆ ಸೂಚನೆ
ನವದೆಹಲಿ, ಮೇ 22: ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ "ಭಾರತೀಯ ರೂಪಾಂತರ" ಪದದ ಉಲ್ಲೇಖವಿರುವ ವರದಿ, ವಿಷಯಗಳನ್ನು ತೆಗೆದುಹಾಕುವಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಶುಕ್ರವಾರ ಪತ್ರ ಬರೆದಿದೆ.
ಭಾರತದಲ್ಲಿ ಕಳೆದ ವರ್ಷ ಪತ್ತೆಯಾಗಿರುವ B.1.617 ರೂಪಾಂತರವನ್ನು ಜಾಗತಿಕ ಕಾಳಜಿಯ ರೂಪಾಂತರ ಎಂದು ವರ್ಗೀಕರಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮೇ 11ರಂದು ತಿಳಿಸಿತ್ತು. ಅದರ ಮಾರನೇ ದಿನವೇ, ಯಾವುದೇ ಆಧಾರವಿಲ್ಲದೇ "ಭಾರತೀಯ ರೂಪಾಂತರ" ಎಂಬ ಪದವನ್ನು ಮಾಧ್ಯಮ ವರದಿಗಳಲ್ಲಿ ಬಳಸಲಾಗುತ್ತಿದೆ. ಇದು ಕೇವಲ ಒಂದು ರೂಪಾಂತರ ಎಂದು ವಿಶ್ವ ಸಂಸ್ಥೆ ಹೇಳಿದೆ ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿತ್ತು.

ಶುಕ್ರವಾರ ಮತ್ತೆ ಈ ಕುರಿತು ಸಾಮಾಜಿಕ ಜಾಲತಾಣಗಳಿಗೆ ಮಾಹಿತಿ ತಂತ್ರಜ್ಞಾನ ಸಚಿವಾಲಯ ಪತ್ರ ಬರೆದಿದ್ದು, ಕೊರೊನಾ ಭಾರತೀಯ ರೂಪಾಂತರ ಎಂಬ ಪದವನ್ನು ಹೊಂದಿರುವ ಎಲ್ಲಾ ವರದಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ.
"ಇದು ಶುದ್ಧ ಸುಳ್ಳು. ವಿಶ್ವ ಆರೋಗ್ಯ ಸಂಸ್ಥೆ ಯಾವುದೇ ನಿರ್ದಿಷ್ಟ ರೂಪಾಂತರವನ್ನು ವೈಜ್ಞಾನಿಕವಾಗಿ ಹೆಸರಿಸಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ತನ್ನ ಯಾವುದೇ ವರದಿಯಲ್ಲಿ B.1.617 ರೂಪಾಂತರದೊಂದಿಗೆ ಭಾರತೀಯ ರೂಪಾಂತರ ಎಂಬ ಪದವನ್ನು ಸಂಯೋಜಿಸಿಲ್ಲ" ಎಂದು ಪತ್ರದಲ್ಲಿ ತಿಳಿಸಿದೆ. ಭಾರತೀಯ ರೂಪಾಂತರ ಎಂಬ ಪದದ ಉಲ್ಲೇಖ ತಪ್ಪು ಮಾಹಿತಿಯನ್ನು ಹರಡುತ್ತದೆ ಹಾಗೂ ದೇಶದ ಚಿತ್ರಣಕ್ಕೆ ಧಕ್ಕೆಯುಂಟು ಮಾಡುತ್ತದೆ ಎಂಬುದರ ಸ್ಪಷ್ಟ ಸಂದೇಶ ನೀಡಲು ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಶ್ವದಾದ್ಯಂತ, ಕೊರೊನಾ ರೂಪಾಂತರಗಳನ್ನು ವೈದ್ಯರು ಹಾಗೂ ಆರೋಗ್ಯ ತಜ್ಞರು ಗುರುತಿಸುತ್ತಾರೆ ಹಾಗೂ ಆ ಕುರಿತು ಉಲ್ಲೇಖಿಸುತ್ತಾರೆ. ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್ ರೂಪಾಂತರಗಳನ್ನು ತಜ್ಞರು ಗುರುತಿಸಿದ್ದಾರೆ.
ಭಾರತೀಯ ರೂಪಾಂತರ ಎಂಬ ಪದ ಹೊಂದಿರುವ ಎಲ್ಲಾ ವರದಿಗಳನ್ನು ತೆಗೆದುಹಾಕುವುದು ಕಷ್ಟ. ಅಂತಹ ನೂರಾರು ಪೋಸ್ಟ್ಗಳು ಇರುತ್ತವೆ ಎಂದು ಸಾಮಾಜಿಕ ಜಾಲತಾಣದ ನಿರ್ವಾಹಕರೊಬ್ಬರು ತಿಳಿಸಿದ್ದಾರೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ












Click it and Unblock the Notifications