'ಉದ್ದೇಶಪೂರ್ವಕ ಕೃತ್ಯ': ಟ್ವಿಟ್ಟರ್ಗೆ ಕೇಂದ್ರ ಸರ್ಕಾರ ನೋಟಿಸ್
ನವದೆಹಲಿ, ನವೆಂಬರ್ 11: ಲೇಹ್ ಪ್ರದೇಶವನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲಾಗಿ ಜಮ್ಮು ಮತ್ತು ಕಾಶ್ಮೀರದ ಭಾಗ ಎಂದು ತೋರಿಸಿರುವ ಟ್ವಿಟ್ಟರ್ಗೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ವಿವರಣೆ ಕೇಳಿರುವ ವಿದ್ಯುನ್ಮಾನ ಮತ್ತು ಐಟಿ ಸಚಿವಾಲಯ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಅಗೌರವಿಸಿದ್ದಕ್ಕಾಗಿ ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿದೆ.
ಟ್ವಿಟ್ಟರ್ನ ಜಾಗತಿಕ ಉಪಾಧ್ಯಕ್ಷರಿಗೆ ಈ ನೋಟಿಸ್ ರವಾನಿಸಲಾಗಿದೆ. ಟ್ವಿಟ್ಟರ್ನ ಈ ಪ್ರಮಾದವು ಭಾರತೀಯ ಸಂಸತ್ನ ಸಾರ್ವಭೌಮತೆಯ ಸಂಕಲ್ಪವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವ ಕೃತ್ಯ ಎಂದು ಅದರಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಲಡಾಖ್ ಅನ್ನು ಭಾರತದ ಕೇಂದ್ರಾಡಳಿತ ಪ್ರದೇಶ ಎಂದು ವಿಭಜಿಸಿದ್ದ ಸರ್ಕಾರ ಲೇಹ್ಅನ್ನು ಅದರ ಕೇಂದ್ರ ಕಚೇರಿಯನ್ನಾಗಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟ್ವಿಟ್ಟರ್ ವಕ್ತಾರ, ಭಾರತ ಸರ್ಕಾರ ಹಾಗೂ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಭಾಗಿತ್ವಕ್ಕೆ ಟ್ವಿಟ್ಟರ್ ಬದ್ಧವಾಗಿದೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಭೌಗೋಳಿಕ ಪ್ರದೇಶವನ್ನು ತೋರಿಸುವ ವಿಚಾರದಲ್ಲಿ ಟ್ವಿಟ್ಟರ್ ಪದೇ ಪದೇ ಯಡವಟ್ಟುಗಳನ್ನು ಮಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಲೇಹ್ ಅನ್ನು ಚೀನಾದ ಭಾಗ ಎಂದು ತೋರಿಸುವ ಮೂಲಕ ಇತ್ತೀಚೆಗೆ ಪ್ರಮಾದ ಎಸಗಿತ್ತು. ತೀವ್ರ ಆಕ್ಷೇಪದ ಬಳಿಕ ಟ್ವಿಟ್ಟರ್ ಅದನ್ನು ಸರಿಪಡಿಸಿತ್ತು. ಆದರೆ ಲೇಹ್ ಅನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶದ ಭಾಗ ಎಂದು ತೋರಿಸುವಂತೆ ಸರಿಪಡಿಸಿಲ್ಲ. ಬದಲಾಗಿ ಅದನ್ನು ಜಮ್ಮು ಮತ್ತು ಕಾಶ್ಮೀರದ ಭಾಗ ಎಂದು ತೋರಿಸುತ್ತಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications