ಮೋದಿ ಮೌನ, ಸಚಿವರೂ ಮೌನ. ಬಾಯಿ ಬಿಟ್ಟಿದ್ದು ವಿಕೆ ಸಿಂಗ್ ಮಾತ್ರ
ನವದೆಹಲಿ, ಏಪ್ರಿಲ್ 13: ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಮತ್ತು ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಪ್ರಕರಣಗಳು ಜಾಗತಿಕ ಸದ್ದು ಮಾಡುತ್ತಿವೆ. ಎರಡೂ ಕಡೆಗಳಲ್ಲಿ ಆಳುವ ಪಕ್ಷದ ವಿರುದ್ಧ ಸರಣಿ ಆಕ್ರೋಶ ವ್ಯಕ್ತವಾಗಿದೆ. ಅಂದ ಹಾಗೆ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಯೋಗಿ ಆದಿತ್ಯನಾಥ್ ಸರಕಾರವಿದ್ದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಅತ್ಯಾಚಾರ ಪ್ರಕರಣ ಸಂಬಂಧ ನಿಧಾನವಾಗಿಯಾದರೂ ಪ್ರತಿಕ್ರಿಯೆ ನೀಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಕೇಂದ್ರ ಸಚಿವರು ಸಂಸದರು ಉತ್ತರ ಮಾತ್ರ ಒಂದೇ.. ಮೌನ.. ಮೌನ.. ಮೌನ.
ಹಾಗೆ ನೋಡಿದರೆ 2014ರ ಚುನಾವಣೆಗೂ ಮುನ್ನ, "ಬಹುತ್ ಹುವಾ ನಾರಿ ಪರ್ ವಾರ್, ಆಬ್ಕಿ ಬಾರ್ ಮೋದಿ ಸರಕಾರ (ಮಹಿಳೆಯರ ಮೇಲಿನ ದಾಳಿ ಸಾಕು, ಈ ಬಾರಿ ಮೋದಿ ಸರಕಾರ)," ಎನ್ನುವ ಘೋಷಣೆಯನ್ನು ಬಿಜೆಪಿ ಮಾಡಿತ್ತು.

ಜತೆಗೆ ಪ್ರಧಾನಿ ನರೇಂದ್ರ ಮೋದಿ ಸರಕಾರದ ಪ್ರಮುಖ ಅಭಿಯಾನಗಳಲ್ಲಿ, 'ಬೇಟಿ ಬಚಾವೋ, ಬೇಟಿ ಪಡಾವೋ' ಕೂಡ ಒಂದು. ಆದರೆ ಸದಾ ನಾರಿ ನಾರಿ ಎನ್ನುವ ಪ್ರಧಾನಿ ಮಾತ್ರ ಈಗ ಪರಾರಿಯಾಗಿದ್ದಾರೆ. ಅವರು ಸಂಪುಟದ ಸಹೋದ್ಯೋಗಿಗಳೂ ಈ ಬಗ್ಗೆ ಬಾಯಿ ಬಿಡುತ್ತಿಲ್ಲ.
ಈ ಬಗ್ಗೆ ಮಾತನಾಡಿದವರು ವಿದೇಶಾಂಗ ಖಾತೆ ಸಹಾಯಕ ಸಚಿವರಾದ ವಿ.ಕೆ. ಸಿಂಗ್ ಮಾತ್ರ. "ಮನುಷ್ಯರಾಗಿ ನಾವು ವಿಫಲವಾಗಿದ್ದೇವೆ. ಆದರೆ ಆಕೆಗೆ ನ್ಯಾಯವನ್ನು ನಿರಾಕರಿಸುವುದಿಲ್ಲ," ಎಂದಿದ್ದಾರೆ.
ಆದರೆ ಸಮಾಜಿಕ ಜಾಲತಾಣಗಳಲ್ಲೆಲ್ಲಾ ಆಗಾಗ ಅಬ್ಬರಿಸುವ ಮೋದಿ ಸರಕಾರದ ಸಂಸದರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಅವರ ಟ್ಟಿಟ್ಟರ್, ಫೇಸ್ಬುಕ್ ಖಾತೆಗಳಲ್ಲಿ ಏನೇನೋ ಸಂದೇಶಗಳಿವೆ. ಆದರೆ ಸಂತಾಪ ಸಂದೇಶ, ನ್ಯಾಯಕ್ಕಾಗಿ ಬೇಡಿಕೆ ಸಂದೇಶಗಳು ಮಾತ್ರ ಕಾಣಿಸುತ್ತಿಲ್ಲ.
ಹೀಗಾಗಿ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಲ್ಲೂ ಮೋದಿ ಮೌನದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications