ಸಿಬಿಐ, ಇಡಿ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಿಸಿ ಕೇಂದ್ರದಿಂದ ಸುಗ್ರೀವಾಜ್ಞೆ
ನವದೆಹಲಿ, ನವೆಂಬರ್ 14: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಪ್ರಸ್ತುತ ಕೇಂದ್ರೀಯ ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರ ಅವಧಿ ಎರಡು ವರ್ಷ ಆಗಿದೆ.
ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡುವ ಎರಡೂ ಸುಗ್ರೀವಾಜ್ಞೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಉನ್ನತ ಏಜೆನ್ಸಿಗಳ ಮುಖ್ಯಸ್ಥರು ಎರಡು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಮೂರು ವರ್ಷಗಳವರೆಗೆ ಪ್ರತಿ ವರ್ಷ ವಿಸ್ತರಣೆಗಳನ್ನು ನೀಡಬಹುದಾಗಿದೆ. "ಸಂಸತ್ತು ಅಧಿವೇಶನ ಇರುವಾಗ ಮತ್ತು ಅಧ್ಯಕ್ಷರು ಕೂಡಲೇ ಕ್ರಮಕೈಗೊಳ್ಳಲು ಅಗತ್ಯವಾದ ಸಂದರ್ಭಗಳು ಅಸ್ತಿತ್ವದಲ್ಲಿದೆ. ಅಸಾಧಾರಣ ಸಂದರ್ಭದಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಲು ಅವಕಾಶ ಇದೆ," ಎಂದು ಸುಗ್ರೀವಾಜ್ಞೆ ಹೇಳುತ್ತದೆ.
ಇತ್ತೀಚೆಗೆ ನ್ಯಾಯಮೂರ್ತಿ ಎಲ್ಎನ್ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಈ ಪ್ರಕರಣದಲ್ಲಿ ತೀರ್ಪುನ್ನು ನೀಡಿದೆ. 2018 ರಲ್ಲಿ ಅಧಿಕಾರ ವಹಿಸಿಕೊಂಡ ಜಾರಿ ನಿರ್ದೇಶನಾಲಯ ಮುಖ್ಯಸ್ಥ ಎಸ್ಕೆ ಮಿಶ್ರಾ ಅವರ ಅಧಿಕಾರ ಅವಧಿ ವಿಸ್ತರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ಎಲ್ಎನ್ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ತೀರ್ಪನ್ನು ನೀಡಿದೆ. "ಅಪರೂಪದ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಅಧಿಕಾರವಾಧಿಯನ್ನು ವಿಸ್ತರಣೆ ಮಾಡಬಹುದು," ಎಂದು ಸುಪ್ರೀಂ ಕೋರ್ಟ್ ಪೀಠವು ಎಸ್ಕೆ ಮಿಶ್ರಾ ಅವರ ಅಧಿಕಾರ ಅವಧಿ ವಿಸ್ತರಣೆಗೆ ಸಂಭಂಧಿಸಿ ತೀರ್ಪಿನಲ್ಲಿ ಹೇಳಿದೆ.

ನವೆಂಬರ್ 17 ರಂದು ಜಾರಿ ನಿರ್ದೇಶಾನಾಲಯದ ಮುಖ್ಯಸ್ಥರ ಅಧಿಕಾರಾವಧಿ ಕೊನೆಯಾಗಲಿದ್ದು ಈ ನಡುವೆ ಅಧಿಕಾರವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. ಈ ಬೆನ್ನಲ್ಲೇ ಈ ಸುಗ್ರೀವಾಜ್ಞೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರ ಅವಧಿ ವಿಸ್ತರಣೆಯ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ನಡುವೆ ಹಲವಾರು ಮಂದಿ ಈ ನಿರ್ಧಾರವನ್ನು ಟೀಕೆ ಮಾಡಿದ್ದಾರೆ. ಈ ಹಿಂದೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಉನ್ನತ ನಾಯಕರು ಮತ್ತು ಮಾಜಿ ಸಚಿವರನ್ನು ಗುರಿಯಾಗಿಸಿಕೊಂಡಿದೆ. ವಿರೋಧ ಪಕ್ಷದ ಉನ್ನತ ನಾಯಕರು ಮತ್ತು ಮಾಜಿ ಸಚಿವರ ವಿರುದ್ಧವಾಗಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರಗಳು ಬಳಸುತ್ತಿದೆ ಎಂದು ಆರೋಪ ಮಾಡಿದೆ. ಕಂದಾಯ ಇಲಾಖೆ, ಹಣಕಾಸು ಸಚಿವಾಲಯದ ಅಡಿಯಲ್ಲಿನ ವಿಶೇಷ ಹಣಕಾಸು ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ (ಇಡಿ) ಆಗಿದೆ. ವಿದೇಶಿ ವಿನಿಮಯ ಕಾನೂನುಗಳು ಮತ್ತು ನಿಯಮಗಳು ಮತ್ತು ಮನಿ ಲಾಂಡರಿಂಗ್ಗೆ ಸಂಬಂಧಿಸಿದ ಪ್ರಕರಣಗಳನ್ನು ಜಾರಿ ನಿರ್ದೇಶನಾಲಯವು ತನಿಖೆ ಮಾಡುತ್ತದೆ.
ಸಿಬಿಐ, ಇಡಿ ಮುಖ್ಯಸ್ಥರ ಅಧಿಕಾರವಧಿ ವಿಸ್ತರಣೆಗೆ ಖಂಡನೆ
ಕೇಂದ್ರ ಸರ್ಕಾರವು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವುದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದೆ. "ಇದು ಆಘಾತಕಾರಿ ಮತ್ತು ಅಸಹ್ಯಕರ ಘಟನೆಯಾಗಿದೆ. ಹಾಗೆಯೇ ಸಿಬಿಐ ಹಾಗೂ ಇಡಿಯ ಸ್ವಾತಂತ್ಯ್ರವನ್ನು ಮತ್ತಷ್ಟು ಹಾಳು ಮಾಡುವ ಯತ್ನ ಇದಾಗಿದೆ," ಎಂದು ವಿರೋಧ ಪಕ್ಷಗಳು ದೂರಿದೆ.
"ಕೇಂದ್ರ ಸರ್ಕಾರವು ತಮ್ಮ ಅನುಕೂಲಕ್ಕಾಗಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಿ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಮುಂದೆ ಪ್ರಧಾನಿ ಅಧಿಕಾರ ಅವಧಿಯನ್ನು ವಿಸ್ತರಣೆ ಮಾಡಲು ಹೊಸ ಕಾನೂನು ತರುತ್ತಾರಾ?," ಎಂದು ಕಾಂಗ್ರೆಸ್ ವಕ್ತಾರ ಶ್ರೀವತ್ಸ ಪ್ರಶ್ನಿಸಿದ್ದಾರೆ.
"ಮುಂದೆ ಈ ಬಿಜೆಪಿ ಸರ್ಕಾರ ಪ್ರಧಾನ ಮಂತ್ರಿಯ ಅಧಿಕಾರ ಅವಧಿಯನ್ನು ಹತ್ತು ವರ್ಷಗಳಿಗೆ ಏರಿಕೆ ಮಾಡಬಹುದು. ಪ್ರಜಾಪ್ರಭುತ್ವ ಭಾರತಕ್ಕೆ ಮುಖ್ಯವಾಗಿರುವ ಎಲ್ಲಾ ಸಂಸ್ಥೆಗಳನ್ನು ಮೋದಿಯು ನಿರ್ಲಜ್ಜವಾಗಿ ಮುಗಿಸುತ್ತಾರೆ. ಬಿಜೆಪಿ, ಆರ್ಎಸ್ಎಸ್, ಇಸಿ, ಸಿಬಿಐ, ಐಟಿ, ಇಡಿಯ ಮಹಾಘಟಬಂಧನ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಾರೆ," ಎಂದು ದೂರಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications