ಏರ್ ಇಂಡಿಯಾದ ಸಂಪೂರ್ಣ ಮಾರಾಟಕ್ಕೆ ಮುಂದಾದ ಸರ್ಕಾರ
ನವದೆಹಲಿ, ಜೂನ್ 12: ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಹರಾಜಿನ ಪ್ರಯತ್ನದಲ್ಲಿ ಹಿನ್ನಡೆ ಅನುಭವಿಸಿರುವ ಕೇಂದ್ರ ಸರ್ಕಾರ, ಈಗ ಅದರ ಸಂಪೂರ್ಣ ಶೇ 100ರಷ್ಟು ಷೇರುಗಳ ಮಾರಾಟಕ್ಕೆ ತೀರ್ಮಾನಿಸಿದೆ.
ಸರ್ಕಾರವು ಏರ್ ಇಂಡಿಯಾದಲ್ಲಿ ಶೆ 24ರಷ್ಟು ಬಂಡವಾಳವನ್ನು ಉಳಿಸಿಕೊಂಡು ಉಳಿದ ಶೇ 76ರಷ್ಟನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿತ್ತು.
ಈ ಸಂಬಂಧ ಎರಡು ಹಂತದ ಬಿಡ್ ಕರೆಯಲಾಗಿತ್ತು. ಮೊದಲ ಹಂತದಲ್ಲಿ ಏರ್ ಇಂಡಿಯಾದ ಬಿಡ್ಡಿಂಗ್ಗೆ ಆಸಕ್ತಿ ವ್ಯಕ್ತಪಡಿಸುವುದು. ಎರಡನೆಯ ಹಂತದಲ್ಲಿ ಆಯ್ದ ಆಸಕ್ತರನ್ನು ಬಿಡ್ಡಿಂಗ್ಗೆ ಕರೆಯುವುದು ಎಂದು ಸರ್ಕಾರ ತೀರ್ಮಾನಿಸಿತ್ತು.

ಆದರೆ, ಮೊದಲ ಹಂತದಲ್ಲಿಯೇ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿತ್ತು. ಯಾವ ಸಂಸ್ಥೆಯೂ ಏರ್ ಇಂಡಿಯಾದ ಬಿಡ್ನಲ್ಲಿ ಭಾಗವಹಿಸಲು ಆಸಕ್ತಿ ತೋರಿಸಿರಲಿಲ್ಲ.,
ಹೀಗಾಗಿ ನಿಯಮಾವಳಿಗಳನ್ನು ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ಮುಂದಾಗಿರುವ ಸರ್ಕಾರ, ಶೇ 24ರ ಬಂಡವಾಳವನ್ನೂ ಬಿಟ್ಟು ಸಂಪೂರ್ಣವಾಗಿ ಸಂಸ್ಥೆಯನ್ನು ಮಾರಾಟ ಮಾಡಲು ಉದ್ದೇಶಿಸಿದೆ.
ಆರಂಭದಲ್ಲಿ ಮಾಡಿದ ಕೆಲವು ಪ್ರಯತ್ನಗಳು ಸಫಲವಾಗಲಿಲ್ಲ. ಯಾವ ಖರೀದಿದಾರರೂ ಮುಂದೆ ಬರಲಿಲ್ಲ. ಹೀಗಾಗಿ ಬೇರೆ ವಿಭಿನ್ನ ಪ್ರಯತ್ನವನ್ನು ಮಾಡಬೇಕಿದೆ. ಸರ್ಕಾರ ಶೇ 24ರಷ್ಟು ಬಂಡವಾಳವನ್ನು ಹೊಂದಿರಬೇಕು ಎಂಬ ನಿರ್ದಿಷ್ಟ ನಿಯಮವೇನೂ ಇಲ್ಲ. ಅದರ ಕುರಿತು ಪುನರ್ ಪರಿಶೀಲನೆ ಮಾಡಬಹುದು ಎಂದು ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications