ಆಧಾರ್ ಸಂಖ್ಯೆ ಮತ್ತು ಡ್ರೈವಿಂಗ್ ಲೈಸೆನ್ಸ್ ಜೋಡಣೆಗೆ ಕೇಂದ್ರದ ಚಿಂತನೆ
ನವದೆಹಲಿ, ಜೂನ್ 12: ವಾಹನ ಚಾಲನಾ ಪರವಾನಗಿ ಮತ್ತು ಆಧಾರ್ ಕಾರ್ಡ್ ನಡುವೆ ಜೋಡಣೆ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಬ್ಯಾಂಕ್ ಖಾತೆ, ಮೊಬೈಲ್ ನಂಬರ್, ಪಾನ್ ಕಾರ್ಡ್ ಮುಂತಾದವುಗಳಿಗೆ ಆಧಾರ್ ಲಿಂಕ್ ಕಡ್ಡಾಯಗೊಳಿಸುತ್ತಿರುವ ಕ್ರಮದ ಬಗ್ಗೆ ಚರ್ಚೆಗಳು ತೀವ್ರವಾಗುತ್ತಿರುವ ವೇಳೆಯಲ್ಲಿಯೇ ಮತ್ತೊಂದು ಕ್ರಮಕ್ಕೆ ಕೇಂದ್ರ ಮುಂದಾಗಿದೆ.
ವಾಹನ ಚಾಲನಾ ಪರವಾನಗಿಯೊಂದಿಗೆ ಆಧಾರ್ ಸಂಖ್ಯೆಯನ್ನು ಸಂಪರ್ಕಿಸುವ ಸಂಬಂಧ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ವಾಹನ ಪರವಾನಗಿ ಸಂಖ್ಯೆಯೊಂದಿಗೆ ಆಧಾರ್ ಕಾರ್ಡ್ ಸಂಖ್ಯೆ ಸಂಪರ್ಕಿಸುವುದರಿಂದ ವಾಹನ ಅಪಘಾತ ಪ್ರಕರಣಗಳನ್ನು ನಿರ್ವಹಿಸಲು ನೆರವಾಗಲಿದೆ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
I am in conversation with Union Minister Nitin Gadkari to link Aadhaar card with License, so that if a drunk driver escapes from one state to another by killing people, he would be caught. A person can change name not not his/her finger prints: Union Minister Ravi Shankar Prasad pic.twitter.com/uwD7g3G7e4
— ANI (@ANI) 12 June 2018
ಒಂದು ರಾಜ್ಯದಲ್ಲಿ ಕುಡಿದು ವಾಹನ ಅಪಘಾತ ಮಾಡಿ ಜನರನ್ನು ಕೊಂದ ವ್ಯಕ್ತಿಯು ಇನ್ನೊಂದು ರಾಜ್ಯಕ್ಕೆ ಪರಾರಿಯಾದ ನಿದರ್ಶನಗಳು ಸಾಕಷ್ಟಿವೆ. ಇಂತಹ ಪ್ರಕರಣಗಳಲ್ಲಿ ಆಧಾರ್ ಮತ್ತು ಲೈಸೆನ್ಸ್ ನಡುವಣ ಸಂಪರ್ಕ ಆರೋಪಿಯನ್ನು ಬಂಧಿಸಲು ನೆರವಾಗುತ್ತದೆ.
ಒಬ್ಬ ವ್ಯಕ್ತಿಯು ತನ್ನ ಹೆಸರನ್ನು ಬದಲಿಸಿಕೊಳ್ಳಬಹುದು. ಆದರೆ ಆತ/ಆಕೆ ತನ್ನ ಬೆರಳಚ್ಚನ್ನು ಬದಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications