ತೈಲ ಬೆಲೆ ಇಳಿಸಲು ಕೇಂದ್ರ ಪ್ರಯತ್ನ ನಡೆಸುತ್ತಿದೆ: ರಾಜನಾಥ್ ಸಿಂಗ್
ಭೋಪಾಲ್, ಮೇ 31: ಪ್ರತಿದಿನವೂ ತೈಲ ದರ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದಾರೆ. ಆದರೆ, ಜನರು ಗಾಬರಿ ಪಡುವುದು ಬೇಡ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಹೆಚ್ಚಳವಾಗಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ದರಲ್ಲಿ ಹೆಚ್ಚಳವಾಗುತ್ತಿದೆ. ಆದರೆ, ಜಾಗತಿಕ ತೈಲ ಬೆಲೆ ಏರಿಕೆಯು ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿಲ್ಲ ಎಂದಿದ್ದಾರೆ.
ಭವಿಷ್ಯದ ಅತಿ ದೊಡ್ಡ ಗೆಲುವು ಸಾಧಿಸುತ್ತೇವೆ: ರಾಜನಾಥ್ ಸಿಂಗ್
ಬೆಲೆ ಹೆಚ್ಚಳಕ್ಕೆ ಕಾರಣವಾಗಿರುವ ಅಂಶಗಳನ್ನು ಸರಿಪಡಿಸಿ, ಜನಸಾಮಾನ್ಯರಿಗೆ ಆಗಿರುವ ಹೊರೆಯನ್ನು ತಗ್ಗಿಸಲು ಪ್ರಯತ್ನ ನಡೆಸಿದೆ. ಹೀಗಾಗಿ ಜನರು ಕಂಗೆಡುವ ಅಗತ್ಯವಿಲ್ಲ ಎಂದರು.
ನವದೆಹಲಿಯಲ್ಲಿ ಪೆಟ್ರೋಲ್ ದರವು ಲೀಟರ್ಗೆ 78.35 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್ಗೆ 69.25ಕ್ಕೆ ತಲುಪಿದೆ.
16 ದಿನಗಳ ಸತತ ಬೆಲೆ ಏರಿಕೆ ಬಳಿಕ ಬುಧವಾರ ಪೆಟ್ರೋಲ್ ದರದಲ್ಲಿ ಕೇವಲ ಒಂದು ಪೈಸೆ ಇಳಿಕೆಯಾಗಿತ್ತು. ಇದು ರಾಷ್ಟ್ರಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು.