ಕೊಲೆಗಡುಕ ಪೂಜಾರಿಯಾದ ಕೇಂದ್ರ ಸರ್ಕಾರ: ಕಾಂಗ್ರೆಸ್ ಟೀಕೆ
ನವದೆಹಲಿ, ಜುಲೈ 8: ಮಾಂಸ ವ್ಯಾಪಾರಿಯೊಬ್ಬನ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಎಂಟು ಮಂದಿಗೆ ಹೂವಿನ ಹಾರ ಹಾಕಿ ಅಭಿನಂದಿಸಿದ್ದ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರನ್ನು ಟೀಕಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವು ಕೊಲೆಗಡುಕರನ್ನು ಆರಾಧಿಸುವ ಪೂಜಾರಿಯಾಗಿ ಬದಲಾಗಿದೆ ಎಂದು ಹೇಳಿದೆ.
ಎಂಟು ಆರೋಪಿಗಳಿಗೆ ಜಾಮೀನು ಸಿಕ್ಕಾಗ ಅವರನ್ನು ಜಯಂತ್ ಸಿನ್ಹಾ ಅವರು ಹೂವಿನ ಹಾರ ಹಾಕಿ ಅಭಿನಂದಿಸಿದ್ದರು. ನೀವು ತಪ್ಪಾಗಿ ತಿಳಿದಿದ್ದೀರಿ ಮೋದಿಜಿ. ನಿಮ್ಮ ಸರ್ಕಾರ ಕೊಲೆಗಡುಕ-ಪೂಜಾರಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ನ ಅನೇಕ ಪ್ರಮುಖ ಮುಖಂಡರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಶನಿವಾರ ಭಾಷಣವೊಂದರಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಒಂದು 'ಬೇಲ್ ಗಾಡಿ' ಎಂದು ಲೇವಡಿ ಮಾಡಿದ್ದರು.
8 accused convicted for lynching are garlanded by Jayant Sinha when granted bail .
— Kapil Sibal (@KapilSibal) 8 July 2018
You got it wrong Modiji .
They say your Government has become :
Lynch-Pujari
ಅದಕ್ಕೆ ಪ್ರತಿಯಾಗಿ ಕಪಿಲ್ ಸಿಬಲ್ ಅವರು ಈ ಟ್ವೀಟ್ ಮಾಡಿದ್ದಾರೆ.
ಜಾರ್ಖಂಡ್ನಲ್ಲಿ ಕಳೆದ ವರ್ಷ ನಡೆದ ಮಾಂಸ ವ್ಯಾಪಾರಿಯೊಬ್ಬನ ಹತ್ಯೆ ಪ್ರಕರಣದಲ್ಲಿ ರಾಮಗಡದ ನ್ಯಾಯಾಲಯವೊಂದು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಅದರಲ್ಲಿ ಜಾಮೀನು ಪಡೆದಿದ್ದ ಎಂಟು ಮಂದಿಗೆ ಜಯಂತ್ ಸಿನ್ಹಾ ಅವರು ಅಭಿನಂದಿಸಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಗನ ಈ ನಡವಳಿಕೆಗೆ ಜಯಂತ್ ಅವರ ತಂದೆ ಯಶ್ವಂತ್ ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿಂದೆ ನಾನು 'ಲಾಯಕ್ ಮಗ'ನ 'ನಾಲಾಯಕ್ ಅಪ್ಪ'ನಾಗಿದ್ದೆ. ಆದರೆ ಈಗ ಪಾತ್ರಗಳು ಬದಲಾಗಿವೆ. ನನ್ನ ಮಗನ ನಡವಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದರು.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications